Kodavoor ಮೂಡುಬೆಟ್ಟು ಕಡಿದಾದ ತಿರುವು

ವಾಹನ ಸಂಚಾರಕ್ಕೆ ತೊಂದರೆ, ರಸ್ತೆ ವಿಸ್ತರೀಕರಣಕ್ಕೆ ಆಗ್ರಹ

Team Udayavani, Jul 31, 2024, 2:47 PM IST

udu

ಮಲ್ಪೆ: ಕೊಡವೂರು ಪೇಟೆಯಿಂದ ಮೂಡುಬೆಟ್ಟು ಮಾರ್ಗವಾಗಿ ಆದಿಉಡುಪಿಗೆ ತೆರಳುವಾಗ ಮೂಡು ಬೆಟ್ಟು ನಾಗಬನದ ಬಳಿ ಕಡಿದಾದ ತಿರುವುಗಳಿರುವುದು ಮಾತ್ರವಲ್ಲದೆ ಈ ರಸ್ತೆ ತೀರ ಅಗಲ ಕಿರಿದಾಗಿದ್ದು ಆಗಾಗ್ಗೆ ಇಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ ಜನ ನಿತ್ಯ ತೊಂದರೆಯನ್ನು ಅನುಭವಿಸುತ್ತಿದ್ದಾ ರೆ.

ಮೊದಲೇ ಇಲ್ಲಿನ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿಗಳ ವ್ಯವಸ್ಥೆ ಇಲ್ಲ. ಬದಿಯಲ್ಲಿ ಹೊಂಡಗಳು ಇರುವುದರಿಂದ ಹೊಂಡದಲ್ಲಿ ಮಳೆನೀರು ನಿಂತು ವಾಹನಗಳು ಹೊಂಡಕ್ಕೆ ಬೀಳುತ್ತಿರುವುದು ಸಾಮಾನ್ಯವಾಗಿದೆ. ರಸ್ತೆಯ ತಿರುವಿನ ಮಧ್ಯದಲ್ಲಿ ಚಪ್ಪಡಿ ಕಲ್ಲುಗಳಡಿಯಲ್ಲಿ ಮಣ್ಣು ರಾಶಿ ತುಂಬಿಕೊಂಡಿದ್ದು ರಸ್ತೆಯ ಇಕ್ಕೆಲಗಳಲ್ಲಿ ಕೆಸರುಮಯವಾಗಿ ಗದ್ದೆಯಂತಾಗಿದೆ. ಇಲ್ಲಿನ ರಸ್ತೆ ದಾಟಿ
ಮುಂದಿನ ಊರು ತಲುಪಬೇಕಾದರೆ ಸಾರ್ವಜನಿಕರು ಹರಸಾಹಸವನ್ನು ಪಡಬೇಕಾಗಿದೆ.

ಈ ಭಾಗದಲ್ಲಿ ಎರಡು ಮೂರು ಶಾಲೆಗಳಿದ್ದು ವಿದ್ಯಾರ್ಥಿಗಳಿಗೆ ನಡೆದಾಡಿಕೊಂಡು ಹೋಗಲು ತೊಂದರೆಯಾಗಿದೆ. ಶಾಲಾ ಕಾಲೇಜಿಗೆ ಬಸ್‌ನಲ್ಲಿ ತೆರಳುವಾಗ ಸರಿಯಾದ ಸಮಯಕ್ಕೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಮಲ್ಪೆ ಆದಿ ಉಡುಪಿ ಮುಖ್ಯ ರಸ್ತೆಯು ತೀರಾ ಹದಗೆಟ್ಟ ಕಾರಣ ಕೊಡವೂರು, ವಡಭಾಂಡೇಶ್ವರ ಬೀಚ್‌ ಕಡೆ ಬರುವ ವಾಹನಗಳು ಈ ಮಾರ್ಗದಲ್ಲಿ ಬರುವುದರಿಂದ ಇದೀಗ ಇಲ್ಲಿ ವಾಹನ ಸಂಚಾರ ದಟ್ಟವಾಗಿರುತ್ತದೆ. ಆದಿಉಡುಪಿ ಮಲ್ಪೆಗೆ ಪ್ರಮುಖ ಬದಲಿ ರಸ್ತೆ ಇದಾಗಿರುವುದರಿಂದ ಸಂಬಂಧಪಟ್ಟ ಇಲಾಖಾಧಿಕಾರಿಗಳು ಇತ್ತ ಗಮನಹರಿಸಿ ಇಲ್ಲಿ ರಸ್ತೆಯನ್ನು ವಿಸ್ತರೀಕರಣಗೊಳಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಪ್ರಸ್ತಾವನೆ ಸಲ್ಲಿಕೆ
ಆದಿಉಡುಪಿ ಕೊಡವೂರು ಮಾರ್ಗದ ರಸ್ತೆ ಮತ್ತು ಕೊಡವೂರು ಬಳಿಯ ಸೇತುವೆ ವಿಸ್ತರೀಕರಣಕ್ಕೆ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರಿಗೂ ಮನವಿ ಮಾಡಲಾಗಿದ್ದು ಅವರಿಂದ ಸ್ಪಂದನೆಯೂ ದೊರಕಿದೆ. ಈ ಬಗ್ಗೆ ಹೆಚ್ಚಿನ ಪ್ರಯತ್ನವನ್ನು ಮಾಡಲಾಗುತ್ತದೆ.

–  ಶ್ರೀಶ ಭಟ್‌,ನಗರಸಭೆ ಸದಸ್ಯರು, ಮೂಡುಬೆಟ್ಟು ವಾರ್ಡ್‌

ಟಾಪ್ ನ್ಯೂಸ್

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Udupi ಕೋಟ್ಯಂತರ ರೂ. ವಂಚನೆ ಪ್ರಕರಣ: ಶಿವಪ್ರಸಾದ್‌ ಆಳ್ವ ಎಸ್‌ಪಿಪಿ ನೇಮಿಸಿದ ಸರಕಾರ

Udupi ಕೋಟ್ಯಂತರ ರೂ. ವಂಚನೆ ಪ್ರಕರಣ: ಶಿವಪ್ರಸಾದ್‌ ಆಳ್ವ ಎಸ್‌ಪಿಪಿ ನೇಮಿಸಿದ ಸರಕಾರ

Manipal ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು: ಪ್ರಕರಣ ದಾಖಲು

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

arrested

Ganesh Chaturthi ಪೋಸ್ಟ್‌ ಡಿಲೀಟ್‌: ಪ್ರಾಂಶುಪಾಲ ಸೆರೆ

1-tkp

Union Finance Secretary ಹುದ್ದೆಗೆ ತುಹಿನ್‌ ಕಾಂತಾ ಪಾಂಡೆ ನೇಮಕ

1-aaaaaaaa

Train ಚಲಿಸುವಾಗ ಕೊಂಡಿ ತುಂಡು: ಬೇರ್ಪಟ್ಟ ಬೋಗಿ

ED

Amtech Group 5 ಸಾವಿರ ಕೋಟಿ ರೂ. ಆಸ್ತಿ ಜಪ್ತಿ: 27,000 ಕೋಟಿ ವಂಚನೆ

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.