ಉದ್ಘಾಟನೆಗೊಂಡು ತಿಂಗಳಾದರೂ ಕಾಮಗಾರಿ ಇನ್ನೂ ಅಪೂರ್ಣ

ಎಪಿಎಂಸಿ ರೈಲ್ವೇ ಮಾರ್ಗದ ಅಂಡರ್‌ಪಾಸ್‌ ಕಾಮಗಾರಿ

Team Udayavani, May 19, 2023, 3:10 PM IST

ಉದ್ಘಾಟನೆಗೊಂಡು ತಿಂಗಳಾದರೂ ಕಾಮಗಾರಿ ಇನ್ನೂ ಅಪೂರ್ಣ

ಪುತ್ತೂರು: ಪುತ್ತೂರು ನಗರದ ಎಪಿಎಂಸಿ ರೈಲ್ವೇ ಅಂಡರ್‌ಪಾಸ್‌ನ ಕಾಮಗಾರಿ ಮುಗಿಯದಿದ್ದರೂ ಚುನಾವಣೆ ಘೋಷಣೆಯ ಕಾರಣದಿಂದ ತರಾತುರಿಯಲ್ಲಿ ಉದ್ಘಾಟನೆಗೊಂಡಿದ್ದು, ಸದ್ಯ ಚುನಾವಣೆ ಮುಗಿದು ಫಲಿತಾಂಶ ಪ್ರಕಟವಾಗಿದ್ದರೂ ಕಾಮಗಾರಿ ಪೂರ್ಣಗೊಂಡಿಲ್ಲ.

ಬಹುವರ್ಷದ ಬೇಡಿಕೆಯಾಗಿದ್ದ ಎಪಿಎಂಸಿ ರೈಲ್ವೇ ಮಾರ್ಗದ ಅಂಡರ್‌ಪಾಸ್‌ ಕಾಮಗಾರಿ ಉದ್ಘಾಟನೆಗೊಂಡು ತಿಂಗಳು ಕಳೆದಿದೆ. ಆದರೆ ಸಂಚಾರಕ್ಕೆ ಇನ್ನೂ ಮುಕ್ತವಾಗಿಲ್ಲ. ಇದರಿಂದ ವಾಹನ ಸವಾರರು ಹಳೆಯ ರೈಲ್ವೇ ಗೇಟಿನ ಮಾರ್ಗದಲ್ಲೇ ಸಂಚಾರ ಮುಂದುವರಿಸಿದ್ದಾರೆ.

ಏನಿದು ಯೋಜನೆ
ನಗರದ ಅರುಣಾ ಚಿತ್ರ ಮಂದಿರದ ಬಳಿಯಿಂದ ಸಾಲ್ಮರ ಎಪಿಎಂಸಿ ಮೂಲಕ ಕೇಪುಳು ಸಂಪರ್ಕ ರಸ್ತೆಯಲ್ಲಿ ರೈಲ್ವೇ ಮಾರ್ಗ ಇದ್ದು ಅಲ್ಲಿ ರೈಲು ಹಾದು ಹೋಗುವ ವೇಳೆ ಗೇಟು ಅಳವಡಿಕೆಯಿಂದ ನೂರಾರು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಕಾಯಬೇಕಾದ ಸ್ಥಿತಿ ಇತ್ತು. ಹಲವು ದಶಕಗಳ ಬೇಡಿಕೆಗೆ ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಶಾಸಕ ಸಂಜೀವ ಮಠಂದೂರು, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್‌ ಮೆದು ಅವರ ಪ್ರಯತ್ನದ ಫಲವಾಗಿ ರಾಜ್ಯ ಸರಕಾರ ಹಾಗೂ ರೈಲ್ವೇ ಇಲಾಖೆಯ ಸಹಭಾಗಿತ್ವದಲ್ಲಿ 13 ಕೋ.ರೂ. ವೆಚ್ಚದ ಅಂಡರ್‌ಪಾಸ್‌ ನಿರ್ಮಾಣಕ್ಕೆ 2022ರ ಮೇ 21ರಂದು ಶಿಲಾನ್ಯಾಸ ನೆರವೇರಿಸಲಾಗಿತ್ತು.

