ಕುಸಿದ ಕುಕ್ಕುಜೆ ಸೇತುವೆಗೆ ಶಾಶ್ವತ ಪರಿಹಾರದ ಭರವಸೆ

ಮಳೆಗಾಲ ಪೂರ್ವ 5 ಲಕ್ಷ ರೂ. ವೆಚ್ಚದಲ್ಲಿ ತಾತ್ಕಾಲಿಕ ರಸ್ತೆ

Team Udayavani, Jun 6, 2020, 8:12 AM IST

ಕುಸಿದ ಕುಕ್ಕುಜೆ ಸೇತುವೆಗೆ ಶಾಶ್ವತ ಪರಿಹಾರದ ಭರವಸೆ

ಕುಕ್ಕುಜೆ-ಅಳಂಬ ಸಂಪರ್ಕ ಸೇತುವೆ ಪ್ರದೇಶಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದರು.

ಬೆಳ್ತಂಗಡಿ: ನಾರಾವಿ ಗ್ರಾ.ಪಂ.ಗೆ ಒಳಪಟ್ಟ ಕುತ್ಲೂರು ಗ್ರಾಮದ ಕುಕ್ಕುಜೆ ಯಲ್ಲಿ ಮೇ 28ರಂದು ಕುಸಿದು ಬಿದ್ದ ಕುಕ್ಕುಜೆ ಸೇತುವೆಗೆ ಮುಂದಿನ ವರ್ಷ 3 ಕೋ.ರೂ. ವೆಚ್ಚದಲ್ಲಿ ಶಾಶ್ವತ ಸಂಪರ್ಕ ಸೇತುವೆ ನಿರ್ಮಿ ಸಲು ಕ್ರಿಯಾಯೋಜನೆ ರೂಪಿಸುವಂತೆ ಸಚಿವ ಈಶ್ವರಪ್ಪ ಭರವಸೆ ನೀಡಿದ್ದಾರೆ ಎಂದು ಶಾಸಕ ಹರೀಶ್‌ ಪೂಂಜ ತಿಳಿಸಿದ್ದಾರೆ.

ಕುಸಿದು ಬಿದ್ದ ಕುಕ್ಕುಜೆ-ಅಳಂಬ ಸಂಪರ್ಕ ಸೇತುವೆ ಸ್ಥಳಕ್ಕೆ ಶುಕ್ರವಾರ ಸಂಜೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕ ಹರೀಶ್‌ ಪೂಂಜ ಅವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಳೆದ ವರ್ಷ ಸೇತುವೆ ಸಂಪೂರ್ಣ ಕುಸಿದಿರುವ ವಿಚಾರ ನನ್ನ ಗಮನಕ್ಕೆ ಬಂದಿತ್ತು. ಈ ವಿಚಾರವನ್ನು ಸಚಿವ ಈಶ್ವರಪ್ಪ ಅವರ ಗಮನಕ್ಕೆ ತಂದಿದ್ದೇನೆ. ಮಳೆಗಾಲದ ಬಳಿಕ ಗ್ರಾಮ್‌ ಸಡಕ್‌ ಯೋಜನೆಯಡಿ 3 ಕೋಟಿ ರೂ. ವೆಚ್ಚದ ಸೇತುವೆ ಹಾಗೂ 2 ಕೋಟಿ ರೂ. ವೆಚ್ಚದ ಸುಸಜ್ಜಿತ ಸಂಪರ್ಕ ರಸ್ತೆ ರಚಿಸಲು ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.

ಮೋರಿ ಬಳಸಿ ತಾತ್ಕಾಲಿಕ ರಸ್ತೆ
ಸೇತುವೆ ಕುಸಿದಿದ್ದರಿಂದ ಅಳಂಬ ವ್ಯಾಪ್ತಿಯಲ್ಲಿ ವಾಸಿಸುವ 160 ಅಧಿಕ ಕುಟುಂಗಳು ಜನರಿಗೆ ಮಳೆಗಾಲದಲ್ಲಿ ಸಂಚರಿಸಲು ಸಾಧ್ಯವಾಗದೆ ಅತಂತ್ರವಾಗ ಲಿದೆ. ಈ ನಿಟ್ಟಿನಲ್ಲಿ ಅಗತ್ಯವಾಗಿ ತಾತ್ಕಾಲಿಕ ಮೋರಿ ಬಳಸಿ 5 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಮುಗ್ರೋಡಿ ಕನ್‌ಸ್ಟ್ರಕ್ಷನ್‌ ಅವರ ಬಳಿ ಮಾತುಕತೆ ನಡೆಸಿ ಮುಂಗಡ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದರು.

ಗುತ್ತಿಗೆದಾರರಾದ ಸುಧಾಕರ್‌ ಶೆಟ್ಟಿ, ಎಂಜಿನಿಯರ್‌ ಉದಯ್‌ ಕುಮಾರ್‌, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌, ನಾರಾವಿ ಗ್ರಾ. ಪಂ. ಸದಸ್ಯ ಉದಯ್‌ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ರಾಮಚಂದ್ರ ಭಟ್‌, ನಾರಾವಿ ಗ್ರಾಮ ಪಂಚಾಯತ್‌ ಸದಸ್ಯೆ ಪ್ರಮೀಳಾ ಭಟ್‌, ರವೀಶ್‌ ಕುತ್ಲೂರು, ರತ್ನಾಕರ್‌ ಸಾಲ್ಯಾನ್‌, ತುಂಗಪ್ಪ ಪೂಜಾರಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.