ಪಕ್ಷಗಳು, ಅಧಿಕಾರಿಗಳಿಗೆ ತಲೆನೋವಾದ ಮತದಾನ ಬಹಿಷ್ಕಾರ!


Team Udayavani, May 8, 2023, 7:10 AM IST

ಪಕ್ಷಗಳು, ಅಧಿಕಾರಿಗಳಿಗೆ ತಲೆನೋವಾದ ಮತದಾನ ಬಹಿಷ್ಕಾರ!

ಸುಳ್ಯ: ಅಭಿವೃದ್ಧಿ ವಿಷಯ ಸಂಬಂಧವಾಗಿ ಗ್ರಾಮಸ್ಥರು ರಾಜಕೀಯ ನಾಯಕರ ಮುಂದೆ ನಾನಾ ತೆರನಾದ ಬೇಡಿಕೆಗಳನ್ನಿಡುವುದು ಸಾಮಾನ್ಯ. ಆ ಬೇಡಿಕೆಗಳು ಈಡೇರದೇ ಇದ್ದಲ್ಲಿ ಆಕ್ರೋಶ, ಅಸಮಾಧಾನ ತೋರ್ಪಡಿಸುತ್ತಾರೆ. ಕೆಲವರು ಚುನಾವಣೆ ಸಂದರ್ಭದಲ್ಲೇ ಮತದಾನ ಬಹಿ ಷ್ಕಾರದ ನಿರ್ಧಾರ ಕೈಗೊಳ್ಳುತ್ತಾರೆ. ತಮ್ಮ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರದರ್ಶಿ ಸಲು ಗ್ರಾಮದಲ್ಲಿ ಬ್ಯಾನರ್‌ಗಳನ್ನು ಅಳವಡಿಸಿ ರಾಜಕೀಯ ಪಕ್ಷಗಳು ಮತ್ತು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್‌ಗಳು ಹಲವು ಗ್ರಾಮಗಳಲ್ಲಿ ಕಂಡುಬಂದಿವೆ. ವಿಧಾನಸಭೆ ಚುನಾವಣೆಗೆ ವರ್ಷ ಬಾಕಿ ಇರುವಾಗಲೇ ಕ್ಷೇತ್ರದ ಅಲ್ಲಲ್ಲಿ ರಸ್ತೆ, ಸೇತುವೆ, ಕುಡಿಯುವ ನೀರು, ಹಕ್ಕುಪತ್ರ ಮತ್ತಿತರ ಸಮಸ್ಯೆಗಳನ್ನು ಮುಂದಿಟ್ಟು ಮತದಾನ ಬಹಿಷ್ಕಾರ ನಿರ್ಧಾರದ ಬ್ಯಾನರ್‌ ಅಳವಡಿಸಲಾಗಿತ್ತು. ಇಂದಿನವರೆಗೂ ಅದು ಮುಂದುವರಿದಿದೆ.

