ಜಿಲ್ಲೆಯ 4 ಕಡೆ ಶಿಶುಪಾಲನ ಕೇಂದ್ರ ; ಮಕ್ಕಳ ಪಾಲನೆಗೆ ಪೂರಕ ವಾತಾವರಣ


Team Udayavani, Oct 18, 2022, 8:43 AM IST

1

ಉಡುಪಿ: ರಾಜ್ಯ ಬಜೆಟ್‌ನಲ್ಲಿ ಘೋಷಣೆಯಾದ ಶಿಶುಪಾಲನ ಕೇಂದ್ರಗಳಲ್ಲಿ ನಾಲ್ಕು ಉಡುಪಿ ಜಿಲ್ಲೆಗೆ ಮಂಜೂರುಗೊಂಡಿದೆ. ಇವುಗಳಲ್ಲಿ ಕೆಲವು ಕಾರ್ಯಾರಂಭಗೊಂಡಿದ್ದು, ಇನ್ನು ಕೆಲವು ಕಾರ್ಯಚಟುವಟಿಕೆ ಮಾಡಬೇಕಿದೆ.

ಡೇ ಕೇರ್‌ ಮಾದರಿಯ ಶಿಶುಪಾಲನ ಕೇಂದ್ರಗಳು ಸಣ್ಣ ಮಾದರಿಯ ಅಂಗನವಾಡಿಯ ಸ್ವರೂಪ ಪಡೆಯುವ ಜತೆಗೆ ಮಕ್ಕಳ ಪಾಲನೆಗೆ ಪೂರಕ ವಾತಾವರಣ ರೂಪಿಸಲಾಗುತ್ತಿದೆ.

6 ತಿಂಗಳಿನಿಂದ 6 ವರ್ಷ ತುಂಬಿದ ಮಕ್ಕಳು ಈ ಶಿಶುಪಾಲನ ಕೇಂದ್ರದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಮಣಿಪಾಲದ ರಜತಾದ್ರಿ, ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ, ಕುಂದಾಪುರ, ಕಾರ್ಕಳಕ್ಕೆ ಮಂಜೂರುಗೊಂಡಿದೆ.

ಕಾರ್ಕಳದಲ್ಲಿ ಈಗಾಗಲೇ ಕಾರ್ಯಾರಂಭಗೊಂಡಿದೆ. ಉಡುಪಿ ಹಾಗೂ ಮಣಿಪಾಲದಲ್ಲಿ ಇತ್ತೀಚೆಗಷ್ಟೇ ಉದ್ಘಾ ಟನೆಗೊಂಡಿದ್ದು, ಕಾರ್ಯಚಟುವಟಿಕೆ ನಡೆಯುತ್ತಿದೆ. ಕುಂದಾಪುರದಲ್ಲಿ ಇನ್ನಷ್ಟೇ ಆರಂಭವಾಗಬೇಕಿದೆ.

ಯೋಜನೆ ಉದ್ದೇಶ

ದುಡಿಯುವ ವರ್ಗದ ಮಹಿಳೆಯರಿಗೆ ಅನುಕೂಲ ವಾಗುವ ದೃಷ್ಟಿಯಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಮಕ್ಕಳ ಆರೈಕೆಗೆಂದೇ ಕೆಲವು ಮಂದಿ ಮಹಿಳೆಯರು ಕೆಲಸ ಬಿಟ್ಟು ಮನೆಯಲ್ಲಿ ಆರೈಕೆ ಮಾಡುತ್ತಿದ್ದಾರೆ. ಅಲ್ಲದೆ ಖಾಸಗಿ ಡೇ ಕೇರ್‌ಗಳಲ್ಲಿಯೂ ದುಬಾರಿ ಹಣ ಪಡೆಯುವ ಕಾರಣ ಮಹಿಳೆಯರಿಗೆ ಕೆಲಸ ಬಿಡುವುದು ಅನಿವಾರ್ಯವಾಗುತ್ತಿದೆ. ಇದನ್ನು ತಪ್ಪಿಸಲು ಸರಕಾರ ಈ ಚಿಂತನೆ ನಡೆಸಿದೆ. ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ಮಕ್ಕಳನ್ನು ಶಿಶುಪಾಲನ ಕೇಂದ್ರದಲ್ಲಿ ಬಿಡಬಹುದು. ಇದಕ್ಕಾಗಿ ಪಾಲನ ಕೇಂದ್ರದಲ್ಲಿ ನುರಿತ ಸಿಬಂದಿಯಿದ್ದು ಸೂಕ್ತ ಆರೈಕೆ ಮಾಡುತ್ತಾರೆ.

