ಗುಡ್ಡ ಕುಸಿತದ ಭೀತಿ; ಅಪಾಯಕ್ಕೆ ಮೊದಲು ಬೇಕಿದೆ ಕ್ರಮ


Team Udayavani, Jan 19, 2021, 2:00 AM IST

ಗುಡ್ಡ ಕುಸಿತದ ಭೀತಿ; ಅಪಾಯಕ್ಕೆ ಮೊದಲು ಬೇಕಿದೆ ಕ್ರಮ

ಬಂಟ್ವಾಳ: ಹಲವು ಕಡೆ ಗುಡ್ಡ ಕುಸಿತದ ಘಟನೆಗಳು ನಡೆದು ಜೀವ ಹಾನಿ, ಆಸ್ತಿಪಾಸ್ತಿ ಹಾನಿಯ ಘಟನೆಗಳು ನಮ್ಮ ಕಣ್ಣ ಮುಂದಿದೆ. ಕೆಲವೊಂದಕ್ಕೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದೆ ಹಾಗಾಗುತ್ತದೆ. ಬಂಟ್ವಾಳ ಪುರಸಭೆ ವ್ಯಾಪ್ತಿಯ ಗೂಡಿನಬಳಿಯಲ್ಲೂ ಇಂತಹ ಗುಡ್ಡವೊಂದು ಅಪಾಯದ ಸ್ಥಿತಿಯ ಲ್ಲಿದ್ದು, ಸಂಬಂಧಪಟ್ಟವರು ಈಗಲೇ ಎಚ್ಚೆತ್ತು ಕೊಳ್ಳಬೇಕಿದೆ.

ಗೂಡಿನಬಳಿಯ ಈ ಪ್ರದೇಶದಲ್ಲಿ ಗುಡ್ಡ ಕುಸಿತ ಉಂಟಾದಲ್ಲಿ ಸ್ಥಳೀಯ ಮನೆಗಳಿಗೆ ಹಾನಿಯಾಗುವ ಜತೆಗೆ ರಸ್ತೆ ಸಂಪರ್ಕವೂ ಕಡಿತಗೊಳ್ಳುತ್ತದೆ. ಜತೆಗೆ ಪುರಸಭೆ ಹಲವು ವಾರ್ಡ್‌ಗಳ ನೂರಾರು ಮನೆಗಳಿಗೆ ನೀರಿನ ಸಂಪರ್ಕವೂ ಕಡಿತಗೊಳ್ಳುತ್ತದೆ. ಹೀಗಾಗಿ ಅಪಾಯ ಸಂಭವಿಸುವ ಮೊದಲು ಬೃಹತ್‌ ತಡೆಗೋಡೆ ನಿರ್ಮಾಣದ ಅಗತ್ಯವಿದೆ.

ಗುರುಪುರ ಘಟನೆ ನೆನಪು :

ಗೂಡಿನಬಳಿಯ ಅಪಾಯದ ಸ್ಥಿತಿ ಕಳೆದ ಮಳೆಗಾಲದಲ್ಲಿ ಗುರುಪುರ ಮಠದಗುಡ್ಡೆ (ಬಂಗ್ಲೆಗುಡ್ಡೆ)ಯಲ್ಲಿ ನಡೆದ ಘಟನೆಯನ್ನು ನೆನಪಿಸುತ್ತದೆ. ಗೂಡಿನ ಬಳಿಯ ಪ್ರದೇಶವೂ ಅದೇ ರೀತಿಯ ಜನ ವಸತಿಯ ಪ್ರದೇಶವಾಗಿದ್ದು, ಗುಡ್ಡದ ತಳಭಾಗದಲ್ಲಿ ಹಲವಾರು ಮನೆಗಳಿವೆ.

ಗುಡ್ಡೆ ಕುಸಿತ-ಗೋಣಿಚೀಲ ಪರಿಹಾರ :

