Vitla: ಮಲೆತ್ತಡ್ಕ ಗೌರಿಮೂಲೆ: ಈಡೇರದ ಸರ್ವಋತು ರಸ್ತೆ ಬೇಡಿಕೆ

ಪ್ರಧಾನಿ ಕಚೇರಿ ಪತ್ರಕ್ಕೂ ಸಿಕ್ಕಿಲ್ಲ ಮನ್ನಣೆ, ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ 2.5 ಕಿ.ಮೀ. ಉದ್ದದ ರಸ್ತೆ

Team Udayavani, Jul 27, 2024, 12:49 PM IST

Screenshot (5) copy

ವಿಟ್ಲ: ಪುಣಚ ಗ್ರಾಮ ವ್ಯಾಪ್ತಿಗೊಳಪಟ್ಟ ಮಲೆತ್ತಡ್ಕ-ಬರೆಂಗಾಯಿ- ಗೌರಿಮೂಲೆ-ಬಸ್ರಿಮೂಲೆ ಗುಂಡ್ಯಡ್ಕ-ಪದವು ಮೊದಲಾದ ಕಡೆಗಳ ನಾಗರಿಕರು ಬಳಸುವ ಸುಮಾರು 2.5 ಕಿ.ಮೀ ದೂರದ ರಸ್ತೆ ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗಿ ನಡೆದಾಡಲೂ ಸಾಧ್ಯವಾಗದ ಸ್ಥಿತಿಯಿದೆ.

ದ್ವಿಚಕ್ರ ವಾಹನ ಸ್ಕಿಡ್‌ ಆಗಿ ಅಪಘಾತ ಸಂಭವಿಸುವುದು ಇಲ್ಲಿ ಮಾಮೂಲಿಯಾಗಿದೆ. ಈ ಭಾಗದ ಜನರು ಪ್ರಮುಖ ರಸ್ತೆಯನ್ನು ಸೇರಲು ದಿನಂಪ್ರತಿ ಹರಸಾಹಸ ಪಡುತ್ತಿದ್ದಾರೆ. ಅನುದಾನಕ್ಕಾಗಿ ಜನಪ್ರತಿನಿಧಿಗಳನ್ನು ಅಧಿಕಾರಿಗಳನ್ನು ಸಂಪರ್ಕಿಸಿದರೂ ಕಳೆದ 6-7 ವರ್ಷಗಳಿಂದ ಸರ್ವಋತು ರಸ್ತೆ ನಿರ್ಮಾಣ ಮಾಡಲು ಮಾಡಿದ ಪ್ರಯತ್ನಗಳು ಇಂದಿಗೂ ಕೈಗೂಡಲಿಲ್ಲ.

ಚಿಕ್ಕಪುಟ್ಟ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಪ್ರತೀ ವರ್ಷ ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಸಾಗಲು ಕಷ್ಟಪಡುತ್ತಾರೆ. ಗ್ರಾಮದ ಮುಖ್ಯ ಕೇಂದ್ರಕ್ಕೆ ಬರಲು ಎಲ್ಲೆಲ್ಲೋ ಕಾಲುದಾರಿಯನ್ನು ಬಳಸಿ ಹೋಗಬೇಕಾದ ಶೋಚನೀಯ ಸ್ಥಿತಿಯಿದೆ. ಚುನಾವಣೆಯ ಸಂದರ್ಭದಲ್ಲಿ ಆಶ್ವಾಸನೆ, ಭರವಸೆ ನೀಡಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತೆ ಮರೆತುಬಿಡುತ್ತಾರೆ.

