Addur ಸೇತುವೆಯಲ್ಲಿ ಸಂಚಾರ ನಿಷೇಧದಿಂದ ಖಾಸಗಿ ಬಸ್‌ಗಳಿಗೆ ಹೊಡೆತ

ಮಾಸಾಂತ್ಯಕ್ಕೆ ಬಸ್‌ ಸಂಚಾರ ಸ್ಥಗಿತಕ್ಕೆ ಮಾಲಕರ ಚಿಂತನೆ

Team Udayavani, Sep 26, 2024, 1:26 PM IST

Addur ಸೇತುವೆಯಲ್ಲಿ ಸಂಚಾರ ನಿಷೇಧದಿಂದ ಖಾಸಗಿ ಬಸ್‌ಗಳಿಗೆ ಹೊಡೆತ

ಬಂಟ್ವಾಳ: ಸಾಮರ್ಥ್ಯ ಪರೀಕ್ಷೆಯ ಹಿನ್ನೆಲೆ ಪೊಳಲಿ ಸಮೀಪದ ಅಡ್ಡೂರು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧದಿಂದ ಬಿ.ಸಿ.ರೋಡ್‌- ಪೊಳಲಿ-ಕೈಕಂಬ ರೂಟ್‌ನಲ್ಲಿ ಸಂಚರಿಸುವ ಖಾಸಗಿ ಬಸ್ಸುಗಳಿಗೆ ದೊಡ್ಡ ಹೊಡೆತ ಬಿದ್ದಿದೆ ಎಂದು ಹೇಳಿರುವ ಬಸ್ಸು ಮಾಲಕರು ಈ ಮಾಸಾಂತ್ಯಕ್ಕೆ ಅನಿವಾರ್ಯವಾಗಿ ಕಾನೂನು ಪ್ರಕಾರ ತಮ್ಮ ಟ್ಯಾಕ್ಸ್‌ ಸರಂಡರ್‌ ಮಾಡಿ ಬಸ್ಸು ಸಂಚಾರ ಸ್ಥಗಿತಗೊಳಿಸಲು ಚಿಂತನೆ ನಡೆಸಿದ್ದಾರೆ.

ಸೇತುವೆಯಲ್ಲಿ ಘನ ವಾಹನ ನಿಷೇಧದಿಂದ ಪ್ರಸ್ತುತ ಬಸ್ಸುಗಳು ಬಿ.ಸಿ.ರೋಡಿನಿಂದ ಪೊಳಲಿ ಹಾಗೂ ಕೈಕಂಬದಿಂದ ಅಡ್ಡೂರುವರೆಗೆ ಸಾಗುತ್ತಿದ್ದು, ಇದರಿಂದ ಬಸ್ಸುಗಳಿಗೆ ಟ್ರಿಪ್‌ ಇಲ್ಲದಾಗಿದೆ. ದಿನನಿತ್ಯ ಸುಮಾರು 300 ಕಿ.ಮೀ. ಓಡುತ್ತಿದ್ದ ಬಸ್ಸುಗಳು ಪ್ರಸ್ತುತ 170-180 ಕಿ.ಮೀ. ಓಡುತ್ತಿವೆ. ಉಳಿದ ಹೊತ್ತಿನಲ್ಲಿ ಬಸ್ಸುಗಳು ನಿಂತೇ ಇರಬೇಕಾಗಿದ್ದು, ಇಂತಹ ಟ್ರಿಪ್‌ನಿಂದ ಪ್ರಯಾಣಿಕರು ಕೂಡ ಇಲ್ಲವಾಗಿದ್ದು, ಜತೆಗೆ ಚಾಲಕ-ನಿರ್ವಾಹಕರಿಗೆ ದಿನದ ಪೂರ್ತಿ ವೇತನ ನೀಡಬೇಕಿರುವುದು ದೊಡ್ಡ ಹೊರೆಯಾಗುತ್ತಿದೆ ಎಂದು ಮಾಲಕರು ಹೇಳುತ್ತಿದ್ದಾರೆ.

