Indrali: ರಸ್ತೆಯಲ್ಲೇ ನಿಲ್ಲುವ ಬಸ್‌, ಗುಂಡಿಗಳಿಂದ ಅಪಾಯಕ್ಕೆ ಆಹ್ವಾನ


Team Udayavani, Aug 6, 2024, 6:12 PM IST

Screenshot (121)

ಉಡುಪಿ: ಇಂದ್ರಾಳಿ ಬಸ್‌ ನಿಲ್ದಾಣ ಸಮೀಪದ ರಸ್ತೆ ಬದಿಯಲ್ಲಿರುವ ಗುಂಡಿಗಳು ದಿನದಿಂದ ದಿನಕ್ಕೆ ಬೃಹತ್‌ ಗಾತ್ರದ ಸ್ವರೂಪ ಪಡೆಯುವ ಮೂಲಕ ಅಪಾಯವನ್ನು ಆಹ್ವಾನಿಸುತ್ತಿದೆ. ಇನ್ನೊಂದೆಡೆ ಜಂಕ್ಷನ್‌ನ ರಸ್ತೆಯಲ್ಲಿಯೇ ಬಸ್‌ ನಿಲುಗಡೆ ಮಾಡುತ್ತಿರುವುದರಿಂದ ಪ್ರಯಾಣಿಕರು, ಸವಾರರಿಗೆ ಸಂಕಟ ಎದುರಾಗಿದೆ.

ಮಣಿಪಾಲ-ಉಡುಪಿ ಮುಖ್ಯರಸ್ತೆ ಯಲ್ಲಿ ಪ್ರಮುಖ ಪ್ರದೇಶವಾದ ಇಂದ್ರಾಳಿ ಪರಿಸರವು ಶಾಲೆ, ರೈಲ್ವೇ ನಿಲ್ದಾಣ, ರುದ್ರಭೂಮಿ ಸಹಿತ ಪ್ರಮುಖ ಸಂಸ್ಥೆ, ಸ್ಥಳಗಳನ್ನು ಹೊಂದಿದೆ. ಈ ಭಾಗದಲ್ಲಿ ಜನ ಓಡಾಟ ಅತ್ಯಂತ ಹೆಚ್ಚಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯರಸ್ತೆಯ ಬದಿಯಲ್ಲಿ ಬೃಹತ್‌ ಗುಂಡಿ ಸವಾರರನ್ನು ದಂಗು ಬಡಿಸುವಂತಿದೆ. ಇಲ್ಲಿನ ಹೆದ್ದಾರಿ ರಸ್ತೆ ವ್ಯವಸ್ಥಿತಗೊಂಡು ಎರಡು ವರ್ಷ ಕಳೆದಿದೆ. ಆದರೆ ರೈಲ್ವೇ ಮೇಲ್ಸೇತುವೆ ಸರಿಯಾಗಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಈ ರೀತಿ ಕೆಲವು ಸಮಸ್ಯೆಗಳು ಇನ್ನೂ ಜೀವಂತವಿದೆ.

ಇಂದ್ರಾಳಿ ಶ್ರೀ ಪಂಚದುರ್ಗಾ ಪರಮೇಶ್ವರೀ ದೇವಸ್ಥಾನ ಕಡೆಗೆ ಹೋಗುವ ರಸ್ತೆಯ ಅಂಚಿನಲ್ಲಿ ಮೂರು ಬೃಹತ್‌ ಗುಂಡಿಗಳು ಸಾಲಾಗಿ ನಿರ್ಮಾಣಗೊಂಡಿದ್ದು, ಸವಾರರಿಗೆ ಮರಣ ಬಾವಿಯಂತೆ ಬಾಯ್ದೆರೆದುಕೊಂಡಿವೆ. ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಹೋಗುವವರು ವೇಗವಾಗಿ ಓವರ್‌ಟೇಕ್‌ ಮಾಡುವ ಭರದಲ್ಲಿ ಸಾಗಿದರೆ ಈ ಗುಂಡಿಗೆ ವಾಹನಗಳು ಬಿದ್ದು ಖಂಡಿತ ಅಪಘಾತ ಸಂಭವಿಸುತ್ತದೆ.

ಗುಂಡಿಗಳು ಅರಿವಿಗೆ ಬಾರದೆ ಅಪಘಾತ

ಮಳೆಗಾಲ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿರುವ ಈ ಬೃಹತ್‌ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತವೆ. ಓವರ್‌ಟೇಕ್‌ ಭರದಲ್ಲಿ ಸಾಗುವ ವಾಹನಗಳು ಗುಂಡಿಯ ಗಾತ್ರದ ಅರಿವಿಲ್ಲದೆ ವೇಗವನ್ನು ತಗ್ಗಿಸದೆ ವಾಹನ ಚಲಾಯಿಸುತ್ತಾರೆ. ಈ ವೇಳೆ ನಿಯಂತ್ರಣ ತಪ್ಪಿ ಕೆಲವರು ಬಿದ್ದ ಘಟನೆಗಳು ನಡೆದಿದೆ. ರಾತ್ರಿವೇಳೆ ಇಲ್ಲಿನ ವಾಹನ ಚಾಲನೆ ಮತ್ತಷ್ಟು ಅಪಾಯಕಾರಿಯಾಗಿದೆ. ತಾತ್ಕಾಲಿಕ ನೆಲೆಯಲ್ಲಿಯಾದರೂ ರಸ್ತೆ ಬದಿಯ ಗುಂಡಿ ಮುಚ್ಚುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ದ್ವಿಚಕ್ರವಾಹನ ಸವಾರರು ಸ್ವಲ್ಪಮಟ್ಟಿನ ಅಜಾಗರೂಕತೆ ತೋರಿದರೂ ಅಪಘಾತ ಕಟ್ಟಿಟ್ಟ ಬುತ್ತಿ ಎಂಬಂತಿದೆ. ಈಗಾಗಲೆ ಕೆಲವು ಈ ಗುಂಡಿ ಅವ್ಯವಸ್ಥೆಯಿಂದ ಬಿದ್ದು ಪೆಟ್ಟು ಮಾಡಿಕೊಂಡ ಘಟನೆಗಳು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಸ್‌ ನಿಲ್ದಾಣದ ಎದುರು ಬಸ್‌ ಗಳನ್ನು ನಿಲುಗಡೆ ಮಾಡುವಂತೆ ಪೊಲೀಸ್‌ ಇಲಾಖೆ ಕ್ರಮ ತೆಗೆದುಕೊಳ್ಳಬೇಕು. ಅಪಾಯಕಾರಿ ಗುಂಡಿಗಳನ್ನು ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರಸಭೆ, ಸಂಬಂಧಪಟ್ಟ ಇಲಾಖೆ ಮುಂದಾಗಬೇಕು ಎಂದು ನಾಗರಿಕರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.