ಬೆಳ್ತಂಗಡಿಯ ಮೂರೂ ಹೋಬಳಿಗಳಿಗೆ ಕೃಷಿ ಅಧಿಕಾರಿಗಳೇ ಇಲ್ಲ!


Team Udayavani, Jun 21, 2024, 10:02 AM IST

ಬೆಳ್ತಂಗಡಿಯ ಮೂರೂ ಹೋಬಳಿಗಳಿಗೆ ಕೃಷಿ ಅಧಿಕಾರಿಗಳೇ ಇಲ್ಲ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ಕೃಷಿ ಇಲಾಖೆಗೆ ಸಿಬಂದಿ ಕೊರತೆ ಎದುರಾಗಿದ್ದು, ಭವಿಷ್ಯದಲ್ಲಿ ಇಲಾಖೆಯನ್ನು ರೈತರೇ ನಡೆಸಬೇಕಾದ ಪರಿಸ್ಥಿತಿ ಬಂದರೂ ಅಚ್ಚರಿಯಿಲ್ಲ. ಜಿಲ್ಲೆಯಲ್ಲಿ ಅತೀ ಹೆಚ್ಚು ಕೃಷಿಕರನ್ನು ಹೊಂದಿರುವ ಬೆಳ್ತಂಗಡಿ ತಾಲೂಕಿನಲ್ಲಿ ಅಡಕೆ, ರಬ್ಬರ್‌, ತೆಂಗು ಪ್ರಮುಖ ಬೆಳೆಯಾದರೆ, ಭತ್ತದ ಕೃಷಿಯೂ 1,500 ಎಕ್ರೆ ಪ್ರದೇಶದಲ್ಲಿ ಈಗಲೂ ಇದೆ. ಭತ್ತದ ಬೆಳೆಗೆ ಪ್ರೋತ್ಸಾಹ ನೀಡಲು ಇಲ್ಲಿರುವ ಕೃಷಿ ಇಲಾಖೆಯಲ್ಲಿನ ಸಿಬಂದಿ ಕೊರತೆ ಸಮಸ್ಯೆಯಾಗುತ್ತಿದೆ.

ಏಕ ವ್ಯಕ್ತಿ ನಿರ್ವಹಣೆ
ಜಿಲ್ಲೆಯಲ್ಲಿ ಬೆಳ್ತಂಗಡಿ ಅತೀ ದೊಡ್ಡ ತಾಲೂಕಾಗಿದೆ. ಈ ಹಿಂದೆ ಬೆಳ್ತಂಗಡಿ, ವೇಣೂರು, ಕೊಕ್ಕಡ ಹೋಬಳಿಯನ್ನು ಹುಮೇರಾ
ಜಬೀನ್‌ ಮತ್ತು ಚಿದಾನಂದ ಹೂಗಾರ್‌ ನಿರ್ವಹಿಸುತ್ತಿದ್ದರು. ಹುಮೇರಾ ಅವರು ಬೆಂಗಳೂರಿಗೆ ವರ್ಗಾವಣೆ ಪಡೆದು ಕೊಂಡಿದ್ದು, ಇತ್ತ ಚಿದಾನಂದ ಹೂಗಾರ್‌ ಕಳೆದ ತಿಂಗಳಾಂತ್ಯಕ್ಕೆ ನಿವೃತ್ತಿಯಾಗಿದ್ದಾರೆ. ಪ್ರಸಕ್ತ ಸಹಾಯಕ ಕೃಷಿ ನಿರ್ದೇಶಕರಾದ ರಂಜಿತ್‌ ಅವರೇ ಎಲ್ಲವನ್ನೂ ನಿಭಾಯಿಸಬೇಕಿದೆ.

