Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

ನೆಲೆ ಕಳೆದುಕೊಂಡ ಅಂಗವಿಕಲೆ ಆಕ್ರಂದನ; ಶಾಸಕರ ಟ್ರಸ್ಟ್‌ನಿಂದ 3 ಸೆಂಟ್ಸ್‌ ಜಾಗ ಭರವಸೆ

Team Udayavani, Oct 18, 2024, 12:50 PM IST

2

ಜಡಿದ ವಸತಿಗೃಹದ ಮುಂಭಾಗದಲ್ಲಿ ಕುಳಿತ ಮಹಿಳೆ.

ಪುತ್ತೂರು: ಎಪಿಎಂಸಿ ಪ್ರಾಂಗಣದ ಸರಕಾರಿ ವಸತಿ ಗೃಹಕ್ಕೆ ಅಧಿಕಾರಿಗಳು ಬೀಗ ಜಡಿದ ಪರಿಣಾಮ ಅಲ್ಲಿ ವಾಸವಾಗಿದ್ದ ಅಂಗವಿಕಲ ಮಹಿಳೆ ನೆಲೆ ಕಳೆದುಕೊಂಡಿದ್ದಾರೆ. ಬುಧವಾರ ತಡ ರಾತ್ರಿವರೆಗೂ ಈ ಮಹಿಳೆ ಮನೆಯ ಹೊರಭಾಗದಲ್ಲೇ ಕಾಲ ಕಳೆದು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು.

ಅಂಗವಿಕಲರಾಗಿರುವ ಜಾನಕಿ 28 ವರ್ಷಗಳಿಂದ ಎಪಿಎಂಸಿಯಲ್ಲಿ ಹೊರಗುತ್ತಿಗೆ ಸಿಬಂದಿಯಾಗಿದ್ದಾರೆ. ಆಕೆ ಇಲ್ಲಿನ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಆದರೆ ಇದು ಅನಧಿಕೃತ ಎಂದು ಹೇಳಿ ಎಪಿಎಂಸಿ ಕಾರ್ಯ ದರ್ಶಿ ಎಂ.ಸಿ.ಪಡಾಗನೂರ ಅವರ ನೇತೃತ್ವದ ಅಧಿಕಾರಿಗಳ ತಂಡ ಬುಧ ವಾರ ವಸತಿಗೃಹಕ್ಕೆ ಬೀಗ ಜಡಿದಿತ್ತು. ಇದರಿಂದಾಗಿ ನೆಲೆ ಕಳೆದುಕೊಂಡ ಆಕೆಗೆ ಶಾಸಕ ಅಶೋಕ್‌ ಕುಮಾರ್‌ ರೈ ಅವರು ಮೂರು ಸೆಂಟ್ಸ್‌ ಜಾಗ ನೀಡುವುದಾಗಿ ಭರವಸೆ ನೀಡಿದ್ದಾರೆ.

ಏನಿದು ಘಟನೆ?
ಎಪಿಎಂಸಿ ಪ್ರಾಂಗಣದೊಳಗಿರುವ ಸರಕಾರಿ ವಸತಿ ಗೃಹಗಳ ಪೈಕಿ ಒಂದರಲ್ಲಿ ಜಾನಕಿ ಅವರು ವರ್ಷದಿಂದ ವಾಸವಾಗಿದ್ದರು. ಸರಕಾರಿ ನೌಕರರಲ್ಲದವರ ವಾಸಕ್ಕೆ ಕೆಲವರು ಆಕ್ಷೇಪ ಸಲ್ಲಿಸಿದ್ದರು. ಹೀಗಾಗಿ ಮನೆಯಿಂದ ವಾಸ ತೆರವು ಮಾಡಲು ಎಪಿಎಂಸಿ ಕಾರ್ಯದರ್ಶಿ ನೋಟಿಸ್‌ ಜಾರಿಗೊಳಿಸಿದ್ದರು. ಆದರೆ ಆಕೆ ತೆರವು ಮಾಡಿರಲಿಲ್ಲ. ಈ ನಡುವೆ ಬುಧವಾರ ಎಪಿಎಂಸಿ ಆಡಳಿತಾ ಧಿಕಾರಿ ಆಗಿರುವ ತಹಶೀಲ್ದಾರ್‌ ಪುರಂದರ ಹೆಗ್ಡೆ ಅವರ ಸೂಚನೆಯ ಮೇರೆಗೆ ಎಪಿಎಂಸಿ ಕಾರ್ಯದರ್ಶಿಗಳು ಪೊಲೀಸ್‌ ಭದ್ರತೆಯಲ್ಲಿ ಮನೆಗೆ ಬೀಗ ಜಡಿದರು.

