Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು
Team Udayavani, Oct 11, 2024, 6:45 AM IST
ಸುಳ್ಯ: ಸಂಪಾಜೆಯ ಎರಡು ಮನೆಗಳಲ್ಲಿ ಚಿನ್ನಾಭರಣ ಮತ್ತು ಹಣ ಕದ್ದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ಪ್ರಕರಣದಲ್ಲಿ ಭಾಗಿಯಾದ ಇಬ್ಬರಿಗೂ ಸುಳ್ಯ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಆರೋಪಿಗಳಾದ ಅಹ್ಮದ್ ಕಬೀರ್ ಹಾಗೂ ಸಾಜುದೀನ್ ಫಾರೂಖ್ ಶಿಕ್ಷೆಗೆ ಒಳಗಾದವರು.
ಪ್ರಕರಣದ ವಿವರ
ಕಳ್ಳರು 2014ರ ಜ. 29ರಂದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೆಲತ್ತಡ್ಕ ಸನತ್.ಪಿ.ಎಸ್. ಅವರ ಮನೆಯ ಹಿಂಬದಿಯಲ್ಲಿರುವ ಬಾಗಿಲನ್ನು ಮುರಿದು ಒಳಪ್ರವೇಶಿಸಿ ಕಪಾಟಿನಲ್ಲಿರಿಸಿದ್ದ ಸುಮಾರು 62,900 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು 10,000 ರೂ. ಕಳವು ಮಾಡಿದ್ದರು. ಅದೇ ದಿನ ಸಂಪಾಜೆ ಗ್ರಾಮದ ಗೂನಡ್ಕ ಪೂಜಾರಿ ಮನೆಯ ಮಾಧವ ಪಿ. ಅವರ ಮನೆಯ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಮನೆಯೊಳಗೆ ಪ್ರವೇಶಿಸಿ ಸುಮಾರು 2,27,600 ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ 2ನೇ ಆರೋಪಿ ತಲೆಮರೆಸಿಕೊಂಡಿದ್ದರಿಂದ ಆರೋಪಿ ಪತ್ತೆಯಾದ ಮೇಲೆ ಪ್ರಕರಣಗಳನ್ನು ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯವು ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು, ದೋಷಿ ಎಂದು ಪರಿಗಣಿಸಲಾಗಿದೆ. ಅವರಿಗೆ ಮೂರು ವರ್ಷ ಜೈಲು ತಲಾ 10 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಬಿ. ಮೋಹನ್ ಬಾಬು ಅವರು ಆದೇಶ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ
‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!
Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ
State Govt: ವಿನಯ್ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ
Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.