ಜಿಲ್ಲೆಯಲ್ಲಿ 114 ಹುದ್ದೆ ಪೈಕಿ 14 ಭರ್ತಿ
ತಾಂತ್ರಿಕವಾಗಿ ಜಿಲ್ಲೆಯಲ್ಲಿ ಒಟ್ಟು 114 ಮಂಜೂರಾದ ಹುದ್ದೆಗಳು. ಸದ್ಯ ಇಡೀ ಜಿಲ್ಲೆಯಲ್ಲಿ 14 ಮಂದಿ ಅಧಿಕಾರಿಗಳಿದ್ದು, 100 ಹುದ್ದೆ ಖಾಲಿಯಿವೆ. ಅದರಲ್ಲೂ ಬೆಳ್ತಂಗಡಿಯ ಸಹಾಯಕ ಕೃಷಿ ನಿದೇಶಕಿ  ಸ್ವಯಂ ನಿವೃತ್ತಿ ಕೋರಿದ್ದಾರೆ. ಸುಳ್ಯ ಮತ್ತು
ಮಂಗಳೂರಿನಲ್ಲಿ ಕೃಷಿ ಅಧಿಕಾರಿಗಳು ತಾಲೂಕು ಮಟ್ಟದಲ್ಲಾಗಲಿ ಹೋಬಳಿ ಮಟ್ಟದಲ್ಲಾಗಲಿ ಇಲ್ಲ. ಕೇವಲ ಸಹಾಯಕ
ಕೃಷಿ ನಿರ್ದೇಶಕರ ಹುದ್ದೆಯಷ್ಟೇ ಇವೆ.

ಬಂಟ್ವಾಳ ಮತ್ತು ಪುತ್ತೂರು ತಾಲೂಕಿನಲ್ಲಿ ತಲಾ ಇಬ್ಬರಂತೆ ಒಬ್ಬರು ಪದವೀದರ ಕೃಷಿ ಅಧಿಕಾರಿ ಮತ್ತು ಕೃಷಿ ಪದವೀದರರಲ್ಲದ ಕೃಷಿ ಅಧಿಕಾರಿಗಳಿದ್ದಾರೆ. ಈ ಪೈಕಿ ಎರಡೂ ತಾಲೂಕಿನಲ್ಲಿ ಕೃಷಿ ಪದವೀದರರಲ್ಲದ ಕೃಷಿ ಅಧಿಕಾರಿಗಳಲ್ಲಿ ಬಂಟ್ವಾಳದವರು ಈ ವರ್ಷ, ಪುತ್ತೂರು ತಾಲೂಕಿನವರು ಮುಂದಿನ ವರ್ಷ ನಿವೃತ್ತಿ ಹೊಂದಲಿದ್ದಾರೆ. ಹೊಸ ನೇಮಕ ಆಗದಿದ್ದರೆ ಅಲ್ಲಿಗೆ ದ.ಕ.ಜಿಲ್ಲೆಯಲ್ಲಿ ಮುಂದಿನ ವರ್ಷ ಎಪ್ರಿಲ್‌ಗೆ ಮೂವರು ಕೃಷಿ ಅಧಿಕಾರಿಗಳಷ್ಟೇ ಉಳಿಯಲಿದ್ದಾರೆ.

ಬೆಳ್ತಂಗಡಿಯಲ್ಲಿ ಖಾಲಿ ಬಿದ್ದ ಹುದ್ದೆಗಳು
ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಒಟ್ಟು 27 ಹುದ್ದೆಗಳಿದ್ದು ಕೇವಲ ಎರಡು ಹುದ್ದೆಗಳು ಮಾತ್ರ ಖಾಯಂನಲೆಯಲ್ಲಿ
ಕಾರ್ಯನಿರ್ವಹಿಸುತ್ತಿವೆ. 10 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಒಬ್ಬರೂ ಇಲ್ಲ. ಅಧೀಕ್ಷಕ, ಪ್ರಥಮ ದರ್ಜೆ ಸಹಾಯಕ ತಲಾ
ಒಂದು ಹುದ್ದೆ, ದ್ವಿತೀಯ ದರ್ಜೆ ಸಹಾಯಕ ಎರಡು ಹುದ್ದೆ, ಬೆರಳಚ್ಚುಗಾರ, ವಾಹನ ಚಾಲಕ ಹುದ್ದೆಗಳು ಹಾಗೂ ಮೂರು ಡಿ
ಗ್ರೂಪ್‌ ಹುದ್ದೆಗಳು ಖಾಲಿ ಇವೆ. ಅಗತ್ಯಕ್ಕೆ ಪಕ್ಕದ ಕೃಷಿ ಪ್ರಯೋಗಾಲಯ ಹಾಗೂ ಕೃಷಿ ಕೇಂದ್ರದಿಂದ ಸಿಬಂದಿಯನ್ನು ಕರೆಸಿ ಕಚೇರಿ ಕೆಲಸ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗುತ್ತಿಗೆ ಆಧಾರದಲ್ಲಿ 5 ಜನ ಕಾರ್ಯನಿರ್ವಹಿಸುತ್ತಿದ್ದರು ಅವರಿಗೆ ಯಾವುದೇ ಜವಾಬ್ದಾರಿ ನೀಡಲು ಆಗುವುದಿಲ್ಲ. 27 ಹುದ್ದೆಗಳಿಗೆ ಕೇವಲ 7 ಜನ ಕಾರ್ಯನಿರ್ವಹಿಸುತ್ತಿದ್ದಾರೆ.

