UDUPI: 40 ಅಂತಸ್ತಿನ ವಸತಿ ಸಮುಚ್ಚಯದ ಪ್ರಾಜೆಕ್ಟ್ ಲಾಂಚ್‌

ಉಡುಪಿ-ಕಲ್ಸಂಕ "ಮಾಂಡವಿ ರಾಯಲ್‌ ಗಾರ್ಡನ್‌'

Team Udayavani, Mar 3, 2024, 9:10 AM IST

5-news

ಉಡುಪಿ: ನಗರದ ಕಲ್ಸಂಕ ದಲ್ಲಿರುವ ಮಾಂಡವಿ ಟೈಮ್ಸ್‌ ಸ್ಕ್ವ್ಯಾರ್‌ ಮಾಲ್‌ ಬಳಿಯಲ್ಲಿ ಮಾಂಡವಿ ಬಿಲ್ಡರ್ ಆ್ಯಂಡ್‌ ಡೆವಲಪರ್ ಸಂಸ್ಥೆಯ ಪ್ರತಿಷ್ಠಿತ ಯೋಜನೆಯಾಗಿ ನಿರ್ಮಾಣ ಗೊಳ್ಳಲಿ ರುವ  ಜಿಲ್ಲೆಯಲ್ಲಿ ಯೇ ಅತೀ ಎತ್ತ ರದ 40 ಅಂತಸ್ತಿನ (2, 3 ಮತ್ತು 4 ಬಿಎಚ್‌ ಕೆ ಲಕ್ಸುರಿ ಅಪಾರ್ಟ್‌ಮೆಂಟ್ಸ್‌) ವಸತಿ ಸಮುಚ್ಚಯ “ಮಾಂಡವಿ ರಾಯಲ್‌ ಗಾರ್ಡನ್‌’ನ ಪ್ರಾಜೆಕ್ಟ್ ಲಾಂಚ್‌ ಕಾರ್ಯಕ್ರಮ ಶನಿವಾರ ನೆರವೇರಿತು.

ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ದೀಪ ಬೆಳಗಿಸಿ ಆಶೀರ್ವಚನ ನೀಡಿ, ಹೊರಗಡೆ ದುಡಿದು ದಣಿದು ಮನೆಗೆ ಬಂದವರಿಗೆ ಮನಸ್ಸಿಗೆ ನೆಮ್ಮದಿ ಬೇಕು. ಅದು ಸಿಗಬೇಕಾದರೆ ಮನೆಯ ವಾತಾವರಣ ಚೆನ್ನಾಗಿರಬೇಕು. ಅದಕ್ಕೆ ಪೂರಕವಾಗಿ ಬೃಹತ್‌ ವಸತಿ ಸಮುಚ್ಚಯ ತಲೆ ಎತ್ತುತ್ತಿದೆ. ಇಂತಹ ಸಮುಚ್ಚಯಗಳು ಉಡುಪಿ ನಗರದ ಅಭಿವೃದ್ಧಿಗೂ ಸಹಕಾರಿಯಾಗಲಿವೆ ಎಂದು ಹೇಳಿದರು.

ಬಳಿಕ ಮಾಂಡವಿ ರಾಯಲ್‌ ಗಾರ್ಡನ್‌ ಸಮುಚ್ಚಯದ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.

ಟವರ್‌ ಆರ್ಚಿಡ್‌ ಮತ್ತು ಟವರ್‌ ಐರಿಸ್‌ ಪ್ರಾಜೆಕ್ಟ್ ಲಾಂಚ್‌ ಮಾಡಿದ ಶಾಸಕ ಯಶ್‌ಪಾಲ್‌ ಎ. ಸುವರ್ಣ ಮಾತನಾಡಿ, ವ್ಯಕ್ತಿಯು ತನ್ನ ದುಡಿಮೆಯ ಜತೆಗೆ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಯಶಸ್ಸಿನೊಂದಿಗೆ ಸಾಧಕನಾಗಿ ಗುರುತಿಸಿಕೊಳ್ಳಬಹುದು; ಅದಕ್ಕೆ ಜೆರ್ರಿ ವಿನ್ಸೆಂಟ್‌ ಡಯಾಸ್‌ ಸಾಕ್ಷಿ. ಉಡುಪಿಯ ಅಂದ-ಚೆಂದ ಹೆಚ್ಚಿಸುವ ಸಮುಚ್ಚಯಗಳನ್ನು ನಿರ್ಮಿಸುವ ಮೂಲಕ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿ ಹಾರೈಸಿದರು.

