![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 23, 2023, 7:42 AM IST
ಬಂಟ್ವಾಳ: ಬಂಟ್ವಾಳ ಎಸ್ವಿಎಸ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ವಿನಾಯಕ್ ಕೆ.ಎಸ್. ನೇತೃತ್ವದ ಸಂಶೋಧನ ತಂಡವು ಭಾರತದಲ್ಲೇ ಮೊದಲ ಬಾರಿಗೆ “ಉಸ್ನೆಯ ಹಿರುಟ’ ಎಂಬ ಅಪರೂಪದ ಕಲ್ಲು ಹೂವು ಪ್ರಭೇದವನ್ನು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಪತ್ತೆಹಚ್ಚಿದೆ.
ಈ ಪ್ರಭೇದವು ಪಾರ್ಮಿಲಿಯ ಎಂಬ ಕಲ್ಲು ಹೂವಿನ ಕುಟುಂಬಕ್ಕೆ ಸೇರಿದ್ದು, 1,500 ಅಡಿಗಿಂತ ಎತ್ತರ ಪ್ರದೇಶದಲ್ಲಿ ಮಾತ್ರ ಕಾಣಸಿಗುತ್ತದೆ. ಪಾಚಿ ಮತ್ತು ಶಿಲೀಂಧ್ರಗಳ ಸಹಯೋಗದಿಂದ ಉತ್ಪತ್ತಿಯಾಗುತ್ತದೆ. ವಾತಾವರಣ ಮಾಲಿನ್ಯದ ಕಾರಣಕ್ಕೆ ಶೀಘ್ರ ನಶಿಸುತ್ತದೆ. ಮಾಲಿನ್ಯರಹಿತ ಪ್ರದೇಶದಲ್ಲಿ ಕಾಣಸಿಗುತ್ತದೆ.
ಫಿಲಿಫೈನ್ಸ್, ಆಸ್ಟ್ರೇಲಿಯಾ, ಕ್ಯಾಲಿಫೋರ್ನಿಯ, ಪಶ್ಚಿಮ ಆಫ್ರಿಕಾ ದೇಶಗಳಲ್ಲಿ ಕಾಣಸಿಗುವ ಈ ಪ್ರಬೇಧದ ಕುರಿತು ಜರ್ನಲ್ ಆಫ್ ತ್ರಿಟನ್ ಟ್ಯಾಕ್ಸ್ ಎಂಬ ವಿಜ್ಞಾನ ಪತ್ರಿಕೆಯ ಫೆಬ್ರವರಿ ಆವೃತ್ತಿಯಲ್ಲಿ ಡಾ| ವಿನಾಯಕ್ ಅವರ ಲೇಖನ ಪ್ರಕಟಗೊಂಡಿದೆ. ಇದುವರೆಗೆ ಭಾರತದಲ್ಲಿ ಈ ಕುಟುಂಬಕ್ಕೆ ಸೇರಿದ 57 ಹಾಗೂ ಕರ್ನಾಟಕದಲ್ಲಿ 8 ಕಲ್ಲು ಹೂಗಳ ಪ್ರಭೇದಗಳನ್ನು ಗುರುತಿಸಲಾಗಿದೆ.
ಸಂಶೋಧನ ತಂಡದಲ್ಲಿ ಅರ್ಚನಾ ಆರ್. ಮೇಸ್ತ, ಎನ್. ರಾಜೇಶ್ವರಿ ಪಾಲ್ಗೊಂಡಿದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.