ಬಾಳುಗೋಡು: ಗಾಯಾಳು ಕಾಡಾನೆಗೆ ಚಿಕಿತ್ಸೆ

3 ದಿನಗಳ ಹಿಂದೆ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಗಜರಾಜ

Team Udayavani, May 11, 2019, 8:41 AM IST

24

ಗಾಯಗೊಂಡ ಆನೆಗೆ ವನ್ಯಜೀವಿ ವೈದ್ಯರಿಂದ ಚಿಕಿತ್ಸೆ ನೀಡಲಾಯಿತು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಅರಣ್ಯ ವಿಭಾಗದ ಬಾಳುಗೋಡು ಮೀಸಲು ಅರಣ್ಯದಲ್ಲಿ ಬುಧವಾರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆಗೆ ಮೂರನೇ ದಿನ ಶುಕ್ರವಾರ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ರಾಜೀವ ಗಾಂಧಿ ರಾಷ್ಟ್ರೀಯ ಅಭಯಾರಣ್ಯ ವನ್ಯಜೀವಿ ವಿಭಾಗದ ವೈದ್ಯಾಧಿಕಾರಿ ಮುಜೀಬ್‌ ನೇತೃತ್ವದಲ್ಲಿ ಸ್ಥಳಿಯ ಪಶುವೈದ್ಯರ ಸಹಕಾರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಸಮತಟ್ಟು ಜಾಗಕ್ಕೆ ತರಲು ಸಾಹಸ
ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡು ಸುತ್ತಾಡುತ್ತಿದ್ದ ಆನೆ ಯನ್ನು ಸಮತಟ್ಟಾದ ಸ್ಥಳಕ್ಕೆ ತರುವಲ್ಲಿ ಅರಣ್ಯಾಧಿಕಾರಿಗಳ ಪ್ರಯತ್ನ ಶುಕ್ರವಾರ ಫಲ ನೀಡಿತು. ಸುಳ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಸ್ಟ್ರಿನ್‌ ಪಿ. ಸೋನ್ಸ್‌ ಮಾರ್ಗದರ್ಶನದಲ್ಲಿ ಸುಬ್ರ ಹ್ಮಣ್ಯ ವಲಯಾರಣ್ಯಧಿಕಾರಿ ತ್ಯಾಗರಾಜ್‌ ಮತ್ತು ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್‌ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು, ಸಿಬಂದಿ ಹಾಗೂ ಊರವರ ಸಹಕಾರದಿಂದ ಆನೆಯನ್ನು ಪೊದೆಯ ಭಾಗದಿಂದ ಸಮತಟ್ಟಾದ ಸ್ಥಳಕ್ಕೆ ತರಲಾಯಿತು.

ಗಣಪತಿ ದೇವರಿಗೆ ಪೂಜೆ
ಗಾಯಗೊಂಡ ಆನೆಗೆ ಚಿಕಿತ್ಸೆ ಕಾರ್ಯಚರಣೆ ಯಶಸ್ವಿಯಾಗಿದೆ. ದಟ್ಟ ಕಾಡು ಪ್ರದೇಶದಲ್ಲಿ ಆನೆಯನ್ನು ಸುರಕ್ಷಿತ ಸ್ಥಳಕ್ಕೆ ತಂದು ಚಿಕಿತ್ಸೆ ನೀಡುವುದು ದೊಡ್ಡ ಸವಾಲಾಗಿತ್ತು. ತುಸು ಎಚ್ಚರ ತಪ್ಪಿದರೂ ಆನೆಯ ದೇಹಕ್ಕೆ ಗಾಯವಾಗುವ ಸಾಧ್ಯತೆಗಳಿತ್ತು. ಕಾರ್ಯಾಚರಣೆಗೂ ಮೊದಲು ಸುಬ್ರಹ್ಮಣ್ಯ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ್ದೆವು. ದೇವರ ಆಶೀರ್ವಾದ, ವೈದ್ಯರ ಚಿಕಿತ್ಸಾ ವಿಧಾನ, ಸಿಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಚಿಕಿತ್ಸೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಒಂದು ವಾರ ಕಾಲ ಆನೆಯ ಆರೋಗ್ಯ ಸ್ಥಿತಿ ಹಾಗೂ ಚಲನವಲನಗಳ ಮೇಲೆ ಸಿಬಂದಿ ನಿಗಾ ಇರಿಸುತ್ತಾರೆ ಎಂದು ಕಾರ್ಯಾಚರಣೆ ಬಳಿಕ ಎಸಿಎಫ್ ಆಸ್ಟ್ರಿನ್‌ ಪಿ. ಸೋನ್ಸ್‌ ಪ್ರತಿಕ್ರಿಯಿಸಿದರು.