ಮದರ್‌ ಆಫ್ ಸಾರೋಸ್‌ ಚರ್ಚ್‌ ನ ಧರ್ಮಗುರು ವಂ| ಚಾರ್ಲಿಸ್‌ ಮೆನೇಜಸ್‌ ಅವರು, ಕಷ್ಟಪಟ್ಟು ದುಡಿದವರ ಜೀವನ ಒಳ್ಳೆಯದಾಗಲಿದೆ. ಆದುದರಿಂದ ಪರಿಶ್ರಮದ ಮೂಲಕ ಜೀವನದಲ್ಲಿ ಎತ್ತರಕ್ಕೆ ಬೆಳೆಯುವತ್ತ ಪ್ರಯತ್ನಶೀಲರಾಗಬೇಕು ಎಂದರು.

ಸಂತೋಷನಗರ ಬದ್ರಿಯಾ ಜುಮ್ಮಾ ಮಸೀದಿಯ ಖತೀಬ ಅಲ್ಹಾಜ್‌ ಮೊಹಮ್ಮದ್‌ ಹನೀಫ್ ಮದನಿ ಅವರು, ಶೈಕ್ಷಣಿಕ, ಧಾರ್ಮಿಕ, ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಕಟ್ಟಡದಿಂದ ನಗರದ ಅಂದ ಇನ್ನಷ್ಟು ಹೆಚ್ಚಲಿದೆ ಎಂದರು.

ಸಮಾಜಕ್ಕೆ ಅನುಕೂಲವಾಗುವ ಕೊಡುಗೆಗಳನ್ನು ನೀಡಿದಾಗ ವ್ಯಕ್ತಿಯ ಹೆಸರು ಶಾಶ್ವತವಾಗಿರುತ್ತದೆ. ವೃತ್ತಿ ಧರ್ಮ ಪಾಲನೆಯೊಂದಿಗೆ ಕಾರ್ಯಪ್ರವೃತ್ತರಾದರೆ ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ ಶುಭ ಹಾರೈಸಿದರು.

ಕ್ರೆಡಾೖ ಉಡುಪಿ ಅಧ್ಯಕ್ಷ ಮನೋಹರ ಎಸ್‌. ಶೆಟ್ಟಿ, ಕಾಂಚನ ಹ್ಯುಂಡೈ ಎಂಡಿ ಪ್ರಸಾದರಾಜ್‌ ಕಾಂಚನ್‌, ಕಾಂಗ್ರೆಸ್‌ನ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಮೇಶ್‌ ಕಾಂಚನ್‌ ಶುಭಾಶಂಸನೆಗೈದರು. ಕಲ್ಯಾಣಪುರ ಮೌಂಟ್‌ ರೋಸರಿ ಚರ್ಚ್‌ನ ಧರ್ಮಗುರು ವಂ| ಡಾ| ರೋಕ್‌ ಡಿ’ಸೋಜಾ, ಮಣಿಪಾಲ ಕ್ರೈಸ್ಟ್‌ ಚರ್ಚ್‌ನ ಧರ್ಮಗುರು ವಂ| ರೋಮಿಯೋ ಫ್ರಾನ್ಸಿಸ್‌ ಲೂವಿಸ್‌, ಕಿದಿಯೂರ್‌ ಹೊಟೇಲ್ಸ್‌ ಪ್ರೈ.ಲಿ.ನ ಎಂಡಿ ಭುವನೇಂದ್ರ ಕಿದಿಯೂರು, ಉದ್ಯಮಿಗಳಾದ ರತ್ನಾಕರ ಶೆಟ್ಟಿ ಮತ್ತು ಸಾರಿಕಾ ಶೆಟ್ಟಿ, ಮೊಲ್ಲಿ ಡಯಾಸ್‌, ಜೇಸನ್‌ ಡಯಾಸ್‌, ಡಾ| ಲಾರಾ ಡಯಾಸ್‌ ಉಪಸ್ಥಿತರಿದ್ದರು. ಸಂಸ್ಥೆಯ ಪ್ರವರ್ತಕರಾದ ಡಾ| ಜೆರ್ರಿ ವಿನ್ಸೆಂಟ್‌ ಡಯಾಸ್‌ ಸ್ವಾಗತಿಸಿ, ಪ್ರಸ್ತಾವನೆಗೈದರು.

