ಸತ್ಯಾಂಶ ಹೊರಬರುವವರೆಗೆ ತಾಳ್ಮೆ ಇರಲಿ: ಉಡುಪಿ ಕಾಲೇಜಿಗೆ ಭೇಟಿ ನೀಡಿದ ಖುಷ್ಬೂ ಹೇಳಿಕೆ
ವಿಡಿಯೋ ಮಾಡಿರುವ ಬಗ್ಗೆ ಕುರುಹು ಲಭಿಸಿಲ್ಲ, ತನಿಖೆ ಮಾಡುತ್ತೇವೆ
Team Udayavani, Jul 27, 2023, 3:43 PM IST
ಉಡುಪಿ: ಇಲ್ಲಿನ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಬಗ್ಗೆ ಕುರುಹು ಲಭಿಸಿಲ್ಲ. ಸಂಪೂರ್ಣ ತನಿಖೆಯಾದ ಬಳಿಕ ಮಾಹಿತಿ ನೀಡಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದರು.
ಪ್ರಕರಣ ನಡೆದ ಕಾಲೇಜಿಗೆ ಭೇಟಿ ನೀಡಿದ ಅವರು, ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದನ್ನೂ ಓದಿ:ಪುಣೆಯಲ್ಲೊಂದು ಅಮಾನುಷ ಘಟನೆ: ಸಾಲ ತೀರಿಸಲಿಲ್ಲವೆಂದು ಪತಿಯ ಎದುರೇ ಪತ್ನಿಯ ಅತ್ಯಾಚಾರ
ಈ ಪ್ರಕರಣ ಎಷ್ಟು ದಿನ ಮುಂದೆ ಹೋಗುತ್ತದೆ ಎಂಬ ಮಾಹಿತಿಯಿಲ್ಲ. ಮತ್ತಷ್ಟು ತನಿಖೆ ನಡೆಸಲಾಗುವುದು. ಈ ಬಗ್ಗೆ ಯಾರೂ ಸ್ವಯಂ ನಿರ್ಧಾರ ತೆಗೆದುಕೊಳ್ಳಬೇಡಿ. ಸತ್ಯಾಂಶ ಹೊರಬರುವವರೆಗೆ ಎಲ್ಲರೂ ತಾಳ್ಮೆ ವಹಿಸುವುದು ಉತ್ತಮ ಎಂದು ಹೇಳಿದರು.
ಈ ಬಗ್ಗೆ ಮತ್ತಷ್ಟು ತನಿಖೆ ಮಾಡಲು ಸಮಯಾವಕಾಶ ಬೇಕಿದೆ. ಅದುವರೆಗೆ ಎಲ್ಲರೂ ಸಂಯಮದಿಂದ ಇರುವುದು ಅಗತ್ಯ. ಹಿಡನ್ ಕೆಮರಾ ಇರುವ ಬಗ್ಗೆ ಯಾವುದೇ ಕುರುಹು ಇಲ್ಲ. ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ಪೊಲೀಸ್ ಇಲಾಖೆ ಮೂಲಕ ಸೂಕ್ತ ತನಿಖೆ ನಡೆಸಲಾಗುವುದು ಎಂದು ಖುಷ್ಬೂ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಢೀರ್ ರಾಜೀನಾಮೆ
Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.