ಬೈಕ್‌ ಏರಿ ದಂಪತಿಯ ಪರಿಸರ ಜಾಗೃತಿ ಸವಾರಿ

ಸಾಫ್ಟ್‌ವೇರ್ ಎಂಜಿನಿಯರ್‌ಗಳಿಬ್ಬರಿಂದ 16,074 ಕಿ.ಮೀ. ಪಯಣ

Team Udayavani, Oct 11, 2022, 2:55 PM IST

14

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ವಾತಾವರಣ ವಿಚಿತ್ರವಾಗಿ ಬದಲಾಗುತ್ತಿದೆ. ಒಮ್ಮೆ ಬರ, ಮತ್ತೂಮ್ಮೆ ಅತೀವೃಷ್ಟಿ. ಹೀಗಾದರೆ ಮುಂದಿನ ಕತೆ ಹೇಗೆ ಎಂಬ ಆತಂಕ ಬಹುತೇಕರಲ್ಲಿ ಕಾಡುತ್ತಿರುವುದು ಸತ್ಯ. ಇದಕ್ಕೆ ಪ್ರಮುಖ ಕಾರಣ ಪರಿಸರದ ಅಸಮತೋಲನ. ಈ ಬಗ್ಗೆ ಪರಿಸರ ಕಾಳಜಿಯುಳ್ಳ ದಂಪತಿ ಸ್ವಚ್ಛ ಅಂದೋಲನ, ಪರಿಸರ ಪರಿಸರ ಉಳಿವಿಗಾಗಿ ದೇಶಾದ್ಯಂತ ಬೈಕ್‌ ಸವಾರಿ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಮೂಲತಃ ಕಾರ್ಕಳದ ರವಿಕಿರಣ್‌ ರಾವ್‌ ಹಾಗೂ ಭದ್ರಾವತಿಯ ಅರ್ಚನಾ ಅರ್‌. ರಾವ್‌ ಮೈಸೂರಿನಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಚ್ಛತ ಅಭಿಯಾನ ಅವರಿಬ್ಬರ ಕನಸು. ಅದಕ್ಕೆಂದೇ ಮೈಸೂರಿನಲ್ಲಿ ಬೈಕ್‌ ಸವಾರಿ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಉದ್ಯೋಗದ ಜತೆ ವರ್ಷಕ್ಕೆ ಇಂತಿಷ್ಟು ರಜೆ ಪಡೆದು ಪರಿಸರ ಜಾಗೃತಿ ಮೂಡಿಸುತ್ತಿರುವ ಅವರು 85 ದಿನಗಳ ಪ್ರವಾಸದಲ್ಲಿ 16,074 ಕಿ.ಮೀ. ದೂರ ಕ್ರಮಿಸಿದ್ದಾರೆ.

ಒಂದು ಸುತ್ತಿನ ಪ್ರವಾಸ ಮುಗಿಸಿ ಅವರು ಕಾರ್ಕಳದ ಕಲ್ಲೊಟ್ಟೆಯ ತಮ್ಮ ಮನೆಗೆ ಅಗಮಿಸಿದ್ದರು. ಗೋವಾ ಮುಂಬಯಿ ಗುಜರಾತ್‌ ರಾಜಸ್ಥಾನ ಭಾಗದಲ್ಲಿ ಸಂಚಾರ ನಡೆಸಿ ಅಭಿಯಾನದ ಸ್ಟಿಕ್ಕರ್‌ಗಳನ್ನು ವಿತರಿಸಿದ್ದಾರೆ. ರವಿಕಿರಣ್‌ ಅವರು ಕಾರ್ಕಳದ ಸ್ವಚ್ಛ ಕಾರ್ಕಳ ಬ್ರಿಗೇಡ್‌ನ‌ ಸದಸ್ಯ ಕೂಡ ಆಗಿದ್ದಾರೆ.

