
Uppinangady ಮೂರು ದಾರಿ ಸೇರುವಲ್ಲಿ ತೆಂಗಿನಕಾಯಿ ಒಡೆದ ದಂಪತಿ
ಗ್ರಾ. ಪಂ. ಪ್ರಮುಖರು ಗೊಂದಲದಲ್ಲಿ
Team Udayavani, Aug 9, 2024, 12:13 AM IST

ಉಪ್ಪಿನಂಗಡಿ: ದಂಪತಿಯೊಬ್ಬರು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಪಂಚಾಯತ್ ಕಚೇರಿ ಮುಂಭಾಗ ತೆಂಗಿನಕಾಯಿ ಒಡೆದು ತಮ್ಮ ಮುಗ್ಧ ಭಕ್ತಿಯನ್ನು ಪ್ರದರ್ಶಿಸಿದ್ದರು. ಆದರೆ ಇವರ ಈ ನಡೆ ಪಂಚಾಯತ್ ಆಡಳಿತಗಾರರಲ್ಲಿ ಹಲವು ಪ್ರಶ್ನೆ ಮೂಡುವಂತೆ ಮಾಡಿದ ಘಟನೆ 34ನೇ ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ.
ಗುರುವಾರ ಪಂಚಾಯತ್ ಕಚೇರಿಯ ಸಿಸಿ ಕೆಮರಾ ದೃಶ್ಯಾವಳಿಯನ್ನು ಪರಿಶೀಲಿಸುತ್ತಿದ್ದಾಗ ಬುಧವಾರ ಮಧ್ಯ ರಾತ್ರಿ 12 ಗಂಟೆ ಸುಮಾರಿಗೆ ಪಂಚಾಯತ್ ಕಚೇರಿ ಗೇಟಿನ ಮುಂಭಾಗದಲ್ಲಿ ದಂಪತಿ ನಿಂತಿರುವುದು, ಸಮೀಪದಲ್ಲಿ ನಿಂತಿದ್ದ ವಾಹನವೊಂದು ಹೋಗುವುದನ್ನು ಕಾಯುತ್ತಿದ್ದುದು, ವಾಹನ ಹೋದ ಕೂಡಲೇ ಕೈಯಲ್ಲಿದ್ದ ತೆಂಗಿನ ಕಾಯಿಯನ್ನು ಪ್ರವೇಶದ್ವಾರದ ಮುಂಭಾಗದಲ್ಲಿ ಒಡೆದು ಹಿಂದಿರುಗುತ್ತಿದ್ದ ಕೃತ್ಯಗಳೆಲ್ಲವೂ ಕಂಡುಬಂದಿತ್ತು. ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರಿಬ್ಬರು ಸ್ಥಳೀಯ ನಿವಾಸಿಗರೆನ್ನುವುದು ದೃಢವಾಯಿತು.
ಪಂಚಾಯತ್ ಕಚೇರಿಯ ಗೇಟಿನ ಬಳಿ ತೆಂಗಿನಕಾಯಿ ಒಡೆಯ ಬೇಕಾದರೆ ಯಾವುದೋ ವಾಮಾಚಾರ ಮಾಡಿರಬಹುದೆಂಬ ಶಂಕೆ ಪಂಚಾಯತ್ ಆಡಳಿತಗಾರರನ್ನು ಕಾಡಿತು. ಈ ಬಗ್ಗೆ ವ್ಯಾಪಕ ವಿಚಾರಣೆ ನಡೆಸಿ ದೊರೆತ ಉತ್ತರಗಳಿಂದ ತೃಪ್ತರಾಗದೆ ಮತ್ತಷ್ಟು ವಿಚಾರಣೆ ನಡೆಸಿದಾಗ ಅವರ ಮುಗ್ಧ ಭಕ್ತಿ ಗೋಚರಿಸಿತು.ತನ್ನ ಇಷ್ಟಾರ್ಥ ಸಿದ್ದಿಗಾಗಿ ಮಾಡಿದ ಪೂಜೆಗೆ ಒಳಪಡಿಸಿದ್ದ ತೆಂಗಿನ ಕಾಯಿಯನ್ನು ಮೂರು ಮಾರ್ಗ ಸೇರುವಲ್ಲಿ ಒಡೆಯಿರಿ ಎಂದು ಸೂಚನೆ ನೀಡಲಾಗಿತ್ತಂತೆ. ಪಂಚಾಯತ್ಗೆ ಹೋಗುವ ದಾರಿಯನ್ನು ಒಂದು ರಸ್ತೆ ಎಂದು ಪರಿಗಣಿಸಿ ಪಕ್ಕದ ಹೆದ್ದಾರಿ ಮತ್ತು ಹಳೇ ಸೇತುವೆಯ ಸಂಪರ್ಕ ರಸ್ತೆ ಸೇರಿದರೆ ಮೂರು ಮಾರ್ಗ(ರಸ್ತೆ) ಆಗುತ್ತದೆ ಎಂದು ಭಾವಿಸಿ ಆ ದಂಪತಿ ಅಲ್ಲಿಯೇ ತೆಂಗಿನ ಕಾಯಿ ಒಡೆದು ಮನೆಗೆ ನಿರ್ಗಮಿಸಿದ್ದರು.
ದಂಪತಿಯ ಈ ಮೂರು ರಸ್ತೆಯ ಭಾವಿಸುವಿಕೆಯಿಂದ ವಾಮಾಚಾರದ ಶಂಕೆ ಉದ್ಭವಿಸಿ ಪಂಚಾಯತ್ ಆಡಳಿತಗಾರರನ್ನು ದಿನವಿಡೀ ಸತ್ಯ ಶೋಧನೆಗೆ ತೊಡಗುವಂತೆ ಮಾಡಿತ್ತು. ಪೂಜೆ ಮಾಡಿದ ಪುರೋಹಿತರಿಂದ ತೊಡಗಿ ದಂಪತಿಗೆ ಪರಿಚಯಸ್ಥರೆಲ್ಲರೂ ವಿಚಾರಣೆಗೆ ಒಳಪಟ್ಟು ಹೈರಾಣಾಗಿ ಹೋದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.