ನಾಯಕರು, ಅಧಿಕಾರಿಗಳಿಗೆ ತಲೆನೋವು
ಆರಂಭದಲ್ಲಿ ಈ ಬಗ್ಗೆ ಹೆಚ್ಚು ತಲೆಕೆಡಿಸಿ ಕೊಳ್ಳದ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಚುನಾವಣೆ ಘೋಷಣೆಯಾ ಗುತ್ತಿದ್ದಂತೆಯೇ ಎಚ್ಚೆತ್ತು ಈ ಗ್ರಾಮಗಳತ್ತ ದೃಷ್ಟಿ ಹರಿಸಿದ್ದಾರೆ. ಇನ್ನು ಬಹಿಷ್ಕಾರದ ಬ್ಯಾನರ್‌ಗಳು ಮತ್ತಷ್ಟು ಗ್ರಾಮಗಳಲ್ಲಿ ಕಾಣಿಸಿಕೊಳ್ಳಲಾರಂಭಿಸಿದ ಬಳಿಕವಂತೂ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಇದರ ಬಿಸಿ ತಟ್ಟತೊಡಗಿತು. ಆ ಬಳಿಕ ಇಂತಹ ಗ್ರಾಮಗಳಿಗೆ ತೆರಳಿ, ಅಲ್ಲಿನ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಡುವ ಮತ್ತು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡತೊಡಗಿದ್ದಾರೆ. ಕೆಲವು ಗ್ರಾಮಸ್ಥರು ಈ ಭರವಸೆಗಳಿಂದ ತೃಪ್ತರಾಗಿ ಬಹಿಷ್ಕಾರ ನಿರ್ಧಾರವನ್ನು ವಾಪಸ್‌ ಪಡೆದುಕೊಂಡರೆ ಮತ್ತೆ ಕೆಲವು ಗ್ರಾಮಗಳ ಸ್ಥಳೀಯರು ಯಾವುದಕ್ಕೂ ಮಣಿಯದೇ “ಕೆಲಸ ಆದರೆ ಬ್ಯಾನರ್‌ ತೆಗೆಯುತ್ತೇವೆ’ ಎಂದು ಪಟ್ಟು ಹಿಡಿಯುತ್ತಾರೆ. ಈ ಚುನಾವಣೆಯಲ್ಲೂ ಇಂಥ ಪ್ರಸಂಗಗಳು ನಡೆದಿವೆ. ಇದೀಗ ರಾಜಕೀಯ ಪಕ್ಷಗಳು ಮತ್ತು ನಾಯಕರಿಗೆ ಬಲುದೊಡ್ಡ ಸವಾಲಾಗಿ ಪರಿಣಮಿಸಿದೆ.

ಇನ್ನು ಕೆಲವೆಡೆ ಗ್ರಾಮಸ್ಥರು ಅಧಿಕಾರಿಗಳು ಮತ್ತು ರಾಜಕೀಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ಘಟನೆಗಳೂ ನಡೆದಿವೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮತದಾನ ಬಹಿಷ್ಕಾರ ಕೂಗಿನಿಂದಲೇ ಒಂದು ಹಂತದಲ್ಲಿ ಪ್ರಚಾರ ಪಡೆದಿದೆ ಎನ್ನಬಹುದು.

ಮತದಾನಕ್ಕೆ 2 ದಿನ ಮಾತ್ರವೇ ಉಳಿದಿದ್ದು ಸುಳ್ಯದ ಹಲವೆಡೆ ಬಹಿಷ್ಕಾರದ ಕೂಗು ಕೇಳಿ ಬರುತ್ತಿದೆ.ಆಡಳಿತ ನಡೆಸುವವರ ನಿರ್ಲಕ್ಷ್ಯವೇ ಇಂಥ ಘಟನೆಗಳು ನಡೆಯಲು ಕಾರಣ ಎಂಬುದು ಕ್ಷೇತ್ರದಾರರ ಅಂಬೋಣ.

ಎಲ್ಲರೂ ಮತ ಚಲಾಯಿಸುವಂತೆ ಅಧಿಕಾರಿಗಳು, ರಾಜಕೀಯ ಪಕ್ಷಗಳು ಪ್ರಯತ್ನ ಪಡುತ್ತಿರುವುದು ಉತ್ತಮ ಕೆಲಸವೇ. ಆದರೆ ಚುನಾವಣೆ ಬಳಿಕ, ಅಧಿಕಾರ ಸಿಕ್ಕ ಮೇಲೂ ಜನರ ಸಮಸ್ಯೆ ನಿವಾರಣೆ, ಅಭಿವೃದ್ಧಿ ವಿಚಾರದಲ್ಲೂ ಇದೇ ಪ್ರಯತ್ನ ಇರಲಿ ಎಂಬ ಮಾತು ನಾಗರಿಕರದ್ದು.

 - ದಯಾನಂದ ಕಲ್ನಾರ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.