ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಅಂಬಲಪಾಡಿ ನಿವಾಸಿಗಳು

ಗ್ರಾಮದ ತೋಡಿನಲ್ಲಿ ಹರಿಯುತ್ತಿದೆ ಉಡುಪಿ ನಗರದ ಡ್ರೈನೇಜ್‌ ನೀರು

Team Udayavani, Dec 4, 2019, 4:35 AM IST

rt-23

ಮಲ್ಪೆ: ನಗರದ ಡ್ರೈನೇಜಿನ ನೀರು ರಾಷ್ಟ್ರೀಯ ಹೆದ್ದಾರಿ ಆ್ಯಬ್ಕೋ ಸ್ಟೀಲ್‌ ಬಳಿಯ ಪೈಪ್‌ನಿಂದ ತಾವರೆಕರೆಯಿಂದ ಅಂಬಲಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೋಡಿನಲ್ಲಿ ಹರಿದು ಪರಿಸರದ ಈ ಪ್ರದೇಶಗಳು ಸಾಂಕ್ರಾಮಿಕ ರೋಗಗಳ ಮೂಲವಾಗಿ ಪರಿವರ್ತನೆಯಾಗಿದೆ. ಇದರಿಂದಾಗಿ ತೋಡಿನ ಪರಿಸರದ ಜನರು ದಿನದ 24 ಗಂಟೆ ಮೂಗು, ಬಾಯಿ ಮುಚ್ಚಿಕೊಂಡೆ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಕಿನ್ನಿಮೂಲ್ಕಿ ಆ್ಯಬ್ಕೋ ಸ್ಟೀಲ್‌ ಬಳಿ ಇರುವ ಡ್ರೈನೇಜ್‌ ನೀರನ್ನು ರಾಜಾರೋಷವಾಗಿ ಇಲ್ಲಿನ ತೋಡಿಗೆ ಬಿಡುವುದರಿಂದ ಸಮಸ್ಯೆ ಉದ್ಭವಿಸಿದ್ದು ದಿನದಿಂದ ದಿನಕ್ಕೆ ಸಮಸ್ಯೆ ಉಲ್ಬಣಿಸುತ್ತಾ ಹೋಗುತ್ತಿದೆ ಎಂದು ಅಂಬಲಪಾಡಿ ಕಪ್ಪೆಟ್ಟು ನಾಗರಿಕರು ಒಂದೆಡೆ ಆರೋಪಿಸಿದ್ದಾರೆ.

ಬಾವಿ ನೀರು ಹಾಳು
ಅಂಬಲಪಾಡಿ ಶೇಡಿಕಟ್ಟ, ಕಪ್ಪೆಟ್ಟು ಗರೋಡಿ ಪ್ರದೇಶದ ಬಾವಿ ನೀರು ಶುದ್ಧವಾಗಿರುವುದರಿಂದ ಪಂ. ನೀರಿಗೆ ಆಶ್ರಯಿಸದೆ ವರ್ಷವಿಡೀ ತಮ್ಮ ಬಾವಿ ನೀರನ್ನೇ ಬಳಸುತ್ತಿದ್ದಾರೆ. ಇದೀಗ ತ್ಯಾಜ್ಯ ನೀರು ಹರಿದು ಬಾವಿ ನೀರು ಕಲುಷಿತಗೊಂಡಿದೆ.

400ಕ್ಕೂ ಅಧಿಕ ಮನೆಗಳಿಗೆ ಸಮಸ್ಯೆ
ಈ ಕೊಳಚೆ ನೀರು ಕಡೆಕಾರು ಗ್ರಾಮದ ಭಾಗಶಃ ಪ್ರದೇಶ ಸೇರಿದಂತೆ ಅಂಬಲಪಾಡಿ ಗ್ರಾಮದ ಕಪ್ಪೆಟ್ಟು, ಮಜ್ಜಿಗೆಪಾದೆ, ಕಿದಿಯೂರು, ಅಂಬಲಪಾಡಿ, ಮಜ್ಜಿಗೆ ಪಾದೆ, ಬಂಕೇರುಕಟ್ಟದ ಹರಿದು ಬಂದು ಕಲ್ಮಾಡಿ ಹೊಳೆಯನ್ನು ಸೇರುತ್ತದೆ. ತೋಡಿನ ನೀರು ಕಪ್ಪು ಬಣ್ಣಕ್ಕೆ ಪರಿವರ್ತನೆಗೊಂಡಿದ್ದು ಅಸಹ್ಯ ದುರ್ವಾಸನೆ ಬೀರುತ್ತಿದೆ. ಪರಿಸರದ 400ಕ್ಕೂ ಅಧಿಕ ಮನೆಗಳಿಗೆ ಕೊಳಚೆ ನೀರಿನಿಂದಾಗಿ ಅವರ ಬದುಕು ನರಕ ಸದೃಶವಾಗಿದೆ. ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಪರಿವರ್ತನೆ ಗೊಂಡ ತೀರದ ಮಂದಿಗೆ ಈಗ ಮಲೇರಿಯಾದಂತಹ ರೋಗಗಳು ಕಾಣಿಸಿಕೊಳ್ಳಲಾರಂಭಿಸಿದೆ. ಕಳೆದ ಕೆಲವು ದಿನಗಳಿಂದ ಇಲ್ಲಿನ ಗ್ರಾಮಸ್ಥರು ಸಮಸ್ಯೆಯನ್ನು ಅನುಭವಿಸಿಕೊಂಡು ಬರುತ್ತಿದ್ದಾರೆ. ಈ ಹಿಂದೆಯೂ ಕೂಡ ಇದೇ ಸಮಸ್ಯೆ ತಲೆದೋರಿದಾಗ ನಾಗರಿಕರು ಪ್ರತಿಭಟನೆಗೆ ಮುಂದಾಗಿದ್ದರು. ಆ ಬಳಿಕ ಕೆಲವು ಕಾಲ ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಲ್ಪಿಸಲಾಗಿತ್ತು.

ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣ
ಒಂದು ವಾರದಿಂದ ಸಮಸ್ಯೆ ಸೃಷ್ಟಿಯಾಗಿದೆ. ನಗರಸಭೆಯ ಪೌರಾಯುಕ್ತರಿಗೆ ಸಮಸ್ಯೆಯ ಬಗ್ಗೆ ತಿಳಿಸಿದ್ದೇವೆ. ಒಂದೆರಡು ದಿನಗಳಲ್ಲಿ ಸೂಕ್ತ ಪರಿಹಾರವನ್ನು ಕಲ್ಪಿಸಲಾಗುವುದೆಂದು ಹೇಳಿದ್ದಾರೆ. ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಾ ಹೋಗುತ್ತದೆ ವಿನಾ ಪರಿಹಾರ ಕಾಣುವಂತೆ ತೋರುತ್ತಿಲ್ಲ. ಕುಡಿಯುವ ನೀರಿನ ಪರಿಹಾರಕ್ಕೆ ಈಗಾಗಲೇ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕುವ ಕೆಲಸವೂ ಡ್ರೈನೇಜ್‌ ನೀರಿನಿಂದಾಗಿ ಬಾಕಿ ಉಳಿದಿದೆ.
-ಪ್ರಮೋದ್‌ ಸಾಲ್ಯಾನ್‌, ಅಧ್ಯಕ್ಷರು, ಅಂಬಲಪಾಡಿ ಗ್ರಾ.ಪಂ.

ಸ್ವತ್ಛತೆಯ ಬಗ್ಗೆ ನಿರ್ಲಕ್ಷ್ಯ
ಮೊದಲೇ ಕುಡಿಯುವ ನೀರಿನ ಸಮಸ್ಯೆ ಇರುವ ಈ ಭಾಗದಲ್ಲಿ ಇದ್ದ ಕೆಲವೊಂದು ಶುದ್ದ ನೀರಿನ ಬಾವಿಗಳಿಗೆ ಡ್ರೈನೇಜ್‌ನ ಕೊಳಚೆ ನೀರು ಸೇರಿ ಇದ್ದ ಬಾವಿ ನೀರನ್ನು ಉಪಯೋಗಿಸದಂತೆ ಮಾಡಿದೆ. ಒಂದೆಡೆ ಸ್ವತ್ಛ ಭಾರತದ ಬಗ್ಗೆ ದಿನ ಬೆಳಗಾದರೆ ಪುಂಗಿ ಊದಲಾಗುತ್ತಿದೆ. ಇನ್ನೊಂದೆಡೆ ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ ಆಡಳಿತವೇ ಸ್ವತ್ಛತೆಯ ಬಗ್ಗೆ ನಿರ್ಲಕ್ಷé ತೋರಿಸುತ್ತಿರುವುದು ವಿಪರ್ಯಾಸ.
– ಶ್ರೀನಾಥ್‌ ಅಂಬಲಪಾಡಿ ಕಪ್ಪೆಟ್ಟು

ಸೊಳ್ಳೆಗಳ ಕಾಟ
ತೋಡಿನ ಕೊಳಚೆ ನೀರಿನಲ್ಲಿ ಕುಳಿತ ಸೊಳ್ಳೆಗಳು ರಾತ್ರಿ ಮನೆಯೊಳಗೆ ಹೊಕ್ಕುತ್ತವೆೆ. ಸೊಳ್ಳೆಕಾಟದಿಂದ ರಾತ್ರಿ ನಿದ್ರೆ ಮಾಡುವಂತಿಲ್ಲ. ನೀರಿನ ಕೆಟ್ಟ ವಾಸನೆಯಿಂದ ಮನೆಯಿಂದ ಹೊರಗೆ ಬರುವ ಹಾಗಿಲ್ಲ. ನಮ್ಮ ಸಮಸ್ಯೆಯನ್ನು ಯಾರೂ ಕೇಳುವವರಿಲ್ಲ. ಶೀಘ್ರವಾಗಿ ಸ್ಥಳೀಯಾಡಳಿತ ಪರಿಹಾರ ಕೈಗೊಳ್ಳಬೇಕು.
– ಜಲಜಾ ಕೋಟ್ಯಾನ್‌, ಮಜ್ಜಿಗೆಪಾದೆ

ಸಮಸ್ಯೆಗೆ ಶೀಘ್ರ ಮುಕ್ತಿ
ಈಗಾಗಲೇ ಉಂಟಾಗಿರುವ ಸಮಸ್ಯೆಯ ಬಗ್ಗೆ ಅಂಬಲಪಾಡಿ ಪಂಚಾಯತ್‌ ಮೂಲಕ ನನಗೆ ದೂರು ಬಂದಿದೆ. ಸಮಸ್ಯೆಯನ್ನು ತತ್‌ಕ್ಷಣ ಪರಿಹರಿಸುವಂತೆ ನಮ್ಮ ಎಂಜಿನಿಯರ್‌ರಿಗೆ ಹೇಳಿದ್ದೇವೆ. ಒಂದೆರಡು ದಿನದಲ್ಲಿ ಸರಿಯಾಗಲಿದೆ.
-ಆನಂದ ಸಿ. ಕಲ್ಲೋಳಿಕರ್‌, ಪೌರಾಯುಕ್ತರು ಉಡುಪಿ ನಗರಸಭೆ

ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.