Dakshina Kannada ಜಿಲ್ಲೆಯ 14 ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ!

14ರಲ್ಲಿ ಕೇವಲ 2 ಸರಕಾರಿ ಶಾಲೆಗಳು; ಶೂನ್ಯ ದಾಖಲಾತಿ ಮುಂದುವರಿದರೆ ಶಾಲೆ ಮುಚ್ಚುಗಡೆ ಸಾಧ್ಯತೆ

Team Udayavani, Jul 22, 2024, 7:10 AM IST

Dakshina Kannada ಜಿಲ್ಲೆಯ 14 ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ 14 ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯ! ಕಳೆದ ಮೂರು ವರ್ಷಗಳಿಂದಲೂ ಇಲ್ಲಿ ಶೂನ್ಯ ವಿದ್ಯಾರ್ಥಿಗಳಿದ್ದು, ಇದರಲ್ಲಿ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳೂ ಸ್ಥಾನ ಪಡೆಯುತ್ತಿರುವುದು ಆತಂಕದ ಸಂಗತಿ. ಇಲಾಖೆಯ ಪ್ರಕಾರ ಮೂರು ವರ್ಷ ಕಾಯಬೇಕಾಗಿದ್ದು, ಆ ಬಳಿಕವೂ ವಿದ್ಯಾರ್ಥಿಗಳು ಪ್ರವೇಶ ಪಡೆಯದಿದ್ದರೆ ಶಾಶ್ವತವಾಗಿ ಮುಚ್ಚುವ ಸಾಧ್ಯತೆ ಇದೆ.

2024-25ನೇ ಸಾಲಿನಲ್ಲಿ ದ.ಕ.ದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಸೇರಿ 14 ಶಾಲೆಗಳಿಗೆ ಒಬ್ಬ ವಿದ್ಯಾರ್ಥಿಯೂ ಸೇರಿಲ್ಲ. ಹಾಗೆಂದು ಈ ಶಾಲೆಗಳು ಅಧಿಕೃತವಾಗಿ ಮುಚ್ಚಿಲ್ಲ.

ಎಲ್ಲೆಲ್ಲಿ, ಎಷ್ಟೆಷ್ಟು?
ಸುಳ್ಯ ತಾಲೂಕಿನ 2, ಬಂಟ್ವಾಳ 2, ಬೆಳ್ತಂಗಡಿ 1, ಮಂಗಳೂರು ಉತ್ತರ 5, ಮೂಡಬಿದಿರೆ 1, ಮಂಗಳೂರು ದಕ್ಷಿಣದಲ್ಲಿ 3 ಶಾಲೆಗಳು ಶೂನ್ಯ ವಿದ್ಯಾರ್ಥಿಗಳ ಪಟ್ಟಿಯಲ್ಲಿವೆ. ಇವುಗಳ ಪೈಕಿ 2 ಸರಕಾರಿ, 6 ಅನುದಾನಿತ ಹಾಗೂ 6 ಖಾಸಗಿ ಶಾಲೆಗಳು.

ಕಳೆದ ವರ್ಷಕ್ಕಿಂತ ಹೆಚ್ಚು!
2023-24ನೇ ಸಾಲಿನಲ್ಲಿ ದ.ಕ.ಜಿಲ್ಲೆಯಲ್ಲಿ ಶೂನ್ಯ ವಿದ್ಯಾರ್ಥಿಗಳಿದ್ದ ಶಾಲೆಗಳ ಸಂಖ್ಯೆ 13 ಆಗಿದ್ದು, ಈ ಬಾರಿ ಅದು14ಕ್ಕೆ ಏರಿಕೆ ಕಂಡಿದೆ. ಕಳೆದ ಬಾರಿ 3 ಸರಕಾರಿ ಶಾಲೆಗಳು ಈ ಪಟ್ಟಿಯಲ್ಲಿದ್ದರೆ, ಈ ಬಾರಿ ಅದು 2ಕ್ಕೆ ಇಳಿದಿದೆ. 2022-23ರಲ್ಲಿ 22 ಶಾಲೆಗಳು, 2021-22ರಲ್ಲಿ 10 ಶಾಲೆಗಳು ಶೂನ್ಯ ವಿದ್ಯಾರ್ಥಿ ಶಾಲೆಗಳ ಪಟ್ಟಿಯಲ್ಲಿ ಸೇರಿತ್ತು. ಎರಡು ವರ್ಷಗಳ ಹಿಂದೆ ಶೂನ್ಯ ಪಟ್ಟಿಯಲ್ಲಿದ್ದ ಶಾಲೆಗಳ ಪೈಕಿ ಕೆಲವು ಅನುದಾನಿತ ಶಾಲೆಗಳಲ್ಲಿ ಮತ್ತೆ ದಾಖಲಾತಿ ಪ್ರಾರಂಭಗೊಂಡು ತರಗತಿಗಳು ಪುನರಾರಂಭಗೊಂಡಿವೆ. ಹೆಚ್ಚಿನ ಶಾಲೆಗಳು ಮುಚ್ಚಿವೆ ಎನ್ನುತ್ತಿದೆ ಅಂಕಿಅಂಶ.