ಗೂಡಿನಬಳಿಯಿಂದ ಎತ್ತರ ಪ್ರದೇಶ ದಲ್ಲಿರುವ ಮನೆಗಳು ಹಾಗೂ ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿಯಲ್ಲಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ಪಕ್ಕದಲ್ಲೇ ಹತ್ತಾರು ಮನೆಗಳಿದ್ದು, ಒಂದು ವೇಳೆ ಈ ಗುಡ್ಡ ಕುಸಿದಲ್ಲಿ ಹತ್ತಾರು ಮನೆಗಳಿಗೆ ಹಾನಿಯಾಗಲಿದೆ. ಕಳೆದ ಕೆಲವು ತಿಂಗಳ ಹಿಂದೆ ಇಲ್ಲಿ ಗುಡ್ಡ ಕುಸಿತ ಉಂಟಾದಾಗ ತಹಶೀಲ್ದಾರ್‌ ಸೂಚನೆಯಂತೆ ಎಂಜಿನಿಯರ್‌ ಪರಿಶೀಲನೆ ನಡೆಸಿ ಮರಳು ತುಂಬಿದ ಗೋಣಿ ಚೀಲಗಳನ್ನು ಇರಿಸಲಾಗಿತ್ತು. ನೂರಾರು ಗೋಣಿಗಳನ್ನು ಒಂದರ ಮೇಲೊಂದರಂತೆ ಇಡಲಾಗಿದೆ. ಆದರೆ ಇದೀಗ ಬಿಸಿಲಿನ ತೀವ್ರತೆಗೆ ಗೋಣಿಗಳು ಹರಿದು ಮರಳು ಕೆಳಗೆ ಬೀಳುತ್ತಿದೆ. ಒಂದು ವೇಳೆ ಜೋರಾಗಿ ಮಳೆ ಬಂದು ನೀರು ಒಳ ನುಗ್ಗಿದರೆ ಗೋಣಿ ಚೀಲಗಳು ಕೂಡ ಕೆಳಗೆ ಬೀಳುವ ಸ್ಥಿತಿ ಇದೆ. ರಸ್ತೆಗೆ ತಾಗಿಕೊಂಡೇ ಗುಡ್ಡ ಕುಸಿದಿದ್ದು, ಇನ್ನು ಸ್ಪಲ್ಪ ಕುಸಿದರೂ, ಈ ಭಾಗಕ್ಕೆ ರಸ್ತೆ ಸಂಪರ್ಕ ಕಡಿತಗೊಳ್ಳಲಿದೆ. ಇಲ್ಲಿ 2 ಕಡೆಗಳಲ್ಲಿ ಗುಡ್ಡ ಕುಸಿದಿದ್ದು, ಎರಡೂ ಕಡೆಯೂ ಗೋಣಿ ಚೀಲಗಳನ್ನು ಇಡಲಾಗಿದೆ.

ಗುಡ್ಡ ಜರಿದರೆ ರಸ್ತೆ ಸಂಪರ್ಕ ಕಡಿತ :ವಾರ್ಡ್‌ಗಳಿಗೆ ನೀರು ಪೂರೈಸುವ ಟ್ಯಾಂಕ್‌ :

ಗೂಡಿನಬಳಿಯಲ್ಲಿ ಗುಡ್ಡದ ಮೇಲ್ಭಾಗದಲ್ಲಿ ಪುರಸಭೆಯ ಹಲವು ವಾರ್ಡ್‌ಗಳಿಗೆ ನೀರು ಪೂರೈಕೆ ಮಾಡುವ ಟ್ಯಾಂಕ್‌ ಇದ್ದು, ಟ್ಯಾಂಕ್‌ಗೆ ನೀರು ಪೂರೈಕೆ ಮಾಡುವ ಪೈಪ್‌ ಹಾಗೂ ಅದರಿಂದ ನೀರು ಪೂರೈಕೆಯಾಗುವ ಟ್ಯಾಂಕ್‌ ಇದೇ ರಸ್ತೆಯ ತಳಭಾಗದಲ್ಲಿದೆ. ಹೀಗಾಗಿ ಗುಡ್ಡ ಕುಸಿಯುವ ವೇಳೆ ಪೈಪ್‌ಲೈನ್‌ ಸಂಪರ್ಕ ಕಡಿತಗೊಂಡರೆ ಭಾರೀ ನಷ್ಟವಾಗಲಿದೆ. ಜತೆಗೆ ಹಲವು ತಿಂಗಳುಗಳ ಕಾಲ ನೀರು ಪೂರೈಕೆಗೂ ತೊಂದರೆ ಎದುರಾಗುವ ಆತಂಕವಿದೆ.

ದ.ಕ. ಜಿಲ್ಲಾಧಿಕಾರಿಗಳಿಂದ ಸಮಸ್ಯೆ ಕುರಿತು ಪರಿಶೀಲನೆಗೆ ಪುರಸಭೆಗೆ ಬಂದಿದೆ. ಅದಕ್ಕೆ ತಡೆಗೋಡೆ ಅಗತ್ಯವಾಗಿದ್ದು, ಹೆಚ್ಚಿನ ಅನುದಾನ ಬೇಕಾಗುತ್ತದೆ. ಆದರೆ ಪುರಸಭೆಯ ಅನುದಾನದಿಂದ ಅದು ಅಸಾಧ್ಯವಾಗಿದೆ. ಹೀಗಾಗಿ ಶಾಸಕರ ಮೂಲಕ ಸರಕಾರದಿಂದ ಅನುದಾನಕ್ಕಾಗಿ ಮನವಿ ಮಾಡಲಾಗುವುದು. ಸಾಮಾನ್ಯ ತಡೆಗೋಡೆಗಿಂತಲೂ ಹೆಚ್ಚು ಬಲಿಷ್ಠ ಇರುವ ತಡೆಗೋಡೆ ಬೇಕಾಗುತ್ತದೆ.-ಮಹಮ್ಮದ್‌ ಶರೀಫ್‌, ಅಧ್ಯಕ್ಷರು, ಪುರಸಭೆ, ಬಂಟ್ವಾಳ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.