ಉಡುಪಿ ಅದಮಾರು ಮಠದಿಂದ ಪ್ರಧಾನ ಮಂತ್ರಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ

ಅದಮಾರು ಮಠ ಹಾಗೂ ಮಠದ ಶಿಕ್ಷಣ ಸಂಸ್ಥೆಗಳ ವತಿಯಿಂದ 55,55,555 ರೂ. ದೇಣಿಗೆ

Team Udayavani, Apr 17, 2020, 5:25 PM IST

ಉಡುಪಿ ಅದಮಾರು ಮಠದಿಂದ ಪ್ರಧಾನ ಮಂತ್ರಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ

ಉಡುಪಿ: ಪ್ರಧಾನ ಮಂತ್ರಿಯವರ ಕೋವಿಡ್ ಸಂತ್ರಸ್ತರ ನಿಧಿಗೆ ಪರ್ಯಾಯ ಶ್ರೀ ಅದಮಾರು ಮಠ ಹಾಗೂ ಮಠದ ಶಿಕ್ಷಣ ಸಂಸ್ಥೆಗಳ ವತಿಯಿಂದ 55,55,555.00 ( ಐವತ್ತೈದು ಲಕ್ಷದ ಐವತ್ತೈದು ಸಾವಿರದ ಐನೂರ ಐವತ್ತೈದು) ರೂಪಾಯಿಗಳನ್ನು ದೇಣಿಗೆಯಾಗಿ ನೀಡಲಾಯಿತು.

ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾಧಿಕಾರಿ ಜಗದೀಶ್, ಉಡುಪಿ ಶಾಸಕರಾದ ರಘುಪತಿ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಇವರ ಸಮ್ಮುಖದಲ್ಲಿ ಅದಮಾರು ಮಠದಲ್ಲಿ ಇಂದು ದೇಣಿಗೆಯ ಚೆಕ್ ನೀಡಿದರು.

ಕಾಲ ಕಾಲಕ್ಕೆ ಮಳೆ ಬರಬೇಕು ಮಳೆಯಿಂದ ಬೆಳೆ ಬೆಳೆಯಬೇಕು. ಆದರೆ ಪ್ರಸ್ತುತ ಯಾರೋ ಒಬ್ಬರು ಮಾಡಿದ ತಪ್ಪಿನಿಂದ ವಿಶ್ವದ ಪ್ರತೀಯೊಬ್ಬರೂ ಬೆಲೆ ತೆರಬೇಕಾದ ಪ್ರಸಂಗ ಬಂದು ಜಗತ್ತಿಗೆ ದೊಡ್ಡ ಅನಾಹುತ ಬಂದಿದೆ. ನಮ್ಮ ದೇಶದ ಪ್ರಧಾನಿಯವರು ಸಂಕಷ್ಟದಲ್ಲಿರುವ ದೇಶದ ಜನರ ಪರಿಹಾರಕ್ಕಾಗಿ ಮಾಡುತ್ತಿರುವ ಕೆಲಸಕ್ಕೆ ಎಲ್ಲರೂ ಕೈಜೋಡಿಸಬೇಕು.

ಈ ನಿಟ್ಟಿನಲ್ಲಿ ನಾವು ನಮ್ಮ ಮಠದಿಂದ ದೇವರಲ್ಲಿ ಪ್ರಾರ್ಥಿಸಿ ಮೊತ್ತವನ್ನು ಪ್ರಸಾದ ರೂಪವಾಗಿ ನೀಡಿದ್ದೇವೆ. ಆದಷ್ಟು ಬೇಗ ಎಲ್ಲರೂ ಆರೋಗ್ಯವಂತರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು  ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಈ ಸಂದರ್ಭದಲ್ಲಿ ತಮ್ಮ ಸಂದೇಶವನ್ನು ನೀಡಿದರು.


ದೇಶದ ಈ ಸಂಕಷ್ಟ ಕಾಲದಲ್ಲಿ ಸರ್ಕಾರಕ್ಕೆ ಯಾವುದೇ ಮೂಲಗಳಿಂದ ತೆರಿಗೆ ರೂಪದ ಆದಾಯವಿರುವುದಿಲ್ಲ. ಆದರೆ ವಿವಿಧ ಇಲಾಖೆಗಳ ಖರ್ಚು ಸಾರ್ವಜನಿಕರ ಆರೋಗ್ಯದ ಖರ್ಚುಗಳು ಇದ್ದೆ ಇರುತ್ತದೆ. ಇದಕ್ಕೆ ನಾವು ವಾರದಲ್ಲಿ ಮೂರೂ ಹೊತ್ತಿನ ಊಟವನ್ನು ಬಿಟ್ಟು ಅದರ ಉಳಿತಾಯವನ್ನು ಕಷ್ಟದಲ್ಲಿರುವವರಿಗೆ ನಾವು ಹಂಚಬಹುದು. ಎಲ್ಲರ ಪರಿಶ್ರಮದಿಂದ ವಿಶ್ವದಲ್ಲಿಯೇ ಭಾರತ ದೇಶವು ಪ್ರಥಮ ಕೋವಿಡ್ ಮುಕ್ತ ದೇಶವಾಗಿ ವಿಶ್ವಗುರುವಾಗಿ ಹೊರಹೊಮ್ಮಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

ಈ ಹಿಂದೆ ಅದಮಾರು ಮಠದ ವತಿಯಿಂದ ಎರಡು ಲಕ್ಷ ರೂಪಾಯಿಗಳನ್ನು ಪ್ರಧಾನ ಮಂತ್ರಿಯವರ ಕೋವಿಡ್ ಪರಿಹಾರ ನಿಧಿಗೆ ನೀಡಲಾಗಿತ್ತು. ಪರ್ಯಾಯ ಶ್ರೀ ಅದಮಾರು ಮಠ ಹಾಗೂ ಶ್ರೀ ಕೃಷ್ಣ ಮಠದ ವತಿಯಿಂದ ದಿನವಹಿ ಸಾಮಗ್ರಿಗಳ 1000 ಕಿಟ್ ಗಳನ್ನೂ ಹಾಗೂ ಅದಮಾರು ಮಠದ ಆಡಳಿತದಲ್ಲಿರುವ ಕುಂಜಾರುಗಿರಿ ಶ್ರೀ ದುರ್ಗಾ ದೇವಾಸ್ಥಾನದಿಂದ 250 ಕಿಟ್ ಗಳನ್ನೂ ನೀಡಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.