ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

ಕಳತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

Team Udayavani, Dec 11, 2019, 4:06 AM IST

ds-35

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1914 ಶಾಲೆ ಸ್ಥಾಪನೆ
ಏಕೋಪಾಧ್ಯಾಯ ಶಾಲೆಯಾಗಿ ಆರಂಭ

ಕಾಪು: ಉಡುಪಿ ತಾಲೂಕಿನ 108ನೇ ಕಳತ್ತೂರು ಗ್ರಾಮದಲ್ಲಿ 1914ರಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆೆಯು ಆರಂಭವಾಗಿತ್ತು. ಊರಿನ ಹಿರಿಯರ ಅರ್ಜಿಗೆ ಮನ್ನಣೆ ನೀಡಿದ ಬ್ರಿಟಿಷ್‌ ಸರಕಾರ ಒಬ್ಬ ಶಿಕ್ಷಕರ ಸಹಿತವಾಗಿ ಶಾಲೆ ಪ್ರಾರಂಭಿಸಲು 1914ರಲ್ಲಿ ಅನುಮತಿ ನೀಡಿತ್ತು.ಗ್ರಾಮದ ನಡಿಗುತ್ತು ದಿ| ಅಣ್ಣು ಶೆಟ್ಟಿಯವರ ಮನೆಯ ಕೊಠಡಿಯಲ್ಲಿ ಶಾಲೆಯನ್ನು ತೆರೆದರು. ಅಂದಿನಿಂದ ಗ್ರಾಮದ ಜನರು ಸಂತೋಷವನ್ನು ವ್ಯಕ್ತಪಡಿಸಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲಾರಂಭಿಸಿದ್ದರು. ಅದಾದ ಕೆಲವು ವರ್ಷಗಳಲ್ಲಿ ದಿ| ಕೆ.ವಿ. ಕೃಷ್ಣಯ್ಯ ಅವರು ಕಳತ್ತೂರು ಶಾಲೆಯ ಮುಖ್ಯೋಪಾಧ್ಯಾಯರಾಗಿ ನೇಮಕಗೊಂಡು, ಹಂಚಿನ ಛಾವಣಿಯ ಕಟ್ಟಡವೊಂದನ್ನು ನಿರ್ಮಿಸಿಕೊಂಡರು. ಆಗಿನ ಕಾಲದ ಪ್ರಸಿದ್ಧ ರಥ ಶಿಲ್ಪಿ ದುಗ್ಗಪ್ಪ ಆಚಾರ್ಯ ಕಳತ್ತೂರು ಇವರು ವಾಸ್ತು ಶಾಸ್ತಾನುಸಾರವಾಗಿ ಶಾಲೆಯ ಕಟ್ಟಡವನ್ನು ನಿರ್ಮಿಸಿ ಕೊಟ್ಟಿದ್ದು ವಿಶೇಷತೆಯಾಗಿದೆ.

ಶಾಲೆಯ ಇತಿಹಾಸ
ಏಕೋಪಾಧ್ಯಾಯ ಶಾಲೆಯಾಗಿದ್ದ ಕಳತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮುಂದೆ ನಾಲ್ಕು ಮಂದಿ ಶಿಕ್ಷಕರು ಮತ್ತು 100 ರಷ್ಟು ವಿದ್ಯಾರ್ಥಿಗಳೊಂದಿಗೆ ಬೆಳೆಯುತ್ತಾ ಬಂದಿದೆ. ಮುಂದೆ ದಿ| ವಿಠ್ಠಪ್ಪ ಪೈ ಅವರು 23 ಸೆಂಟ್ಸ್‌ ಸ್ಥಳವನ್ನು ಶಾಲೆಗೆ ದಾನವಾಗಿ ನೀಡಿ ಶಾಲೆಯ ಬೆಳವಣಿಗೆಗೆ ಪ್ರೋತ್ಸಾಹ ನೀಡಿದರು. 1967ರ ಅವಧಿಯಲ್ಲಿ ಉಡುಪಿ ತಾಲೂಕು ಬೋರ್ಡಿಗೆ ಇನ್ನೊಂದು ಕಟ್ಟಡವನ್ನು ಕಟ್ಟಿಸಲು ಅರ್ಜಿ ಕಳುಹಿಸಿ ಹೆಚ್ಚುವರಿ ಕಟ್ಟಡವನ್ನು ನಿರ್ಮಿಸಿಕೊಳ್ಳಲಾಯಿತು.

ಸರಕಾರದ ಹಣ ಹಾಗೂ ಊರವರ ಸಹಕಾರದಿಂದ ಅಗತ್ಯವಿದ್ದ ಕಟ್ಟಡವನ್ನು ನಿರ್ಮಿಸಲಾಯಿತು. ಇದಕ್ಕೆ ಗೋಪಾಲಕೃಷ್ಣ ಪೈ ಹೆಚ್ಚಿನ ರೀತಿಯ ಸಹಕಾರವನ್ನು ನೀಡಿದ್ದರು.1976ರಲ್ಲಿ 6ನೇ ತರಗತಿ, 1977ರಲ್ಲಿ 7ನೇ ತರಗತಿಯನ್ನು ತೆರೆಯಲು ಅನುಮತಿ ದೊರಕಿತ್ತು.