ಅಪೂರ್ಣ ಕಾಮಗಾರಿಯ ಉದ್ಘಾಟನೆ
ರೈಲ್ವೇ ರಸ್ತೆಯ ಅಂಡರ್‌ಪಾಸ್‌ ಕಾಮಗಾರಿಗೆ 10 ತಿಂಗಳು ಕಾಲಾವಕಾಶ ನೀಡಲಾಗಿತ್ತು. ವಿಧಾನಸಭಾ ಚುನಾವಣೆ ಘೋಷಣೆಯಾಗುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ (ಮಾ. 26) ಉದ್ಘಾಟನೆ ನಡೆಸಲಾಗಿತ್ತು. ಸುಮಾರು 600 ಮೀಟರ್‌ ಉದ್ದದ ಈ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲಾಗಿತ್ತಾದರೂ, ಉದ್ಘಾಟನೆಯ ಸಮಯದಲ್ಲಿ ದ್ವಿಪಥ ರಸ್ತೆಗೆ ಜಲ್ಲಿ ಹಾಕಿಬಿಡಲಾಗಿತ್ತು. ಪ್ರಸ್ತುತ ಕಾಮಗಾರಿ ನಡೆಯುತ್ತಿದೆ. ಚತುಷ್ಪಥದ ರಸ್ತೆಯಲ್ಲಿ ದ್ವಿಪಥ ಮಾರ್ಗ ತೆರೆದುಕೊಂಡಿದ್ದು ವಾಹನ ಸಂಚಾರಕ್ಕೆ ಅವಕಾಶ ಇದೆಯೋ ಅನ್ನುವುದನ್ನು ರೈಲ್ವೇ ಇಲಾಖೆ ಇನ್ನೂ ಸ್ಪಷ್ಟಪಡಿಸದ ಕಾರಣ ವಾಹನ ಸವಾರರು ಹಳೆ ಮಾರ್ಗದಲ್ಲೇ ಸಂಚಾರ ಮುಂದುವರಿಸಿದ್ದಾರೆ.

ಖಾಸಗಿ ಜಾಗ
ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅಂಡರ್‌ ಪಾಸ್‌ ಸಮೀಪ ಖಾಸಗಿ ಜಾಗ ಸ್ವಾಧೀನ ಪ್ರಕ್ರಿಯೆ ನಡೆ ಯಬೇಕಾಗಿದೆ. ಜಾಗದ ಮಾಲಕರು ತಕ್ಕ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದು ಇದು ಸರಕಾರದ ಹಂತದಲ್ಲಿ ತೀರ್ಮಾನವಾಗಬೇಕಿದ್ದು , ಕಾಮಗಾರಿ ನಡೆಯದೆ ಉಳಿದುಕೊಂಡಿದೆ. ಇದರಿಂದ ಸದ್ಯ ಕಾಮಗಾರಿ ಪೂರ್ಣಗೊಳ್ಳುವುದು ಅನುಮಾನವಾಗಿದೆ.

ಅನುದಾನ ಬಾಕಿ
ರೈಲ್ವೇ ಇಲಾಖೆ ಹಾಗೂ ಕರ್ನಾಟಕ ಸರಕಾರ ಶೇ. 50ರ ಒಪ್ಪಂದದಲ್ಲಿ ಕಾಮಗಾರಿಯನ್ನು ಮುಂದುವರಿಸುವ ಒಪ್ಪಂದ ಮಾಡಿಕೊಂಡಿದ್ದು, ಕಾಮಗಾರಿ ಪೂರ್ಣವಾಗಿದ್ದರೂ, 2023ರ ಫೆ. 1ರ ವರೆಗೆ ಕರ್ನಾಟಕ ಸರಕಾರದಿಂದ ಬರಬೇಕಾಗಿದ್ದ ಶೇ.50 ಅನುದಾನ ಬಾಕಿ ಉಳಿದಿದೆ ಎಂದು ಮಾಹಿತಿ ಹಕ್ಕಿನಲ್ಲಿ ಕೇಳಿದ ಮಾಹಿತಿಗೆ ರೈಲ್ವೇ ಇಲಾಖೆ ಮಾಹಿತಿ ನೀಡಿತ್ತು.

ಪೂರ್ಣಗೊಂಡ ಬಳಿಕವೇ ಉದ್ಘಾಟನೆಯಾಗಲಿ
ಕಾಮಗಾರಿ ಪೂರ್ಣವಾಗದೆ ಅಂಡರ್‌ ಪಾಸ್‌ ಉದ್ಘಾಟನೆ ಮಾಡಿದ್ದರಿಂದ ಎಲ್ಲರಿಗೂ ರಸ್ತೆ ತೆರೆದುಕೊಂಡಿದೆ ಎಂಬ ಸಂದೇಶ ಹೋಗಿದೆ. ಯಾವುದೇ ಕೆಲಸ ಪೂರ್ಣಗೊಂಡ ಬಳಿಕವಷ್ಟೇ ಉದ್ಘಾಟನೆ ಆಗಬೇಕು.
-ದಿನೇಶ್‌ ಪೂಜಾರಿ,
ವಾಹನ ಸವಾರ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.