ಬೆಳಕಿಲ್ಲದ ಜೀವನಕ್ಕೆ ನೆರವಾದ ಯುವಕರ ತಂಡ


Team Udayavani, Jun 24, 2021, 3:50 AM IST

ಬೆಳಕಿಲ್ಲದ ಜೀವನಕ್ಕೆ ನೆರವಾದ ಯುವಕರ ತಂಡ

ಪುತ್ತೂರು: ನಗರಸಭೆ ವ್ಯಾಪ್ತಿಯ ತಾರಿಗುಡ್ಡೆಯಲ್ಲಿ ಸೋರುವ ಸೂರಿನೊಳಗೆ ಕನಿಷ್ಠ ಸ್ಥಿತಿಯಲ್ಲಿ ಜೀವನ ನಿರ್ವಹಿಸುತ್ತಿರುವ ಒಂಟಿ ವೃದ್ಧೆಯ ಬದುಕಿಗೆ ಯುವಕರ ತಂಡವೊಂದು ಆಸರೆ ನೀಡಲು ಮುಂದಡಿ ಇಟ್ಟಿದೆ.

ಅಪ್ಪಿ ಎಂಬ ವೃದ್ಧೆಯ ಒಬ್ಬಂಟಿ ಬದುಕಿನ ಬಗ್ಗೆ ಅರಿತುಕೊಂಡ ಪುತ್ತೂರಿನ ಅಭಿರಾಮ್‌ ಫ್ರೆಂಡ್ಸ್‌ ಎಂಬ ಯುವಕರ ತಂಡ ಪ್ರಥಮ ಹಂತದಲ್ಲಿ ಮನೆ ಪರಿಸರ ಸ್ವತ್ಛತೆ, ದುರಸ್ತಿಗೆ ಮುಂದಾಗಿದ್ದು ಮುಂದಿನ ದಿನಗಳಲ್ಲಿ ಅಗತ್ಯ ಸೌಕರ್ಯ ಒದಗಿಸಲು ನಿರ್ಧರಿಸಿದೆ.

ಚಿಮಣಿ ದೀಪ:

ಅಪ್ಪಿ ಒಂಟಿಯಾಗಿ ವಾಸಿಸುತ್ತಿದ್ದು ತನ್ನ ಮುರುಕಲು ಮನೆಯೇ ಇವರಿಗೆ ಆಸರೆ. ವಿದ್ಯುತ್‌ ಸಂಪರ್ಕ ಇಲ್ಲದೆ ಚಿಮಣಿ ದೀಪವೇ ಬೆಳಕಿನ ದೀವಿಗೆ. ವಯೋಸಹಜ ಹಿನ್ನೆಲೆಯಲ್ಲಿ ದೃಷ್ಟಿ ಮಂದವಾಗಿದ್ದು ನಿತ್ಯದ ಬದುಕು ನರಕ ಸದೃಶವಾಗಿತ್ತು. ಪರಿಸ್ಥಿತಿ ಹೇಗಿದೆಯಂದರೆ ಈ ಮನೆಯಲ್ಲಿ ಶ್ವಾನಗಳು ಬಿಟ್ಟರೆ ಬೇರೆ ಯಾರೂ ಇಲ್ಲ. ಅಪ್ಪಿ ಅವರ ಬದು ಕಿನ ಸ್ಥಿತಿ ಮನಕಲಕುವಂತಹದು. ಮುಪ್ಪಿನ ಕಾಲದಲ್ಲಿ ಆರೈಕೆಗೆ ಯಾರೂ ಇಲ್ಲದ ಪರಿಸ್ಥಿತಿ ಅವರದ್ದು.