ಸೂಕ್ತ ನಿರ್ವಹಣೆ

ಜಿಲ್ಲೆಯ 4 ಶಿಶುಪಾಲ ಕೇಂದ್ರದ ನಿರ್ವಹಣೆಗೆ 6 ತಿಂಗಳಿಗೆ 10.26 ಲ.ರೂ. ಹಣ ಬಿಡುಗಡೆಗೊಂಡಿದೆ. ಇದು ಸಿಬಂದಿ ವೇತನ, ಆಹಾರ ಸಹಿತ ಇತರ ಸಾಮಗ್ರಿ ಖರೀದಿ, ಆರೋಗ್ಯ ಸಂಬಂಧಿತ ವಸ್ತುಗಳ ಖರೀದಿಗೆ ಬಳಕೆ ಮಾಡಲಾಗುತ್ತದೆ. ಇಲ್ಲಿಗೆ ಕಡ್ಡಾಯ ಹಾಜರಾತಿ ಎಂಬುವುದಿಲ್ಲ. ತುರ್ತು ಸಂದರ್ಭಗಳಲ್ಲಿಯೂ ಮಕ್ಕಳನ್ನು ಇಲ್ಲಿ ಬಿಟ್ಟುಹೋಗಲು ಬೇಕಿರುವ ವ್ಯವಸ್ಥೆ ಕಲ್ಪಿಸಬಹುದಾಗಿದೆ.

ಹೇಗಿದೆ ಆರೈಕೆ ಕೇಂದ್ರ?

ಮಕ್ಕಳಿಗೆ ಯೋಗ್ಯವಾಗುವ ರೀತಿಯಲ್ಲಿ ಎಲ್ಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮಕ್ಕಳಿಗೆ ಕುಳಿತುಕೊಳ್ಳುವ ವ್ಯವಸ್ಥೆ, ಪೌಷ್ಟಿಕಾಂಶಯುಕ್ತ ಆಹಾರಗಳು, ಕೇಂದ್ರದ ನಾಲ್ಕೂ ಗೋಡೆಗಳಲ್ಲಿ ಪೈಂಟಿಂಗ್‌, ವಿವಿಧ ಪ್ರಕಾರದ ಆಟಿಕೆಗಳು, ಮಹಿಳೆಯರಿಗೆ ಬೆಡ್‌ ವ್ಯವಸ್ಥೆ, ಮಕ್ಕಳಿಗೆ ತೊಟ್ಟಿಲು ವ್ಯವಸ್ಥೆ ಕಲ್ಪಿಸಲಾಗಿದೆ.

ಪೂರಕ ವ್ಯವಸ್ಥೆ: ಬಜೆಟ್‌ನಲ್ಲಿ ಘೋಷಣೆಯಾದಂತೆ ಉಡುಪಿ ಜಿಲ್ಲೆಗೆ ಶಿಶುಪಾಲನ ಕೇಂದ್ರ ಮಂಜೂರುಗೊಂಡಿದೆ. ಈಗಾಗಲೇ ಕೆಲವು ಮಕ್ಕಳು ಇದರ ಸೇವೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಬೇಕಿರುವಂತಹ ಎಲ್ಲ ರೀತಿಯ ಪೂರಕ ವ್ಯವಸ್ಥೆಗಳನ್ನು ಪಾಲನ ಕೇಂದ್ರದಲ್ಲಿ ಕಲ್ಪಿಸಲಾಗಿದೆ. –ವೀಣಾ ವಿವೇಕಾನಂದ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.