![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Feb 13, 2024, 3:16 PM IST
ಉಡುಪಿ: ಭಾರತ ಸರಕಾರದ ನಿವೃತ್ತ ನೌಕರರ ಬಹುದಿನದ ಬೇಡಿಕೆಯಾದ ಸೆಂಟ್ರಲ್ ಗವರ್ನ್ಮೆಂಟ್ ಹೆಲ್ತ್ ಸ್ಕೀಮ್ (CGHS) ವೆಲ್ನೆಸ್ ಸೆಂಟರ್ ಅನ್ನು ಉಡುಪಿಯಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಕೇಂದ್ರ ಕೃಷಿ(ರಾಜ್ಯ ಖಾತೆ) ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದು ಈ ಬಗ್ಗೆ ಮನವಿ ಮಾಡಿದ್ದರು. ಅದರಂತೆ ಇದೀಗ ಅನುಮೋದನೆ ದೊರೆತಿದೆ.
ಉಡುಪಿ ಹಾಗೂ ನೆರೆಯ ಜಿಲ್ಲೆಗಳಲ್ಲಿ 46ಕ್ಕೂ ಅಧಿಕ ಕೇಂದ್ರ ಸರಕಾರದ ಇಲಾಖೆಗಳ ಸುಮಾರು 4500 ಉದ್ಯೋಗಿಗಳಿದ್ದು 9000ಕ್ಕೂ ಅಧಿಕ ನಿವೃತ್ತ ಕೇಂದ್ರ ಸರಕಾರದ ಉದ್ಯೋಗಿಗಳಿದ್ದಾರೆ. ಉಡುಪಿಯಲ್ಲಿ ಈ ಕೇಂದ್ರ ಪ್ರಾರಂಭವಾಗುವುದರಿಂದ ಅವರು ನಿಯಮಾನುಸಾರ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ.
You seem to have an Ad Blocker on.
To continue reading, please turn it off or whitelist Udayavani.