ಸೈಮನ್‌ ಆರ್ಕಿಟೆಕ್‌ನ ಆರ್ಕಿಟೆಕ್ಟ್ ಪ್ರಕಾಶ್‌ ಸೈಮನ್‌ ಅವರು ಸಮುಚ್ಚಯದ ತಂತ್ರಜ್ಞಾನ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸ್ಟೀವನ್‌ ಕುಲಾಸೋ ನಿರೂಪಿಸಿದರು.

ಲ್ಯಾಂಡ್‌ ಮಾರ್ಕ್‌

ಉಡುಪಿಯ ಹೃದಯ ಭಾಗದಲ್ಲಿ 40 ಅಂತಸ್ತಿನ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅತ್ಯಾಕರ್ಷಕವಾಗಿ ನಿರ್ಮಾಣಗೊಳ್ಳಲಿರುವ ಆರ್‌ಸಿಸಿ ಮಯೋನ್‌ ಶೀರ್‌ ವಾಲ್‌ ಸ್ಟ್ರಕ್ಚರ್‌ ಡಿಸೈನ್‌ ಫಾರ್‌ ಅರ್ಥ್ಕ್ವೇಕ್‌ ರೆಸಿಸ್ಟೆನ್ಸ್‌ ತಂತ್ರಜ್ಞಾನವನ್ನು ಹೊಂದಿರುವ ಈ ಸಮುಚ್ಚಯವು ಲ್ಯಾಂಡ್‌ ಮಾರ್ಕ್‌ ಆಗಿ ಮೂಡಿಬರಲಿದೆ. ಈ ಸಮುಚ್ಚಯವು ಎಲ್ಲ ವ್ಯವಸ್ಥೆಗಳಿಗೂ ಹೊಂದಿಕೊಂಡಿದ್ದು, ವಸತಿಗೆ ಯೋಗ್ಯವಾಗಿರಲಿದೆ. ಬುಕ್ಕಿಂಗ್‌ ಮತ್ತು ಮಾಹಿತಿಗೆ ವೆಬ್‌ಸೈಟ್‌: https:// www.mandavibuilders.com ಅನ್ನು ಸಂಪರ್ಕಿಸಬಹುದು. -ಗ್ಲೆನ್‌ ಡಯಾ ಸ್‌, ಮಾಂಡವಿ ಬಿಲ್ಡರ್ ಆ್ಯಂಡ್‌ ಡೆವಲಪರ್

ಟಾಪ್ ನ್ಯೂಸ್

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

1-rasht-aa

Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು

Accident-Logo

Bantwala: ಮಾರಿಪಳ್ಳದಲ್ಲಿ ಬಸ್‌-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು

ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ

Guledgudda ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

BJP 2

LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

1-rasht-aa

Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು

Accident-Logo

Bantwala: ಮಾರಿಪಳ್ಳದಲ್ಲಿ ಬಸ್‌-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು

ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ

Guledgudda ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.