Shirva; ಮೂಡುಮಟ್ಟಾರು ಶ್ರೀ ಬಬ್ಬರ್ಯ ದೈವಸ್ಥಾನದಲ್ಲಿ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ


Team Udayavani, Apr 1, 2024, 5:20 PM IST

Shirva; ಮೂಡುಮಟ್ಟಾರು ಶ್ರೀ ಬಬ್ಬರ್ಯ ದೈವಸ್ಥಾನದಲ್ಲಿ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಶಿರ್ವ: ಐತಿಹಾಸಿಕ ಹಿನ್ನೆಲೆಯಿರುವ ಶಿರ್ವ ಮೂಡುಮಟ್ಟಾರು ಶ್ರೀ ಬಬ್ಬರ್ಯ ಪರಿವಾರ ಸಾನಿಧ್ಯಗಳ ನವೀಕೃತ ಶಿಲಾಮಯ ಗರ್ಭಗೃಹ ಸಮರ್ಪಣೆ, ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವವು ಎಲ್ಲೂರು ಸೀಮೆಯ ಆಗಮ ಪಂಡಿತ ವೇ|ಮೂ|ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ಮಾರ್ಗದರ್ಶನದಲ್ಲಿ ವೇ|ಮೂ| ಕುತ್ಯಾರು ಕೇಂಜ ಭಾರ್ಗವ ತಂತ್ರಿ ಮತ್ತು ವೇ|ಮೂ| ರಘುಪತಿ ಗುಂಡು ಭಟ್‌ ಅವರ ಪೌರೋಹಿತ್ಯದಲ್ಲಿ ಎ.1 ರಂದು ನಡೆಯಿತು.

ಮಾ. 31ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ಸೋಮವಾರ ಬೆಳಗ್ಗೆ ಪುಣ್ಯಾಹ, ಗಣಯಾಗ, ಶಿಖರ ಪ್ರತಿಷ್ಠೆ, 108 ಕಲಶಾರಾಧನೆ, ಅಧಿವಾಸ ಹೋಮ, ಶ್ರೀನಂದಿಗೋಣ, ಶ್ರೀ ಬಬ್ಬರ್ಯ, ಶ್ರೀ ರಕ್ತೇಶ್ವರಿ, ನೀಚ ದೈವಗಳ ಪುನಃಪ್ರತಿಷ್ಠೆ, ಜೀವಕಲಶಾಭಿಷೇಕ ನಡೆಯಿತು. 10-30ರ ಶುಭಲಗ್ನದಲ್ಲಿ ಬ್ರಹ್ಮಕಲಷಾಭಿಷೇಕ, ಮಹಾಪೂಜೆ, ಬಬ್ಬರ್ಯ ದೈವ ಸಂದರ್ಶನ, ಗರ್ಭಗೃಹ ಪ್ರವೇಶ, ಪಲ್ಲಪೂಜೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿ ಅನ್ನ ಪ್ರಸಾದ ಸ್ವೀಕರಿಸಿದರು. ಬಳಿಕ ಭಾಗವತ ಶ್ರೀ ರಾಘವೇಂದ್ರ ಆಚಾರ್ಯಜನ್ಸಾಲೆ ಅವರ ಸಾರಥ್ಯದಲ್ಲಿ ಗಾನ ನಾಟ್ಯ ವೈಭವ ನಡೆಯಿತು.

ರಾತ್ರಿ ನಂದಿಗೋಣ ಮತ್ತು ಬಬ್ಬರ್ಯ ದೈವದ ನೇಮ, ಮಂಗಳವಾರ ಬೆಳಗ್ಗೆ 5 ರಿಂದ ರಕ್ತೇಶ್ವರಿ ನೇಮ, ಮಾ.3 ರಂದು ಮಧ್ಯಾಹ್ನ ನೀಚ ದೈವದ ನೇಮ ನಡೆಯಲಿದೆ.

ದೈವಸ್ಥಾನದ ಆಡಳಿತ ಮೊಕ್ತೇಸರ ಭಗವಾನ್‌ದಾಸ್‌ ಶೆಟ್ಟಿ ಹಳೆಮನೆ, ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ, ಗೌರವಾಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ, ಆರ್‌.ಕೆ. ಸ್ಟೋನ್‌ ಕ್ರಶರ್ ಮಾಲಕ ದಿವಾಕರ ಶೆಟ್ಟಿ, ಆಡಳಿತ ಸಮಿತಿಯ ಗೌರವಾಧ್ಯಕ್ಷ ಶಂಕರ ಶೆಟ್ಟಿ ಧರ್ಮೆಟ್ಟು, ಅಧ್ಯಕ್ಷ ಜಗದೀಶ ಶೆಟ್ಟಿ ಮೂಡುಮನೆ, ಉಪಾಧ್ಯಕ್ಷ ಹರೀಶ್ಚಂದ್ರ ಶೆಟ್ಟಿ ಹಳೆಮನೆ , ಜೀಣೋದ್ಧಾರ ಸಮಿತಿಯ ಕಾರ್ಯದರ್ಶಿ ಹರೀಶ್‌ ಪೂಜಾರಿ ಕೊಲ್ಲಂಬೆಟ್ಟು, ಜತೆ ಕಾರ್ಯದರ್ಶಿ ರವಿ ಪೂಜಾರಿ ಮೂಡುಮಟ್ಟಾರು, ಕೋಶಾಧಿಕಾರಿ ಮಂಜುನಾಥ ಆಚಾರ್ಯ, ಜತೆ ಕೋಶಾಧಿಕಾರಿ ಸಂದೀಪ್‌ ಪೂಜಾರಿ ಕಾಪಿಕಾಡು, ಶಿರ್ವ ನಡಿಬೆಟ್ಟು ಸುರೆಂದ್ರ ಹೆಗ್ಡೆ ಮತ್ತು ರತ್ನವರ್ಮಹೆಗ್ಡೆ, ಮುಕ್ಕಾಲ್ದಿ ರಮೇಶ್‌ ಶೆಟ್ಟಿ, ಉದ್ಯಮಿ ಎಸ್‌.ಕೆ. ಸಾಲ್ಯಾನ್‌ ಬೆಳ್ಮಣ್‌, ರತನ್‌ ಶೆಟ್ಟಿ ಕಲ್ಲೊಟ್ಟು, ಮಟ್ಟಾರು ಪರಾಡಿ ದಿನರಾಜ್‌ ಹೆಗ್ಡೆ, ಪರಾಡಿ ಶೇಖರ ಹೆಗ್ಡೆ, ಪ್ರೇಮನಾಥ ಹೆಗ್ಡೆ, ವಿಠಲ ಪೂಜಾರಿ, ವಿಹಿಂಪ ಬಜರಂಗದಳ, ಮಾತ‌ೃಶಕ್ತಿ ಮಟ್ಟಾರು ಘಟಕದ ಸದಸ್ಯರು, ಶಿರ್ವ ಗ್ರಾಮದ ವಿವಿಧ ಸ್ವಸಹಾಯ ಗುಂಪುಗಳ ಸದಸ್ಯರು, ಜೀಣೋದ್ಧಾರ ಸಮಿತಿಯ ಮತ್ತು ಆಡಳಿತ ಮಂಡಳಿಯ ಸದಸ್ಯರು, ಸ್ಥಳವಂದಿಗರು, ಗ್ರಾಮಸ್ಥರು ಮತ್ತು ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.