ಈ ಕಾರ್ಯಾಚರಣೆ ವೇಳೆ ಜಾನಕಿ ಅವರು ಎಪಿಎಂಸಿ ಕಚೇರಿಯಲ್ಲಿದ್ದರು. ಸಿಬಂದಿ ಮೂಲಕ ಕರೆಸಿದರೂ ಬಂದಿರಲಿಲ್ಲ. ಹೀಗಾಗಿ ಅವರ ಅನು ಪಸ್ಥಿತಿಯಲ್ಲಿ ಬೀಗ ಜಡಿಯಲಾಯಿತು.

ಮನೆ ನೀಡಿದ್ದು ಎಪಿಎಂಸಿ..!
ಎಪಿಎಂಸಿ ಪ್ರಾಂಗಣದಲ್ಲಿನ ಖಾಲಿ ಉಳಿದಿರುವ ಸರಕಾರಿ ವಸತಿಗೃಹವನ್ನು ಬೇರೆ ಇಲಾಖೆಯ ಸರಕಾರಿ ನೌಕರರಿಗೆ ನೀಡಲು ಕಾನೂನು ರೂಪಿಸಲಾಗಿತ್ತು. ಅದರಂತೆ ಹಿಂದಿನ ಕಾರ್ಯದರ್ಶಿ ಅವರು ಕೊಂಬೆಟ್ಟು ಸರಕಾರಿ ಹಾಸ್ಟೆಲ್‌ನ ಅಡುಗೆ ಸಹಾಯಕಿ ಪ್ರೇಮ ಕುಮಾರಿ ಅವರಿಗೆ ಮನೆ ನೀಡಿದ್ದರು. ಈ ಮನೆಯಲ್ಲಿ ಎಪಿಎಂಸಿ ಹೊರಗುತ್ತಿಗೆ ಸಿಬಂದಿ ಜಾನಕಿ ಅವರು ಎಪಿಎಂಸಿಯ ಸಾಮಾನ್ಯ ಸಭೆಯ ಒಪ್ಪಿಗೆ ಪಡೆದು ವಾಸ್ತವ್ಯ ಹೂಡಿದ್ದರು. ಬಳಿಕದ ಕೆಲವು ಘಟನೆಯಿಂದಾಗಿ ಪ್ರೇಮಾ ಕುಮಾರಿ ಅವರು ತನಗೆ ಮನೆ ಬೇಡ ಎಂದು ಲಿಖೀತವಾಗಿ ತಿಳಿಸಿದ್ದರು. ಹೀಗಾಗಿ ನಾಲ್ಕು ತಿಂಗಳ ಹಿಂದೆ ಮನೆಯಲ್ಲಿದ್ದ ಜಾನಕಿ ಅವರಿಗೆ ಮನೆ ತೆರವು ಮಾಡುವಂತೆ ಸೂಚನೆ ನೀಡಲಾಗಿತ್ತು.

