ನಗರಸಭೆ ವಾರ್ಡ್‌ಗಳ ಹೂಳೆತ್ತುವ ಕಾಮಗಾರಿ ಆರಂಭ

ನಗರದ ಚರಂಡಿ ಹೂಳಿಗೆ ಕೊನೆಗೂ ಮುಕ್ತಿ

Team Udayavani, Jun 12, 2020, 5:30 AM IST

ನಗರಸಭೆ ವಾರ್ಡ್‌ಗಳ ಹೂಳೆತ್ತುವ ಕಾಮಗಾರಿ ಆರಂಭ

ಉಡುಪಿ: ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಚರಂಡಿ ಹೂಳೆತ್ತುವ ಕಾಮಗಾರಿ ಚುರುಕು ಪಡೆದುಕೊಂಡಿದೆ. ಸುಮಾರು 39 ಲಕ್ಷ ರೂ. ವೆಚ್ಚದಲ್ಲಿ ಹೂಳು ತೆಗೆಯುವ ಕಾಮಗಾರಿ ನಡೆಯಲಿದೆ.

ನಗರಸಭೆಯ 22 ವಾರ್ಡ್‌ಗಳಲ್ಲಿ 5 ಪ್ಯಾಕೇಜ್‌ಗಳಂತೆ ಹಾಗೂ 13 ವಾರ್ಡ್‌ಗಳಲ್ಲಿ 3 ಪ್ಯಾಕೆಜ್‌ಗಳ ಮೂಲಕ ಚರಂಡಿಗಳ ಹೂಳೆತ್ತುವ ಕಾಮಗಾರಿ ಆರಂಭಗೊಂಡಿದೆ. 23ರಿಂದ 24 ವಾರ್ಡ್‌ಗಳಲ್ಲಿ ಈಗ ಕೆಲಸ ನಡೆಯುತ್ತಿದೆ. ಇನ್ನುಳಿದ ವಾರ್ಡ್‌ಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ಚರಂಡಿಗಳ ಹೂಳು ತೆಗೆಯುವ ಕಾಮಗಾರಿ ನಡೆಯಲಿದೆ. ಪೂರ್ಣ ಪ್ರಮಾಣದ ಮಳೆ ಶುರುವಾಗುವುದರೊಳಗೆ ಎಲ್ಲ ವಾರ್ಡ್‌ಗಳ ಚರಂಡಿಗಳ ಹೂಳೆತ್ತುವ ಕೆಲಸ ಮುಕ್ತಾಯವಾಗಲಿದೆ ಎಂದು ನಗರಸಭೆ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಹೂಳು ತೆಗೆದು ಸ್ವಚ್ಛತೆ
2 ಜೆಸಿಬಿ ಯಂತ್ರ ಹಾಗೂ ಕಾರ್ಮಿಕ ರನ್ನು ಬಳಸಿಕೊಂಡು ಹೂಳು ತೆಗೆಯುವ ಕಾಮಗಾರಿ ಬನ್ನಂಜೆ, ಅಜ್ಜರಕಾಡು ವಾರ್ಡ್‌ಗಳಲ್ಲಿ ಈಗ ನಡೆಯುತ್ತಿದೆ. ನಗರಸಭೆ ಪೌರಾಯುಕ್ತರ ಮಾರ್ಗ ದರ್ಶನ, ಅಧಿಕಾರಿಗಳ ಸಹಕಾರ, ವಾರ್ಡ್‌ ಸದಸ್ಯರ ಮೇಲುಸ್ತುವಾರಿಯಲ್ಲಿ ಸ್ಥಳೀಯರ ಸಲಹೆ ಸೂಚನೆ ಪಡೆದು ಚರಂಡಿಗಳ ಹುಲ್ಲು ಕತ್ತರಿಸಿ ಹೂಳು ತೆಗೆಯುವ ಕೆಲಸ ನಡೆಯುತ್ತಿದೆ. ಈ ಹಿಂದೆ ನಗರಸಭೆ ವ್ಯಾಪ್ತಿಯ ಇಂದ್ರಾಣಿ ನದಿಯ ಹೂಳನ್ನು 35 ಲಕ್ಷ ರೂ. ವೆಚ್ಚದಲ್ಲಿ ತೆಗೆಯಲಾಗಿತ್ತು.

ಕಾಮಗಾರಿಗೆ ವೇಗ
ಮಳೆಗಾಲಕ್ಕೂ ಮುಂಚಿತ ನಗರ ಸ್ವಚ್ಛ ಗೊಳಿಸಿ, ಸುಸಜ್ಜಿತವಾಗಿಡುವ ಕೆಲಸವನ್ನು ನಗರಸಭೆ ಮರೆತೇ ಬಿಟ್ಟಿದೆ ಎನ್ನುವ ಅಸಮಾಧಾನ ಸಾರ್ವಜನಿಕ ವಲಯದಿಂದ ವ್ಯಕ್ತಗೊಂಡಿತ್ತು. ಇದೀಗ ನಗರಸಭೆ ಅಧಿಕಾರಿಗಳಿಂದ ಚರಂಡಿ ಹೂಳು ತೆಗೆಯುವ ಕಾಮಗಾರಿಗೆ ವೇಗ ದೊರೆತಿದ್ದು, ಪೂರ್ಣ ಮಳೆಗಾಲ ಆರಂಭವಾಗುವ ಮೊದಲು ಕೆಲಸ ಪೂರ್ತಿಗೊಳಿಸುವ ವಿಶ್ವಾಸ ಅವರಲ್ಲಿದೆ.