ಮುಖ್ಯೋಪಾಧ್ಯಾಯರು ಏಕೋಪಾಧ್ಯಾಯರ ಶಾಲೆ ಎಂಬ ಹೆಸರಿನೊಂದಿಗೆ ಪ್ರಾರಂಭಗೊಂಡಿದ್ದ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳ ಸಂಖ್ಯೆ 14ಕ್ಕೆ ಕುಸಿದಿದ್ದು, ಮತ್ತೆ ಏಕೋಪಾಧ್ಯಾಯಿನಿ ಶಾಲೆ ಎಂಬ ಹಣೆಪಟ್ಟಿ ಹೊತ್ತುಕೊಂಡು ಮುಚ್ಚುವ ಭೀತಿ ಎದುರಿಸುತ್ತಿದೆ. ಶಾಲೆಯಲ್ಲಿ ಸೇವೆ ಸಲ್ಲಿಸಿರುವ ದಿ| ಕೆ.ವಿ. ಕೃಷ್ಣಯ್ಯ ಕಳತ್ತೂರು, ದಿ| ಕೃಷ್ಣ ಶೆಟ್ಟಿ ಕೊಲ್ಲಬೆಟ್ಟು, ದಿ| ರಾಮಕೃಷ್ಣ ಆಚಾರ್ಯ ಕಳತ್ತೂರು, ಸಂಜೀವಿ ಭಂಡಾರ್ತಿ (ಪ್ರಭಾರ) ಕಳತ್ತೂರು, ದಿ| ಜೆರೊಂ ನೊರೊನ್ಹ ಬಂಟಕಲ್ಲು, ಕೆ. ಶ್ರೀಕರಯ್ಯ ಕಳತ್ತೂರು, ಶ್ರೀಧರ ಭಟ್‌ ಕಾಪು, ಮೋಹಿನಿ ಕೆ. ಮೂಳೂರು.

ಹೆಮ್ಮೆಯ ಹಳೆ ವಿದ್ಯಾರ್ಥಿಗಳು
ಅನಿವಾಸಿ ಭಾರತೀಯ ಉದ್ಯಮಿ ಕಳತ್ತೂರು ಶೇಖರ ಬಿ. ಶೆಟ್ಟಿ, ಖ್ಯಾತ ನ್ಯಾಯವಾದಿ ಉಮೇಶ್‌ ಶೆಟ್ಟಿ ಕಳತ್ತೂರು, ಕಳತ್ತೂರು ದೇಗುಲದ ಆಡಳಿತ ಮೊಕ್ತೇಸರ ರಂಗನಾಥ್‌ ಭಟ್‌, ಪ್ರಸಿದ್ಧ ವೈದ್ಯರಾದ ಡಾ| ರಾಜಗೋಪಾಲ ಭಂಡಾರಿ ಕಳತ್ತೂರು, ಡಾ| ಗುರುರಾಜ್‌ ಆಚಾರ್‌, ಕರುಣಾಕರ ತಂತ್ರಿ, ಉದಯ ತಂತ್ರಿ, ರಾಘವೇಂದ್ರ ಭಟ್‌, ಕೆ. ಶ್ರೀಕರಯ್ಯ, ಪರಿಮಳಾ ಟೀಚರ್‌, ಗ್ರಾ.ಪಂ. ಸದಸ್ಯ ಅಶೋಕ್‌ ರಾವ್‌, ಉದ್ಯಮಿ ರಂಗನಾಥ ಶೆಟ್ಟಿ ಮೊದಲಾದವರು ಸಂಸ್ಥೆಯ ಹೆಮ್ಮೆಯ ಹಳೆ ವಿದ್ಯಾರ್ಥಿಗಳು.

ಶಾಲೆಯಲ್ಲಿ ಮಕ್ಕಳ ಸಂಖ್ಯೆಯ ಕೊರತೆಯಿದೆ. ಶಾಲೆಯ ಬೆಳವಣಿಗೆಗೆ ದಾನಿಗಳು ಮತ್ತು ಹಳೆ ವಿದ್ಯಾರ್ಥಿಗಳು ನಿರಂತರವಾಗಿ ಕೊಡುಗೆ ಗಳನ್ನು ನೀಡುತ್ತಾ ಬರುತ್ತಿದ್ದಾರೆ. ಶಾಲೆ ಉಳಿವಿಗಾಗಿ ಇನ್ನಷ್ಟು ಪ್ರಯತ್ನ ಅಗತ್ಯ
-ಉಷಾ, ಮುಖ್ಯೋಪಾಧ್ಯಾಯಿನಿ, ಕಳತ್ತೂರು ಶಾಲೆ

ನಮ್ಮ ತಂದೆಯವರ ಕಾಲದ ಶಾಲೆ ಇದಾಗಿದೆ. ಗ್ರಾಮೀಣ ಜನರ ಆಂಗ್ಲ ಮಾಧ್ಯಮ ಶಿಕ್ಷಣದ ವ್ಯಾಮೋಹದಿಂದಾಗಿ ಶಾಲೆಯು ಮುಚ್ಚುವ ಹಂತಕ್ಕೆ ಬಂದಿದ್ದು, ಇದನ್ನು ಉಳಿಸುವ ನಿಟ್ಟಿನಲ್ಲಿ ಊರವರು, ಹಳೇ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಯತ್ನಶೀಲರಾಗುವ ಅಗತ್ಯವಿದೆ.
-ಕೆ. ಶ್ರೀಕರಯ್ಯ ಕಳತ್ತೂರು, ಹಳೆ ವಿದ್ಯಾರ್ಥಿ

-  ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ed-24

ಬಾಡಿಗೆ ಕಟ್ಟಡದಲ್ಲಿ ಆರಂಭವಾದ ಕಣ್ಣೂರು ಸರಕಾರಿ ಶಾಲೆಗೆ ಶತಮಾನದ ಹಿರಿಮೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-uv-fusion

Rainy Season: ಮಳೆಗಾಲದೊಂದಿಗೆ ನೆನಪಿನ ಮೆಲಕು

1-vrm

Ex MLA ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.