ಆ.25:ಪಡುಬಿದ್ರಿ ಬಂಟರ ಸಂಘದಲ್ಲಿ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ

ಪಡುಬಿದ್ರಿ ಬಂಟರ ಸಂಘ, ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಜಂಟಿ ಸಹಯೋಗದ ಕಾರ್ಯಕ್ರಮ

Team Udayavani, Aug 21, 2024, 11:11 AM IST

2-padubidri

ಪಡುಬಿದ್ರಿ: ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್, ಉಡುಪಿ ಗ್ರಾಮೀಣ ಬಂಟರ ಸಂಘ ದ ಚಾರಿಟೇಬಲ್ ಟ್ರಸ್ಟ್ ನ  ವತಿಯಿಂದ ಆ.25 ರಂದು ಪಡುಬಿದ್ರಿ ಬಂಟರ ಸಂಘದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ “ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ” ನಡೆಯಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.

ಪಡುಬಿದ್ರಿ ಬಂಟರ ಸಂಘದಲ್ಲಿ ಆ.21ರ ಬುಧವಾರ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು, ಯುವಕರಿಗೆ ಮತ್ತು ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿ ಮುಕ್ತವಾಗಿ ನಡೆಯಲಿರುವ ಕಾರ್ಯಕ್ರಮವನ್ನು ಎಂ. ಆರ್. ಜಿ. ಗ್ರೂಪ್ ನ ಛೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ರವೀಂದ್ರನಾಥ್ ಜಿ‌ ಹೆಗ್ಡೆ, ಸುರೇಶ ಶೆಟ್ಟಿ, ಸಾಂತೂರ್ ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ಉದ್ಘಾಟನಾ ಸಮಾರಂಭದ ಬಳಿಕ ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೇರಣಾತ್ಮಕ ಮಾತುಗಳೊಂದಿಗೆ ತನ್ನ ಕಷ್ಟದ ದಿನಗಳು, ತನ್ನ ಉದ್ದಿಮೆ ಮಾಡುವ ಸಂದರ್ಭದಲ್ಲಿ ಬಂದಿರುವ ವಿವಿಧ ಸವಾಲುಗಳು, ಅವುಗಳನ್ನು ಎದುರಿಸಿ ಮುಂದೆ ಯಶಸ್ವಿಯಾಗಿ ಸಾಗಿ ಈಗ ಯಶಸ್ವಿ ಉದ್ಯಮಿಯಾಗಿ ಸಾಗಿ ಬಂದ ರೀತಿಯ ಬಗ್ಗೆ ವಿವರಿಸಿ ಸ್ವ – ಉದ್ಯೋಗ ಮಾಡಲು ಪ್ರೇರಣೆ ಕೊಡಲಿದ್ದಾರೆ.

ಪ್ರೊ| ದಿವ್ಯಾರಾಣಿ ಪ್ರದೀಪ್, ಮಹಿಳಾ ಸಬಲೀಕರಣ ಮತ್ತು ಮಹಿಳೆರು ಯಾವ ತರಹದ ಉದ್ಯಮದ ಮೂಲಕ ಬೆಳೆಯ ಬಹುದು, ಮಹಿಳಾ ಯುವ ಉದ್ಯಮಿ ಮೈತ್ರಿ ಮಲ್ಲಿ ಮಂಗಳೂರು, ಯಶಸ್ವಿ ಉದ್ಯಮಿಯಾಗಲು ಪ್ರಯತ್ನ ಪಡುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಡಾ. ಸಿ. ಕೆ.ಮಂಜುನಾಥ್, ಡಾ. ಶುಭ ಮಾಹೆ, ಪ್ರವೀಣ್ ಶೆಟ್ಟಿ ಎಂ. ಐ. ಟಿ, ಡಾ. ಸುಧೀರಾಜ್, ಲೀಡ್ ಬ್ಯಾಂಕ್ ಡಿವಿಷನಲ್ ಮ್ಯಾನೇಜರ್ ಹರೀಶ್ ಕುಮಾರ್ ಅವರು ನಾಯಕತ್ವ, ಸಂವಹನ‌ ಕಲೆ, ಇಂಟರ್ ವ್ಯೂ ಸಂದರ್ಶನಕ್ಕೆ ತಯಾರಿ, ಬ್ಯಾಂಕ್ ಗಳಿಂದ ಉದ್ಯಮಕ್ಕೆ ಸಿಗುವ ಸಹಾಯ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ಭಾಗವಹಿಸಿದ ಅಭ್ಯರ್ಥಿ ಗಳಿಗೆ ಸ್ಕಿಲ್ ಡೆವಲಪ್ಟೆಂಟ್ ಸೆಂಟರ್ ವತಿಯಿಂದ ಸರ್ಟಿಫಿಕೇಟ್ ನೀಡಲಾಗುವುದು ಎಂದರು.

ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಸ್ಥಾಪಕಾಧ್ಯಕ್ಷ ಭಾಸ್ಕರ್ ಶೆಟ್ಟಿ ಸಾಂತೂರು, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಯುವ ಬಂಟರ ಸಂಘದ ಅಧ್ಯಕ್ಷ ನವೀನ್‌ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಕಾರ್ಯಕ್ರಮ ಸಂಯೋಜಕಿ ಸಂತೃಪ್ತಿ ಎಂ. ಶೆಟ್ಟಿ, ಉಡುಪಿ ಗ್ರಾಮೀಣ ಬಂಟರ ಸಂಘದ ಕಾರ್ಯದರ್ಶಿ ವಿಜೀತ್ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.