ಜಾನಕಿ ಅವರ ವಾದವೇನು?
3 ಮೂರು ವರ್ಷಗಳ ಹಿಂದೆ ನನ್ನ ಗಂಡ ಮೃತಪಟ್ಟಿದ್ದರು. ಬಾಡಿಗೆ ಮನೆಯಲ್ಲಿದ್ದ ನಾನು ವಸತಿಗೃಹದಲ್ಲಿ ವಾಸವಾಗಿದ್ದ ಪ್ರೇಮ ಕುಮಾರಿ ಅವರ ಜತೆಗೆ ಇರಲು ಕೇಂದ್ರ ಕಚೇರಿಯ ಅನುಮತಿ ಪಡೆದಿದ್ದೆ. ಪ್ರೇಮಾ ಅವರನ್ನು ವಸತಿಗೃಹದಿಂದ ಬಿಡುಗಡೆಗೊಳಿಸಿದ ಬಳಿಕ, ವಸತಿಗೃಹ ತನಗೆ‌ ನೀಡುವಂತೆ ಪುತ್ತೂರಿನಲ್ಲಿ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯದಲ್ಲಿರುವ ನನ್ನ ಅಣ್ಣ ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಿದ್ದರು. ಖಾಲಿಯಿರುವ ವಸತಿ ಗೃಹದಲ್ಲಿ ತನ್ನ ಸಹೋದರನಿಗೆ ಅವಕಾಶ ನೀಡಿದರೆ ನಾನು ಅವರ ಜತೆಗೆ ವಾಸಿಸುವುದಾಗಿ ಕೇಂದ್ರ ಕಚೇರಿಗೆ ಮನವಿ ಮಾಡಿದ್ದೆ. ವಸತಿ ಗೃಹ ನೀಡುವಂತೆ ಕೇಂದ್ರ ಕಚೇರಿಯಿಂದ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದರೂ ಕಾರ್ಯದರ್ಶಿ ನೀಡದೇ ಸತಾಯಿಸುತ್ತಿದ್ದಾರೆ ಎನ್ನುವುದು ಜಾನಕಿ ಅವರ ವಾದ.

ಮಳೆಯಲ್ಲೇ ತಡರಾತ್ರಿ ತನಕ ಕುಳಿತ ಮಹಿಳೆ
ಸಂಜೆ ಕೆಲಸ ಮುಗಿಸಿ ಮರಳಿದಾಗ ಬಾಗಿಲಿಗೆ ಬೀಗ ಜಡಿದ ಕಾರಣ ಮಹಿಳೆಯು ಸುರಿಯುವ ಮಳೆಯಲ್ಲೇ ಮನೆ ಮುಂಭಾಗದಲ್ಲಿ ಕುಳಿತರು. ಊಟವನ್ನೂ ಮಾಡದೆ ತಡರಾತ್ರಿ ತನಕ ಮೌನ ಪ್ರತಿಭಟನೆ ಮುಂದುವರಿಸಿದ್ದರು. ಅಸ್ವಸ್ಥರಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

3 ಸೆಂಟ್ಸ್‌ ಜಾಗದ ಭರವಸೆ
ನಿಯಮ ಪ್ರಕಾರ ಜಾನಕಿ ಅವರಿಗೆ ಸರಕಾರಿ ವಸತಿಗೃಹದಲ್ಲಿ ಇರಲು ಅವಕಾಶ ಇಲ್ಲ. ಹೀಗಾಗಿ ಆರು ತಿಂಗಳ ಹಿಂದೆಯೇ ಸೂಚನೆ ನೀಡಲಾಗಿದೆ. ರೈ ಚಾರಿಟೇಬಲ್‌ ಟ್ರಸ್ಟ್‌ ಮೂಲಕ ವಿಟ್ಲದಲ್ಲಿ ಬಡವರಿಗೆ ನಿವೇಶನ, ಮನೆ ನೀಡಲು ಯೋಜನೆ ರೂಪಿಸಿದ್ದು ಜಾನಕಿ ಅವರಿಗೆ 3 ಸೆಂಟ್ಸ್‌ ಜಾಗ ನೀಡಲಾಗುವುದು. ಇದಕ್ಕೆ ಜಾನಕಿಯವರು ಒಪ್ಪಿಗೆ ಸೂಚಿಸಿದ್ದಾರೆ.
-ಅಶೋಕ್‌ ಕುಮಾರ್‌ ರೈ ಶಾಸಕ, ಪುತ್ತೂರು

ಟಾಪ್ ನ್ಯೂಸ್

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

11-bng

Bengaluru: ಉದ್ಯಮಿ ಮನೆಯಲ್ಲಿ 1.22 ಕೋಟಿ ಚಿನ್ನ ಕಳವು; ಇಬ್ಬರ ಸೆರೆ

6

Kundapura: ಮರವಂತೆ ಮಾರಸ್ವಾಮಿ ಸ್ಟಾಪ್‌ನಲ್ಲಿ ನಿಲ್ಲದ ಸರಕಾರಿ ಬಸ್‌!

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.