ಮಲ್ಲಾರು: ಅಕ್ರಮ ಕಸಾಯಿಖಾನೆಗೆ ದಾಳಿ; ಬ್ಬರ ಬಂಧನ: 12 ಲಕ್ಷ ರೂ. ಮೌಲ್ಯದ ಸೊತ್ತು ವಶ
Team Udayavani, Sep 10, 2020, 9:52 PM IST
ಕಾಪು: ಮಲ್ಲಾರು ಗ್ರಾಮದ ಕುಡ್ತಿಮಾರ್ ಕೈರುನ್ನಿಸಾ ಕಾಟೇಜ್ ಬಳಿಯ ಅಕ್ರಮ ಕಸಾಯಿಖಾನೆಗೆ ಗುರುವಾರ ದಾಳಿ ನಡೆಸಿದ ಕಾಪು ಪೊಲೀಸರು ಇಬ್ಬರನ್ನು ಬಂಧಿಸಿ, 12 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಟಪಾಡಿ ಮೂಡಬೆಟ್ಟು ಬಳಿಯಿಂದ ಜಾನುವಾರು ಕಳವು ಮಾಡಿ ಕಾರಿನಲ್ಲಿ ತಂದು ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣಾಧಿಕಾರಿ ರಾಜಶೇಖರ್ ಬಿ. ಸಾಗನೂರು ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಉದ್ಯಾವರ ಗುಡ್ಡೆಯಂಗಡಿ ನಿವಾಸಿ ಮೊಹಮ್ಮದ್ ತಾವಾ (35), ಮೂಳೂರು ನಿವಾಸಿ ಮೊಯಿದಿಬ್ಬ (26) ಅವರನ್ನುಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಶಮೀರ್ ಮತ್ತು ನೌಶಾದ್ ಪರಾರಿಯಾಗಿದ್ದಾರೆ.
ಘಟನಾ ಸ್ಥಳದಲ್ಲಿದ್ದ ಎರಡು ಕಾರು, ಸ್ಕೂಟರ್, ನಾಲ್ಕು ಮೊಬೈಲ್, ಮೂರು ಜೀವಂತ ದನಗಳು, 70 ಕೆ.ಜಿ. ಮಾಂಸ ಸಹಿತವಾಗಿ 12,73,300 ರೂ. ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕರ್ನಾಟಕ ಗೋ ಹತ್ಯಾ ನಿಷೇಧ ಕಾಯ್ದೆ, ಪ್ರಾಣಿ ಹಿಂಸಾ ಪ್ರತಿಬಂಧಕ ತಡೆ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್, ಕುಮಾರಚಂದ್ರ, ಭರತ್ ರೆಡ್ಡಿ, ಮಹೇಶ್ ಪ್ರಸಾದ್, ಕಾಪು SI ರಾಜಶೇಖರ್ ಬಿ. ಸಾಗನೂರು, SI ಐ.ಆರ್. ಗಡ್ಡೇಕರ್, ರವೀಂದ್ರ, ಆನಂದ್, ಅರುಣ್, ಮಂಜುನಾಥ್, ಸಂದೇಶ್, ಪರಶುರಾಮ್, ಚಂದ್ರಶೇಖರ್, ಜಗದೀಶ್, ಮಹಾಬಲ, ಗೀತಾ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.