ಬ್ರಹ್ಮಾವರ: ಕಳಪೆ ಗುಣಮಟ್ಟದ ಕಾಂಕ್ರೀಟ್ ರಸ್ತೆ
Team Udayavani, Jun 30, 2020, 5:24 AM IST

ಬ್ರಹ್ಮಾವರ: ಬ್ರಹ್ಮಾವರ ಪರಿಸರದಲ್ಲಿ ಹಲವು ರಸ್ತೆಗಳು ಕಾಂಕ್ರಿಟೀಕರಣಗೊಂಡಿದೆ. ಮುಖ್ಯವಾಗಿ ಲೋಕೋಪಯೋಗಿ ಇಲಾಖೆಯಡಿ, ಜಿ.ಪಂ. ಯೋಜನೆಯಡಿ ಹಾಗೂ ಇತರೆ ಯೋಜನೆಯಡಿ ಡಾಂಬರೀಕರಣ ರಸ್ತೆಗಳನ್ನು ನವೀಕರಿಸಿ ಕಾಂಕ್ರೀಟ್ ರಸ್ತೆಯನ್ನಾಗಿ ಮಾರ್ಪಾಡುಗೊಳಿಸಿ ಕಾಮಗಾರಿ ಮಾಡಲಾಗಿದೆ. ಆದರೆ ಹಲವು ಕಡೆ ಗುಣಮಟ್ಟದ ಕೊರತೆ ಎದ್ದು ಕಾಣುತ್ತಿದೆ.
ಕಳೆದ 2 ತಿಂಗಳ ಹಿಂದೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು ರೂ. 40 ಲಕ್ಷ ವೆಚ್ಚದಲ್ಲಿ ಚಾಂತಾರು ಅಗ್ರಹಾರ ರಸ್ತೆ ಕಾಂಕ್ರಿಟೀಕರಣಗೊಳಿಸಲಾಯಿತು. ಕೇವಲ 2 ತಿಂಗಳಲ್ಲಿ ರಸ್ತೆಯು ಸಂಪೂರ್ಣವಾಗಿ ಬಿರುಕುಬಿಟ್ಟು ಕಾಮಗಾರಿ ಗುಣಮಟ್ಟವನ್ನು ಎತ್ತಿ ತೋರಿಸುತ್ತಿದೆ. ಈಗ ಅದಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಲಾಗುತ್ತಿದೆ.
ಈ ಹಿಂದೆ ಕಾಂಕ್ರೀಟ್ ರಸ್ತೆಗಳನ್ನು ಕಬ್ಬಿಣದ ಸರಳುಗಳಿಂದ ನಿರ್ಮಾಣ ಮಾಡುತ್ತಿದ್ದು, ಹತ್ತಾರು ವರ್ಷ ಬಾಳಿಕೆ ಬಂದಿರುವ ಉದಾಹರಣೆಗಳಿದೆ. ಆದರೆ ಈಗ ಇಲಾಖೆ ಬೇರೆ ಬೇರೆ ನೆಪಗಳನ್ನೊಡ್ಡಿ ಈ ರೀತಿ ಕಳಪೆ ಕಾಮಗಾರಿಗೆ ಸಹಕಾರ ನೀಡುತ್ತಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಇಂತಹ ಕಾಮಗಾರಿಗಳಿಗೆ ಕಡಿವಾಣ ಹಾಕುವುದರ ಮೂಲಕ ಜನರ ತೆರಿಗೆ ಹಣ ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಬೇಕಾಗಿ ಹೇರೂರು ನಾಗರೀಕ ಹೋರಾಟ ಸಮಿತಿ ಆಗ್ರಹಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.