ಘನ ವಾಹನ ಸಂಚಾರ ನಿಷೇಧಗೊಂಡು ಒಂದು ತಿಂಗಳು ಹತ್ತು ದಿನ ದಾಟಿದ್ದು, ಬಸ್ಸು ಸಂಚಾರ ಅವಕಾಶ ನೀಡುವ ಕುರಿತು ಇನ್ನೂ ಕೂಡ ಸೂಕ್ತ ನಿರ್ಧಾರ ತೆಗೆದುಕೊಂಡಿಲ್ಲ. ಸೇತುವೆಯ ತಪಾಸಣೆಯ ವರದಿಯ ಕುರಿತು ಕೂಡ ಜಿಲ್ಲಾಡಳಿತ ಯಾವುದೇ ಆಲೋಚನೆ ಮಾಡುತ್ತಿಲ್ಲ. ಸೇತುವೆ ಮಧ್ಯೆ ಬಸ್ಸು ಓಡದೆ ಪ್ರಯಾಣಿಕರು ಕೈಕಂಬ-ಪೊಳಲಿ ಮಧ್ಯೆ ಆಟೋಗಳ ಮೂಲಕವೇ ಸಾಗುತ್ತಿದ್ದಾರೆ ಎನ್ನಲಾಗಿದೆ.

ಚೆಕ್‌ಪೋಸ್ಟ್‌ನಿಂದ ಘನ ವಾಹನ ನಿಯಂತ್ರಿಸಲಿ
ಬಿ.ಸಿ.ರೋಡು-ಪೊಳಲಿ-ಕೈಕಂಬ-ಮಂಗಳೂರು, ಬಿ.ಸಿ.ರೋಡು-ಪೊಳಲಿ-ಕೈಕಂಬ-ಬಜ್ಪೆ-ಕಟೀಲು-ಕಿನ್ನಿಗೋಳಿ ರೂಟ್‌ನಲ್ಲಿ ದಿನನಿತ್ಯ ಸುಮಾರು 35 ಬಸ್ಸುಗಳು ಹಲವು ಟ್ರಿಪ್‌ ನಡೆಸುತ್ತಿದ್ದು, ಪ್ರಸ್ತುತ ಈ ಬಸ್ಸುಗಳಿಗೆ ಕೇವಲ ಅರ್ಥದಷ್ಟು ಟ್ರಿಪ್‌ ಮಾತ್ರ ಇದೆ. ಬಸ್ಸುಗಳು ಘನ ವಾಹನ ಅಲ್ಲವಾದರೂ ಸೇತುವೆಗೆ ಅಡ್ಡಲಾಗಿ ಗಾರ್ಡ್‌ ಅಳವಡಿಸಿರುವುದರಿಂದ ಬಸ್ಸುಗಳಿಗೆ ಸೇತುವೆ ದಾಟಲು ಸಾಧ್ಯವಾಗುತ್ತಿಲ್ಲ. ಘನ ವಾಹನಗಳು ಕೂಡ ಬಸ್ಸಿನಷ್ಟೇ ಎತ್ತರವಿರುವ ಕಾರಣ ಗಾರ್ಡ್‌ ತೆರವುಗೊಂಡರೆ ಬಸ್ಸಿನ ಜತೆಗೆ ಘನ ವಾಹನಗಳು ಕೂಡ ಸೇತುವೆ ದಾಟುತ್ತವೆ ಎಂಬುದು ದ.ಕ.ಜಿಲ್ಲಾಡಳಿತದ ವಾದವಾಗಿದೆ.

ಪ್ರಸ್ತುತ ಸೇತುವೆಯ ಎರಡೂ ಭಾಗದಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಪೊಲೀಸ್‌ ಚೆಕ್‌ಪೋಸ್ಟ್‌ ನಿರ್ಮಿಸಿ ಗೇಟ್‌ಗಳನ್ನು ಅಳವಡಿಸಲಾಗಿದ್ದು, ಅಲ್ಲಿ ಪೊಲೀಸರನ್ನು ನಿಯೋಜಿಸಿ ಅವರ ಮೂಲಕವೇ ಘನ ವಾಹನಗಳನ್ನು ನಿಯಂತ್ರಿಸಬಹುದು. ರಾತ್ರಿ ವೇಳೆ ಪೊಲೀಸ್‌ ನಿಯೋಜನೆ ಸಾಧ್ಯವಾಗದೆ ಇದ್ದರೆ, ರಾತ್ರಿ ಬಸ್ಸುಗಳ ಓಡಾಟ ನಿಂತ ಬಳಿಕ ಮೇಲಿನ ಗಾರ್ಡ್‌ ಅಳವಡಿಸಲಿ ಎಂಬುದು ಬಸ್ಸು ಮಾಲಕರ ಸಲಹೆಯಾಗಿದೆ.