ಮಳೆಗಾಲದಲ್ಲಿ ನರಕಸದೃಶ

ಪುಣಚ ಗ್ರಾಮ ಸಡಕ್‌ ರಸ್ತೆಯಿಂದ ಗ್ರಾಮ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಮಲೆತ್ತಡ್ಕ-ಗೌರಿಮೂಲೆ- ಪದವು ರಸ್ತೆ ಮೇ ತಿಂಗಳಿನಿಂದ ಸೆಪ್ಟೆಂಬರ್‌ ತನಕ ನಿತ್ಯ ಸಂಚಾರಿಗಳಿಗೆ ನಡೆದಾಡಲೂ ಸಾಧ್ಯವಾಗದೇ ನರಕಸದೃಶವಾಗಿರುತ್ತದೆ. ದ್ವಿಚಕ್ರ, ಅಟೋರಿಕ್ಷಾ ಕಾರುಗಳಂತಹ ವಾಹನಗಳೂ ಸಂಚರಿಸಲು ಸಾಧ್ಯವಾಗದ ಸ್ಥಿತಿ ಉದ್ಭವಿಸುತ್ತದೆ. ಜೀಪು, ಪಿಕಪ್‌ ಲಾರಿಗಳಂತಹ ವಾಹನಗಳು ಬಹಳ ಕಷ್ಟಪಟ್ಟು ಒಂದು ಬಾರಿ ಸಂಚರಿಸಿದರೆ ಇತರ ಯಾವುದೇ ವಾಹನಗಳು ಮತ್ತೆ ಆ ರಸ್ತೆಯಲ್ಲಿ ಸಂಚರಿಸಲಾಗುವುದಿಲ್ಲ.

ಪುಣಚ ಗ್ರಾ.ಪಂ.ನಿಂದ ಈ ರಸ್ತೆಗೆ ಹಿಂದೆ ಅನುದಾನ ನೀಡಲಾಗಿದೆ. ಪಂಚಾಯತ್‌ನಲ್ಲಿ ದೊಡ್ಡ ಅನುದಾನ ಇರುವುದಿಲ್ಲ. ಜಾಸ್ತಿ ನೀರು ನಿಲ್ಲುವ ಜಾಗವನ್ನು ಗುರುತಿಸಿ ಜಲ್ಲಿಹುಡಿ ಹಾಕಿಕೊಡಲಾಗಿದೆ. ಲಕ್ಷಗಟ್ಟಲೆ ರೂ. ಅನುದಾನವನ್ನು ಪಂಚಾಯತ್‌ ಹೊಂದಿಸಲು ಕಷ್ಟ. ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು.
-ರವಿ, ಪಿಡಿಒ, ಪುಣಚ

ಪ್ರಧಾನಿಗೆ ಪತ್ರ
ಇಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಸುಮಾರು 1.25 ಕೋಟಿ ರೂ. ಗಿಂತಲೂ ಅಧಿಕ ವೆಚ್ಚ ಬೇಕಾಗಬಹುದೆಂದು ಅಂದಾಜಿಸಲಾಗಿದ್ದು, ಸ್ಥಳೀಯರು ಪ್ರಧಾನಿ ಕಚೇರಿಗೆ ಸಮಸ್ಯೆಯ ಬಗ್ಗೆ ವಿವರಿಸಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಆ ಪತ್ರಕ್ಕೆ ಪ್ರಧಾನಿ ಕಚೇರಿ ಸ್ಪಂದಿಸಿ, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ದ.ಕ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಈ ಬಗ್ಗೆ ಕೂಡಲೇ ಪರಿಶೀಲಿಸಿ ವರದಿ ಕೊಡುವಂತೆ ಸೂಚನೆ ನೀಡಿತ್ತು. ಬಂಟ್ವಾಳ ತಾ. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮೂಲಕ ರಸ್ತೆ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಯಿತು. ಕಾಂಕ್ರೀಟ್‌ ಕಾಮಗಾರಿ ನಡೆಸುವುದಕ್ಕೆ ಮತ್ತು ಸರ್ವಋತು ರಸ್ತೆಯನ್ನಾಗಿಸುವುದಕ್ಕೆ 1.25 ಕೋ. ವೆಚ್ಚ ತಗಲಬಹುದೆಂದು ಇಲಾಖೆ 2018ರಲ್ಲಿ ವರದಿ ನೀಡಿದೆ. ವರದಿಯ ಬಳಿಕ ಮಾತ್ರ ಯಾವುದೇ ರೀತಿಯ ಪ್ರಗತಿ ಕಾಣಲಿಲ್ಲ.

– ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.