ಸುದಿನ ಸರಣಿ ವರದಿ ಪ್ರಕಟಿಸಿ ಎಚ್ಚರಿಸಿತ್ತು
ವರ್ಷದಿಂದ ವರ್ಷಕ್ಕೆ ನಗರಗಳ ವಿವಿಧೆಡೆಗಳ ಚರಂಡಿ ಗಾತ್ರ ಕುಗ್ಗುತ್ತಿವೆ. ಇದು ಹೂಳಿನಿಂದ ಮುಚ್ಚಿ ಸಮಸ್ಯೆ ಸೃಷ್ಟಿಯಾಗುತ್ತಿದೆ. ಇದರಿಂದ ನಗರ ಸಭೆಯ ವಾರ್ಡ್‌ಗಳ ವಿವಿಧೆಡೆ ಕೃತಕ ನೆರೆಗಳು ಉಂಟಾಗುತ್ತಿತ್ತು. ಈ ಬಾರಿಯೂ ನಗರಸಭೆ ವ್ಯಾಪ್ತಿ ಯಲ್ಲಿ ಈ ಸಮಸ್ಯೆ ಪುನಾರಾವರ್ತನೆಯಾಗುವ ಮುನ್ಸೂಚನೆ ಮಳೆಗಾಲದ ಮುಂಚಿತವಾಗಿ ಸಿಕ್ಕಿತ್ತು. ಈ ಬಗ್ಗೆ ವಾರ್ಡ್‌ಗಳ ನಿವಾಸಿಗಳು ದೂರು ನೀಡಲು ಆರಂಭಿಸಿದ್ದರು. ಇದನ್ನು ಮನಗಂಡ ಉದಯವಾಣಿ ಸುದಿನ ವಾರ್ಡ್‌ ಸಮಸ್ಯೆಗಳ ಬಗ್ಗೆ ಸರಣಿ ವರದಿ ಪ್ರಕಟಿಸಿತ್ತು. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಟೆಂಡರ್‌ ಪ್ರಕ್ರಿಯೆ ನಡೆಸಿ ವಾರ್ಡ್‌ಗಳ ಚರಂಡಿ ಹೂಳೆತ್ತುವ ಕೆಲಸಕ್ಕೆ ಮುಂದಾಗಿದ್ದಾರೆ.

ಮಡುಗಟ್ಟಿದ ಕೊಳಚೆ ನೀರು
ಮಳೆ ಆರಂಭವಾಗುವ ಮೊದಲು ನಗರದ ಬಹುಪಾಲು ಚರಂಡಿಗಳು ಕೊಳಚೆ ನೀರಿನಿಂದ ಮಡುಗಟ್ಟಿದ್ದವು. ಸೊಳ್ಳೆಗಳ ಕಾಟಕ್ಕೆ ನಾಗರಿಕರು ಸಂಜೆಯಾದರೆ ಮನೆಯ ಬಾಗಿಲು, ಕಿಟಿಕಿಗಳನ್ನು ತೆರೆಯಲು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿತ್ತು. ಮಳೆ ನೀರಿಗೆ ಸರಾಗ ಹರಿವು ಕಲ್ಪಿಸಿಕೊಡುವ ಕಾರ್ಯದಿಂದ ಸಮಸ್ಯೆ ತಕ್ಕ ಮಟ್ಟಿಗೆ ಸರಿ ಹೋಗುವ ವಾತಾವರಣ ನಿರ್ಮಾಣವಾಗಲಿದೆ.

8 ಪ್ಯಾಕೇಜ್‌ ಮೂಲಕ ಹೂಳು ಎತ್ತುಗಡೆ
ನಗರಸಭೆ ವ್ಯಾಪ್ತಿಯಲ್ಲಿ ಚರಂಡಿಗಳ ಹೂಳೆತ್ತುವ ಕಾರ್ಯ ಆರಂಭಗೊಂಡಿದೆ. ಟೆಂಡರ್‌ ಪ್ರಕ್ರಿಯೆ ನಡೆಸಿ, ಆಯಾ ವಾರ್ಡ್‌ಗಳ ಸಮಸ್ಯೆ ಗಂಭೀರತೆ ಅರಿತು, 8 ಪ್ಯಾಕೇಜ್‌ಗಳ ಮೂಲಕ ಹೂಳು ತೆಗೆಯಲಾಗುತ್ತಿದೆ. ಮಳೆಗಾಲ ಪೂರ್ಣ ಪ್ರಮಾಣದಲ್ಲಿ ಆರಂಭವಾಗುವುದರೊಳಗೆ ಕೆಲಸ ಅಂತಿಮಗೊಳಿಸುತ್ತೇವೆ.
-ಮೋಹನ್‌ರಾಜ್‌, ಎಂಜಿನಿಯರ್‌, ನಗರಸಭೆ ಉಡುಪಿ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.