ಆನೆಗಳ ಕಾದಾಟದಲ್ಲಿ ಗಾಯ
ಆನೆ ಮುಂಗಾಲಿಗೆ ಆಳವಾದ ಗಾಯವಾಗಿದ್ದು, ಅದರಲ್ಲಿ ಕೀವು ಉಂಟಾಗಿದೆ. ಆನೆಗಳು ಪರಸ್ಪರ ಜಗಳವಾಡುವ ಸಂದರ್ಭದಲ್ಲಿ ಎದುರಾಳಿ ಆನೆಯು ದಂತದ ತಿವಿತದಿಂದ ಗಾಯಗೊಂಡಿರುವ ಸಾಧ್ಯತೆ ಕಂಡುಬರುತ್ತಿದೆ. ಆನೆಯ ಗಾಯ ಒಣಗಲು ಮತ್ತು ನೋವು ಕಡಿಮೆಯಾಗಲು ಚುಚ್ಚುಮದ್ದು ಹಾಗೂ ಔಷಧ ನೀಡಿದ್ದೇವೆ. ವಾಸಿಯಾಗಲು ಮೂರರಿಂದ 4 ದಿನಗಳ ಕಾಲಾವಕಾಶ ಬೇಕು. ಬಳಿಕ ಪ್ರಕೃತಿ ಸಹಜವಾಗಿ ಅವುಗಳ ನೋವು ಮಾಸುತ್ತವೆ ಎಂದು ವೈದ್ಯರು ತಿಳಿಸಿದರು.

ಗುತ್ತಿಗಾರು ಪಶು ವೈದ್ಯಾಧಿಕಾರಿ ವೆಂಕಟಾಚಲಪತಿ ಸಹಕರಿಸಿದರು. ಫಾರೆಸ್ಟರ್‌ ಸಂತೋಷ್‌, ಸುಬ್ರಹ್ಮಣ್ಯ ಹಾಗೂ ಪಂಜ ವಲಯದ 30ಕ್ಕೂ ಅಧಿಕ ಸಿಬಂದಿ ಎರಡು ದಿನಗಳಿಂದ ಸತತ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಸ್ಥಳಿಯರು ಸಿಬಂದಿಗೆ ಊಟ, ವಸತಿ, ನೀರು ಇತ್ಯಾದಿ ಒದಗಿಸಿ ಸಹಕರಿಸಿದರು.

ಗಾಯಾಗೊಂಡ ಕಾಡಾನೆ ಚಿಕಿತ್ಸೆ ನೀಡುವುದನ್ನು ವೀಕ್ಷಿಸಲು ಸ್ಥಳೀಯರು ಬೆಳಗ್ಗೆಯಿಂದಲೇ ಕಾಡಿನ ಬದಿಯಲ್ಲಿ ಕಾದಿದ್ದರು. ಕೆಲವರು ಮರಗಳನ್ನೇರಿ ವೀಕ್ಷಿಸಿದರು. ಚಿಕಿತ್ಸೆ ವೇಳೆ ಆನೆ ಪಕ್ಕ ನಿಂತು ಸೆಲ್ಫಿ ಕ್ಲಿಕ್ಕಿಸಲೂ ಕೆಲವರು ಮುಂದಾದರು.

ಹೀಗೆ ನಡೆಯಿತು ಚಿಕಿತ್ಸೆ…
ಅಪರಾಹ್ನ 2 ಗಂಟೆಗೆ ಹೊತ್ತಿಗೆ ಆನೆಗೆ ವನ್ಯಜೀವಿ ವಿಭಾಗದ ವೈದ್ಯ ಮುಜೀಬ್‌ ಮತ್ತವರ ತಂಡ ಚಿಕಿತ್ಸೆ ಕಾರ್ಯಾಚರಣೆ ಆರಂಭಿಸಿತು. ಆರಂಭದಲ್ಲಿ ಆನೆಗೆ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ಅದು ಕೆಲಸ ಮಾಡದೇ ಇದ್ದಾಗಿ ತುಸು ಹೊತ್ತಿನಲ್ಲಿ ಹೆಚ್ಚುವರಿ ಡೋಸ್‌ನ ಅರಿವಳಿಕೆ ನೀಡಲಾಯಿತು. ಈ ವೇಳೆ ಆನೆಯು ನಿಧಾನವಾಗಿ ನಡೆದಾಡುತ್ತ ನೀರಿನ ಝರಿಯ ಒಂದು ಭಾಗಕ್ಕೆ ಬಂದು ಸಮತಟ್ಟಾದ ಸ್ಥಳದಲ್ಲಿ ಮರವೊಂದಕ್ಕೆ ಒರಗಿ ನಿಂತಿತು. ಬಳಿಕ ವೈದ್ಯರು ಮುಂಗಾಲಿನ ಮೇಲ್ಭಾಗದಲ್ಲಿ ಆಗಿರುವ ಆಳವಾದ ಗಾಯವನ್ನು ಔಷಧ ಬಳಸಿ ಸ್ವಚ್ಛಗೊಳಿಸಿದರು. ಗಾಯದ ಒಳಭಾಗವನ್ನು ಪೂರ್ಣವಾಗಿ ಶುಚಿಗೊಳಿಸಿ, ಗಾಯದೊಳಗೆ ಮದ್ದು ಇರಿಸಿ, ಚುಚ್ಚುಮದ್ದು ನೀಡಲಾಯಿತು. ಬಳಿಕ ಸ್ವಲ್ಪ ಹೊತ್ತಿನಲ್ಲಿ ಆನೆ ಪ್ರಜ್ಞೆ ಪಡೆದುಕೊಂಡು ಚಲನವಲನ ಆರಂಭಿಸಿತು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.