ನಾಲ್ಕು ವರ್ಷಗಳಲ್ಲಿ 59 ಶಾಲೆ!
ದ.ಕ.ದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಶೂನ್ಯ ವಿದ್ಯಾರ್ಥಿ ಪಟ್ಟಿಗೆ ಸೇರಿದ ಶಾಲೆಗಳ ಒಟ್ಟು ಸಂಖ್ಯೆ 59. ಇದರಲ್ಲಿ 11 ಸರಕಾರಿ, 31 ಅನುದಾನಿತ ಹಾಗೂ 17 ಅನುದಾನ ರಹಿತ ಶಾಲೆಗಳು. ಇಲ್ಲಿ ಬಹಳ ಮುಖ್ಯವಾದ ಸಂಗತಿ ಅಂದರೆ, ಕೆಲವು ವರ್ಷಗಳಿಂದ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಯೇ ಆಗಿಲ್ಲ. ಹಾಗಾಗಿ ಅತಿಥಿ ಶಿಕ್ಷಕರನ್ನು ನೇಮಿಸಿ ವೇತನ ಭರಿಸುವುದು, ಶಾಲೆ ನಡೆಸುವುದು ಆಡಳಿತ ಮಂಡಳಿಗೆ ಹೊರೆಯಾಗಿರುವುದು ಕೂಡ ಅನು ದಾನಿತ ಶಾಲೆಗಳು ಶೂನ್ಯ ವಿದ್ಯಾರ್ಥಿಗಳ ಪಟ್ಟಿಗೆ ಸೇರಲು ಕಾರಣ. ಇನ್ನೊಂದೆಡೆ ಶೂನ್ಯ ವಿದ್ಯಾರ್ಥಿ ಪಟ್ಟಿಗಳಲ್ಲಿ ಸರಕಾರಿ ಶಾಲೆಗಳ ಸಂಖ್ಯೆ ಕಡಿಮೆ ಆಗಿರುವುದು ಗಮನಾರ್ಹ ಸಂಗತಿ.

ಶೂನ್ಯ ಪಟ್ಟಿಯಲ್ಲಿ ಮಂಗಳೂರೇ ಹೆಚ್ಚು..!
ಎರಡು ವರ್ಷಗಳಿಂದ ಪುತ್ತೂರು- ಕಡಬ ತಾಲೂಕಿನಲ್ಲಿ ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಆಗಿದೆ. ಯಾವ ಶಾಲೆಯೂ ಶೂನ್ಯ ಪಟ್ಟಿಯಲ್ಲಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಮಂಗಳೂರು ಉತ್ತರ, ದಕ್ಷಿಣದಲ್ಲಿ ಶೂನ್ಯ ವಿದ್ಯಾರ್ಥಿ ಶಾಲೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಾಲ್ಕು ವರ್ಷಗಳಲ್ಲಿ ಮಂಗಳೂರು ಉತ್ತರದಲ್ಲಿ 18, ಮಂಗಳೂರು ದಕ್ಷಿಣದಲ್ಲಿ 14 ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಹೊರತುಪಡಿಸಿ ಉಳಿದ ಎಲ್ಲ ತಾಲೂಕಿನ ಸರಕಾರಿ ಶಾಲೆಗಳಲ್ಲೂ ವಿದ್ಯಾರ್ಥಿಗಳಿದ್ದಾರೆ. ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾರಣದಿಂದ ಮಕ್ಕಳ ದಾಖಲಾತಿ ಇಳಿಕೆ ಕಂಡಿರಬಹುದು. ಶೂನ್ಯ ವಿದ್ಯಾರ್ಥಿ ಪಟ್ಟಿಯಲ್ಲಿರುವ ಶಾಲೆಗಳಲ್ಲಿ ಭವಿಷ್ಯದಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಪೂರಕ ವಾತಾವರಣದ ಲಭ್ಯತೆ ಬಗ್ಗೆ ಶಿಕ್ಷಣ ಇಲಾಖೆ ಪರಿಶೀಲಿಸಲಿದೆ.
-ವೆಂಕಟೇಶ ಸುಬ್ರಾಯ ಪಟಗಾರ, ಡಿಡಿಪಿಐ, ದ.ಕ.ಜಿಲ್ಲೆ

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.