ಸಕಲ ಗೌರವದೊಂದಿಗೆ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಯೋಧ ಸಂದೇಶ್‌ ಶೆಟ್ಟಿ ಅಂತಿಮ ದರ್ಶನ

Team Udayavani, Jun 19, 2020, 5:00 AM IST

ಸಕಲ ಗೌರವದೊಂದಿಗೆ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಉಪ್ಪಿನಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಭಾರತೀಯ ಭೂ ಸೇನೆಯ ಯೋಧ ಸಂದೇಶ್‌ ಶೆಟ್ಟಿ ಅವರ ಮೃತದೇಹವನ್ನು ಬುಧವಾರ ಅವರ ಹುಟ್ಟೂರಿಗೆ ತರಲಾಗಿದ್ದು, ಸೇನಾ ಗೌರವ, ಭಾರೀ ಸಂಖ್ಯೆಯಲ್ಲಿ ಜನ ಅಂತಿಮ ದರ್ಶನ ಮಾಡಿದ ಬಳಿಕ ಅವರ ಮನೆ ಬಾರ್ಯದ ಅಲಿಂಗಿರದಲ್ಲಿ ರಾತ್ರಿ 11ರ ಸುಮಾರಿಗೆ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಯಿತು.

ಬೆಳ್ತಂಗಡಿ ತಾ|ನ ಬಾರ್ಯದ ಅಲಿಂಗಿರ ನಿವಾಸಿ ಸಂದೇಶ್‌ ಶೆಟ್ಟಿಯವರು ಭಾರತೀಯ ಭೂ ಸೇನಾ ಸಿಗ್ನಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಥುರಾದ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಅವರು ಜೂ. 13ರಂದು ಹೃದಯಾಘಾತದಿಂದ ನಿಧನ ಹೊಂದಿದ್ದರು. ಅಲ್ಲಿ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆಗಳು ನಡೆದು, ಕೊರೊನಾ ನೆಗೆಟಿವ್‌ ವರದಿ ಬಂದ ಬಳಿಕ ಜೂ. 17ರಂದು ಪಾರ್ಥಿವ ಶರೀರವನ್ನು ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ತರಲಾಗಿತ್ತು. ಅಲ್ಲಿಂದ ರಸ್ತೆ ಮಾರ್ಗವಾಗಿ ಆ್ಯಂಬುಲೆನ್ಸ್‌ನಲ್ಲಿ ಹುಟ್ಟೂರಿಗೆ ತರಲಾಯಿತು.

ಪುಷ್ಪಾರ್ಚನೆ
ಯೋಧನ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ದಾರಿಯುದ್ದಕ್ಕೂ ಜನರು ಅಂತಿಮ ದರ್ಶನಗೈದು ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಅವರು ಕಲಿತ ಬಾರ್ಯ ಗ್ರಾಮದ ಪೆರಿಯೊಟ್ಟು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿ ಇವರಿಗೆ ಸುಬೇದಾರ್‌ ಬಿಜು ನೇತೃತ್ವದ ಯೋಧರ ತಂಡ ಸೇನಾ ಗೌರವ ಸಲ್ಲಿಸಿತು. ಬಳಿಕ ಕ್ಷೇತ್ರದ ಶಾಸಕರಾದ ಹರೀಶ್‌ ಪೂಂಜ, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ಡಿವೈಎಸ್ಪಿ ದಿನಕರ ಶೆಟ್ಟಿ, ಉಪ್ಪಿನಂಗಡಿ ಠಾಣಾ ಪೊಲೀಸ್‌ ಉಪನಿರೀಕ್ಷಕ ಈರಯ್ಯ, ಪಂ. ಅಧ್ಯಕ್ಷ ಪ್ರಶಾಂತ್‌ ಪೈ, ಉಪಾಧ್ಯಕ್ಷೆ ಹೇಮಾವತಿ, ಸದಸ್ಯ ಧರ್ಣಪ್ಪ, ಎಪಿಎಂಸಿ ಸದಸ್ಯ ಜಯಾನಂದ ಕಲ್ಲಾಪು, ಪದು¾ಂಜ ಸಿ ಎ ಬ್ಯಾಂಕ್‌ ಅಧ್ಯಕ್ಷ ರಕ್ಷಿತ್‌ ಶೆಟ್ಟಿ, ಪ್ರಮುಖರಾದ ಜಯವಿಕ್ರಮ ಕಲ್ಲಾಪು, ಗುಣಾಕರ ಅಗ್ನಾಡಿ, ಮನೋಹರ್‌ ಶೆಟ್ಟಿ ಬಾರ್ಯ, ರವಿ ಶಿಲ್ಪಾ ಮತ್ತಿತರ ಜನಪ್ರತಿನಿಧಿಗಳು, ಸ್ಥಳೀಯ ಸಂಘ-ಸಂಸ್ಥೆಗಳ ಮುಖಂಡರು ಸಹಿತ ನೂರಾರು ಜನ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು. “ಭಾರತ್‌ ಮಾತಾ ಕೀ ಜೈ’, “ಅಮರ್‌ ರಹೇ… ಅಮರ್‌ ರಹೇ… ಸಂದೇಶ್‌ ಶೆಟ್ಟಿ ಅಮರ್‌ ರಹೇ…’ ಮತ್ತಿತರ ದೇಶ ಭಕ್ತಿ ಬಿಂಬಿತ ಘೋಷಣೆಗಳು ಈ ಸಂದರ್ಭ ಮುಗಿಲು ಮುಟ್ಟಿತ್ತು.

ಬಾರ್ಯದ ಅಲಿಂಗಿರದಲ್ಲಿರುವ ಅವರ ಮನೆಗೆ ಪಾರ್ಥಿವ ಶರೀರವನ್ನು ಕೊಂಡೊಯ್ದು ಕುಟುಂಬ ವರ್ಗದವರಿಗೆ ಬಿಟ್ಟು ಕೊಡಲಾಯಿತು. ಅಲ್ಲಿ ಅಂತಿಮ ವಿಧಿ-ವಿಧಾನಗಳು ಮುಗಿದ ಬಳಿಕ ರಾತ್ರಿ ಸುಮಾರು 11ರ ಸುಮಾರಿಗೆ ಅವರ ಕುಟುಂಬಸ್ಥರು ಅವರ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.

ಸಾಮಾಜಿಕ ಅಂತರ
ಮೃತ ಯೋಧನ ಅಂತಿಮ ದರ್ಶನಕ್ಕೆ ನೆರೆದ ಜನರಲ್ಲಿ ಕೋವಿಡ್‌-19 ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಾಲೂಕು ದಂಡಾಧಿಕಾರಿಯವರು ತಮ್ಮ ವಾಹನಕ್ಕೆ ಅಳವಡಿಸಿದ ಧ್ವನಿವರ್ಧಕದ ಮೂಲಕ ಅರಿವು ಮೂಡಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.