ಪರಿಸರವನ್ನು ನಾಳೆಗಾಗಿ ಉಳಿಸಬೇಕು, ಪ್ರಜ್ಞಾವಂತ ನಾಗರಿಕರಾದ ನಾವೆಲ್ಲ ಅದನ್ನು ಮನಗಾಣಬೇಕು. ಪರಿಸರವಿದ್ದರೆ ನಮ್ಮ ಬದುಕು. ಪ್ರಾಣಿ ಜೀವ ಸಂಕುಲ ನದಿ ಮೂಲಗಳನ್ನು ಸಂರಕ್ಷಿಸಬೇಕು, ಪ್ಲಾಸ್ಟಿಕ್‌ನಿಂದ ಮಣ್ಣನ್ನು ಕಾಪಾಡಬೇಕು, ಪರಿಸರ ಜಾಗೃತಿಯೇ ನಮ್ಮ ಗುರಿಯಾಗಿದೆ.

ದೇಶದ ಹದಿನೈದು ಗಡಿಗಳಲ್ಲಿ ಭಾರತೀಯ ಯೋಧರು ಅಭಿಯಾನಕ್ಕೆ ಪ್ರೋತ್ಸಾಹ ನೀಡಿದ್ದಾರೆ. ದೇಶದ ವಿವಿಧ ಹಳ್ಳಿಗಳಲ್ಲಿ ಸಂಚರಿಸಿ ಒಟ್ಟು 18 ರಾಜ್ಯಗಳಲ್ಲಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಭಿಯಾನವನ್ನು ಯಶಸ್ವಿಗೊಳಿಸಿದ್ದಾರೆ. ಉತ್ತರ ದಕ್ಷಿಣ ಪೂರ್ಣ ಪಶ್ಚಿಮ ರಾಜ್ಯಗಳಲ್ಲಿ 85 ದಿನಗಳ ಅಭಿಯಾನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕಾಶ್ಮೀರ ಲೇಕ್‌, ಲಡಾಕ್‌, ಡಾರ್ಜಿಲಿಂಗ್‌, ಪಟ್ನಾ, ಬಿಹಾರ್‌, ಪಶ್ಚಿಮ ಬಂಗಾಲ, ಒರಿಸ್ಸಾ ಅಸ್ಸಾಂ, ಆಂಧ್ರ ಪ್ರದೇಶ, ತೆಲಂಗಾಣ ತಮಿಳುನಾಡು ಕನ್ಯಾಕುಮಾರಿ ತಲುಪಿದ್ದಾರೆ. ಸೆ. 11ರಂದು ಕೇರಳದ ಮೂಲಕ ಮೈಸೂರಿಗೆ ಮರಳಿ ಸೆ 16ರಂದು ಕಾರ್ಕಳ ತಲುಪಿದ್ದಾರೆ.

ಈಶಾನ್ಯದಲ್ಲಿ ಪ್ರವಾಹದಿಂದ ಹಿನ್ನಡೆ

ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದರಿಂದಾಗಿ ಆ ಭಾಗದಲ್ಲಿ ಪ್ರವಾಸಕ್ಕೆ ತೊಡಕಾಯಿತು. ಹವಾಮಾನವೂ ಅನುಕೂಲಕರವಾಗಿರಲಿಲ್ಲ. ಹಾಗಾಗಿ ಈಶಾನ್ಯ ರಾಜ್ಯಗಳಲ್ಲಿ ಗುರಿ ತಲುಪಲು ಸಾಧ್ಯವಾಗಿಲ್ಲ. ನಮ್ಮ ಮುಂದಿನ ಅಭಿಯಾನ ಸಾಧ್ಯವಾದರೆ ಈಶಾನ್ಯ ರಾಜ್ಯಗಳಿಗೆ ಮೊದಲ ಪ್ರಾತಿನಿಧ್ಯ ನೀಡುತ್ತೇವೆ ಎನ್ನುವುದು ಅವರ ಮಾತು.

ದೇಶದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಿದ್ದೆವು. ಮನೆಯಲ್ಲಿ, ಕುಟುಂಬದಲ್ಲಿ ದೊರೆತ ಸಹಕಾರವೇ ಮತ್ತಷ್ಟೂ ಪ್ರೇರಣೆ ನೀಡಿತು.   -ರವಿಕಿರಣ್‌, ಅರ್ಚನಾ ರಾವ್‌

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.