ಖಾಲಿ ಬಸ್ಸು ದಾಟಿಸುತ್ತೇವೆ
ಬಸ್ಸುಗಳು ಪ್ರಯಾಣಿಕರನ್ನು ತುಂಬಿ ಸೇತುವೆಯಲ್ಲಿ ಸಾಗುವುದು ಅಪಾಯವಾದರೆ ಸೇತುವೆಯ ಎರಡೂ ಭಾಗದಲ್ಲಿ ಪ್ರಯಾಣಿಕರನ್ನು ಇಳಿಸಿ ಸೇತುವೆ ದಾಟಿದ ಬಳಿಕ ಮತ್ತೆ ಹತ್ತಿಸಿಕೊಳ್ಳಲು ಅವಕಾಶ ನೀಡಲಿ. ಈ ಸಂದರ್ಭ ಬಸ್ಸುಗಳು ತೂಕವನ್ನು ತಗ್ಗಿಸಿಕೊಂಡು ಸೇತುವೆಗೆ ಯಾವುದೇ ರೀತಿಯ ಭಾರ ಎನಿಸುವುದಿಲ್ಲ. ಜತೆಗೆ ಬಸ್ಸುಗಳಿಗೂ ತಮ್ಮ ರೂಟ್‌ನಲ್ಲಿ ಪೂರ್ತಿ ಟ್ರಿಪ್‌ ಮಾಡುವುದಕ್ಕೂ ಸಾಧ್ಯವಾಗುತ್ತದೆ ಎಂದು ಬಸ್ಸು ಮಾಲಕರು ಹೇಳುತ್ತಾರೆ.

ಸಂಚಾರ ಬಂದ್‌ ಮಾಡುವ ಯೋಚನೆ
ನಾವು ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಸದ್ಯದ ವ್ಯವಸ್ಥೆಯಲ್ಲಿ ನಷ್ಟದಿಂದ ಬಸ್ಸುಗಳನ್ನು ಓಡಿಸುವುದು ಅಸಾಧ್ಯವಾಗಿದೆ. ಹೀಗಾಗಿ ಅನಿವಾರ್ಯವಾಗಿ ಈ ತಿಂಗಳ ಅಂತ್ಯಕ್ಕೆ ಕಾನೂನು ಪ್ರಕಾರ ಟ್ಯಾಕ್ಸ್‌ ಸರಂಡರ್‌ ಮಾಡಿ ಸಂಚಾರ ಬಂದ್‌ ಮಾಡುವ ಯೋಚನೆಗೆ ಬಂದಿದ್ದೇವೆ. ಈಗಿನ ವ್ಯವಸ್ಥೆಯಲ್ಲಿ ಪ್ರಯಾಣಿಕರು ಕೂಡ ಬಸ್ಸನ್ನು ಅವಲಂಬಿಸದೆ ಪರ್ಯಾಯ ವ್ಯವಸ್ಥೆಯತ್ತ ಮುಖ ಮಾಡಿದ್ದು, ಎಲ್ಲ ಬಸ್ಸುಗಳು ನಷ್ಟದಿಂದ ಓಡುತ್ತಿವೆ.
-ದುರ್ಗಾಪ್ರಸಾದ್‌ ಹೆಗ್ಡೆ, ಅಧ್ಯಕ್ಷರು, ಕಿನ್ನಿಗೋಳಿ ವಲಯ ಬಸ್ಸು ಮಾಲಕರ ಸಂಘ

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಪಂಜಿಕಲ್ಲು; ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

Bantwal: ಪಂಜಿಕಲ್ಲು; ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

Sullia: ಯುವಕನ ಮೇಲೆ ಹಲ್ಲೆ; ಮತ್ತೋರ್ವ ಸೆರೆ

Sullia: ಯುವಕನ ಮೇಲೆ ಹಲ್ಲೆ; ಮತ್ತೋರ್ವ ಸೆರೆ

Theft Case: ಟವರ್‌ನ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು; ದೂರು

Theft Case: ಟವರ್‌ನ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು; ದೂರು

ಬೆಳ್ತಂಗಡಿ ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

Belthangady: ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

1(1)

Koyyur: ಗ್ರಾಮದ ಶಾಲೆಯ ದುಃಸ್ಥಿತಿ; ಕುಸಿಯುವ ಭೀತಿಯಲ್ಲಿ ಬಜಿಲ ಶಾಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.