ದ.ಕ. ಕೃಷಿ ಇಲಾಖೆ ವಿವರ
*ಎಂಟಿ ಕೃ.ನಿ. ಕಚೇರಿ-1
*ಉಪ .ಕೃ.ನಿ.ಕಚೇರಿ-2
*ತಾಲೂಕು ಮಟ್ಟದ ಸ.ಕೃ.ನಿ. ಕಚೇರಿ-5
*ಪ್ರಯೋಗಾಲಯ-1
*ತರಬೇತಿ ಕೇಂದ್ರ-1
*ಬೀಜೋತ್ಪಾದನೆ ಕೇಂದ್ರ-1
*ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ-16
*ಒಟ್ಟು ಕಚೇರಿ-27
*ಮಂಜೂರಾದ ಒಟ್ಟು ತಾಂತ್ರಿಕ ಅಧಿಕಾರಿ ಹುದ್ದೆಗಳು -114
*ಭರ್ತಿ ಆಗಿರುವ ಒಟ್ಟು ತಾಂತ್ರಿಕ ಅಧಿಕಾರಿಗಳ ಹುದ್ದೆಗಳು- 14
*ಒಟ್ಟು ಮಂಜೂರಾದ ಎಲ್ಲ ಹುದ್ದೆಗಳ ಸಂಖ್ಯೆ: 230
*ಭರ್ತಿ ಆಗಿರುವ ಎಲ್ಲ ಹುದ್ದೆಗಳ ಒಟ್ಟು ಸಂಖ್ಯೆ-31

ನಾನಾ ಜವಾಬ್ದಾರಿ
ತಮ್ಮ ಕಚೇರಿ ಕೆಲಸದ ಜತೆ ಗ್ರಾಮ ಸಭೆ, ಜನ ಸಂಪರ್ಕ ಸಭೆ, ತರಬೇತಿ, ಅಧಿಕಾರಿ, ಜನಪ್ರತಿನಿಧಿಗಳ ಸಭೆ ಪ್ರಾತ್ಯಕ್ಷಿಕೆ, ಫೀಲ್ಡ್‌ವರ್ಕ್‌ನಲ್ಲಿ ಭಾಗವಹಿಸಿ ವರದಿ ಸಿದ್ದಪಡಿಸಬೇಕಾಗಿದೆ. ಇದರಿಂದ ಅಗತ್ಯ ಕೆಲಸದ ಮೇಲೆ ಕಚೇರಿಗೆ ಬರುವ ರೈತರು ಅಧಿಕಾರಿಗಳು ಸಿಗದೆ ಪದೇಪದೆ ಅಲೆಯುವ ಸ್ಥಿತಿ ಉಂಟಾಗುತ್ತಿದೆ.

ಕೃಷಿ ಇಲಾಖೆಯಲ್ಲಿರುವ ಸಿಬಂದಿ ಕೊರತೆ ಬಗ್ಗೆ ವರದಿ ಸಲ್ಲಿಸಲಾಗಿದೆ. ಮುಂದಿನ ಹಂತದಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗುವ ನಿರೀಕ್ಷೆ ಇದೆ.
-ಶಿವಶಂಕರ ದಾನೆಗೊಂಡರ್‌,
ಉಪನಿರ್ದೇಶಕರು,ಕೃಷಿ ಇಲಾಖೆ ಪುತ್ತೂರು

*ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ; ಕೃಷಿಕರಲ್ಲಿ ಆತಂಕ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.