ಸ್ಪಂದಿಸಿದ ಯುವಕರ ತಂಡ:

ಚುನಾವಣೆ ಸಂದರ್ಭದಲ್ಲಿ ಮನೆ ಭೇಟಿ ಬಿಟ್ಟರೆ ಉಳಿದ ಸಂದರ್ಭದಲ್ಲಿ ಯಾರೂ ಬರುವವರಿಲ್ಲ ಅನ್ನುವುದಕ್ಕೆ ಈ ಮನೆ ಪರಿಸ್ಥಿತಿಯೇ ಉದಾಹರಣೆ. ತಾರಿಗುಡ್ಡೆ ಭಾಗದವರು, ಸ್ಥಳೀಯರು ಅಪ್ಪಿ ಅಕ್ಕ ಎಂದೇ ಕರೆಯಲ್ಪಡುವ ಈ ಅಜ್ಜಿಗೆ ಜತೆಗಾರರೇ ಇಲ್ಲದೆ ಒಂಟಿಯಾಗಿ ದಿನ ದೂಡುವ ಸ್ಥಿತಿ. ಈ ವಿಚಾರವನ್ನು ಅರಿತ 25ಕ್ಕೂ ಅಧಿಕ ಇರುವ ಯುವಕರ ಕ್ರೀಡಾ ತಂಡ ಅಭಿರಾಮ್‌ ಫ್ರೆಂಡ್ಸ್‌ನ ಸದಸ್ಯರು ಮನೆ ಭೇಟಿ ಮಾಡಿ ವೃದ್ಧೆಯ ಅಳಲು ಆಲಿಸಿದ್ದಾರೆ. ಸೋರುವ ಮಾಡು, ನೇತಾಡುತ್ತಿರುವ ಗೋಡೆ, ಕತ್ತಲು ವಾತಾ ವರಣಕ್ಕೆ ಬೆಳಕು ನೀಡುವ ಕಾರ್ಯ ಪ್ರಾರಂ ಭಿಸಿದ್ದಾರೆ. ಮನೆ ಛಾವಣಿಗೆ ಟಾರ್ಪಾಲು ಹಾಸಿ ತಾತ್ಕಾಲಿಕ ರಕ್ಷಣೆ ನೀಡಲಾಗಿದೆ.

ನಗರಸಭೆ ವ್ಯಾಪ್ತಿಯೊಳಗಿರುವ ಅಪ್ಪಿ ಅವರ ಮನೆ ಪರಿಸ್ಥಿತಿ ಕಂಡು ನೆರವಾಗಲು ನಿರ್ಧರಿಸಿದ್ದೇವೆ. ಮೊದಲ ಹಂತದಲ್ಲಿ ಸ್ವತ್ಛತೆ, ದುರಸ್ತಿ ಕಾರ್ಯ ನಡೆಸಿದ್ದು, ಸಾರ್ವಜನಿಕರ ಸಹಕಾರ ಪಡೆದು ಮುಂದಿನ ಹಂತದ ಕೆಲಸ ಕಾರ್ಯಗಳನ್ನು ಮಾಡಲು ತೀರ್ಮಾನಿಸಿದ್ದೇವೆ. ನವೀನ್‌ ರೈ ಪಂಜಳ, ಅಧ್ಯಕ್ಷರು, ಅಭಿರಾಮ್‌ ಫ್ರೆಂಡ್ಸ್‌ ಪುತ್ತೂರು

ಅಪ್ಪಿ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಸಮಸ್ಯೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ದಾಖಲೆ ಪತ್ರ ನೀಡುವಂತೆ ತಿಳಿಸಿದ್ದೇನೆ. ದಾಖಲೆ ಗಳಿದ್ದರೆ ನಗರಸಭೆಯಿಂದ ಮನೆ ದುರ ಸ್ತಿಗೆ ನೆರವು ನೀಡಲಾಗುತ್ತದೆ. ದಾಖಲೆ ಪತ್ರ ಸಮರ್ಪಕವಾಗಿಲ್ಲದಿದ್ದರೆ ಸಂಘ ಸಂಸ್ಥೆಗಳ ನೆರವು ಪಡೆದು ಸ್ಪಂದಿಸ ಲಾಗುವುದು. ಜೀವಂಧರ್‌ ಜೈನ್‌, ಅಧ್ಯಕ್ಷರು, ನಗರಸಭೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.