ಪ್ರವಾಸಿ ತಾಣವಾಗಿ ಗುರುತಿಸಲ್ಪಡಲಿ: ಅದಮಾರು ಶ್ರೀ

ದಂಡತೀರ್ಥ ಮಠದಲ್ಲಿ ಶ್ರೀ ಮಧ್ವಾಚಾರ್ಯರ ಬಿಂಬ ಪ್ರತಿಷ್ಠೆ

Team Udayavani, Jan 6, 2022, 5:20 AM IST

ಪ್ರವಾಸಿ ತಾಣವಾಗಿ ಗುರುತಿಸಲ್ಪಡಲಿ: ಅದಮಾರು ಶ್ರೀ

ಕಾಪು: ಶ್ರೀ ಮಧ್ವಾಚಾರ್ಯ ಅವರು ಗುರುದಕ್ಷಿಣೆ ರೂಪದಲ್ಲಿ ದಂಡವೂರಿ ಸೃಷ್ಟಿಸಿದ, ಉಡುಪಿ ಪರ್ಯಾಯ ಪೀಠಾರೋಹಣ ಗೈಯ್ಯಲಿರುವ ಯತಿವರೇಣ್ಯರು ಪರ್ಯಾಯ ಪೂರ್ವಭಾವಿ ತೀರ್ಥ ಸ್ನಾನಗೈಯ್ಯುವ ದಂಡತೀರ್ಥ ಮಠದ ಶ್ರೀ ರಾಮಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಿರ್ಮಿಸಲಾದ ಮಧ್ವ ಮಂಟಪದಲ್ಲಿ ಬುಧವಾರ ಶ್ರೀ ಮಧ್ವಾಚಾರ್ಯರ ಬಿಂಬ ಪ್ರತಿಷ್ಠಾಪನ ಕಾರ್ಯಕ್ರಮ ನೆರವೇರಿತು.

ಭಾವೀ ಪರ್ಯಾಯ ಪೀಠಾಧಿಪತಿ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾ ಸಾಗರತೀರ್ಥ ಶ್ರೀಪಾದರು ಮತ್ತು ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಬಿಂಬ ಪ್ರತಿಷ್ಠಾಪೂರ್ವಕ ಧಾರ್ಮಿಕ ಕಾರ್ಯಕ್ರಮ ಗಳನ್ನು ನೆರವೇರಿಸಿದರು.

ಆ ಬಳಿಕ ಕಲಶಾಭಿಷೇಕ, ಮಹಾ ಪೂಜೆ ಮತ್ತು ಮಹಾ ಅನ್ನಸಂತರ್ಪಣೆ ಸಂಪನ್ನಗೊಂಡಿತು. ಅನುಗ್ರಹ ಸಂದೇಶ ನೀಡಿದ ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಆಚಾರ್ಯ ಮಧ್ವರು ದಂಡದ ಮೂಲಕ ಸೃಷ್ಟಿಸಿದ ದಂಡತೀರ್ಥ ಕೆರೆಯನ್ನು ಸ್ಮರಿಸಿಕೊಂಡರೆ ದೇಶವನ್ನು ಕಾಡುವ ಜಲ ಮೂಲದ ಕೊರತೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ. ಆಚಾರ್ಯ ಮಧ್ವರ ಬಿಂಬ ಪ್ರತಿಷ್ಠಾಪನೆಯ ಮೂಲಕ ದಂಡತೀರ್ಥ ಮಠವು ಧಾರ್ಮಿಕ ಮತ್ತು ಆಧ್ಯಾತ್ಮಿಕತೆ ಪಸರಿರುವ ತಾಣವಾಗಿ, ಪ್ರವಾಸಿ ತಾಣವಾಗಿ ರೂಪುಗೊಳ್ಳುತ್ತಿದೆ. ಮಧ್ವರ ಜೀವನಾದರ್ಶ ಮತ್ತು ತಣ್ತೀ ಸಂದೇಶಗಳ ಪ್ರಚಾರಕ್ಕೆ ಸೂಕ್ತ ಕ್ಷೇತ್ರವಾಗಿ ಇದು ಮಾರ್ಪಾಡಾಗಲಿ ಎಂದು ಹೇಳಿದರು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಪೈಲಟ್‌ ತರಬೇತಿ ಕೇಂದ್ರ: ಪ್ರಹ್ಲಾದ್ ಜೋಷಿ

ದಂಡತೀರ್ಥ ಪ್ರತಿಷ್ಠಾನದ ಅಧ್ಯಕ್ಷ ಸೀತಾರಾಮ ಭಟ್‌ ದಂಡತೀರ್ಥ, ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಉದ್ಯಮಿ ಮನೋಹರ್‌ ಶೆಟ್ಟಿ ಕಾಪು, ರತ್ನಾಕರ ಶೆಟ್ಟಿ ನಡಿಕೆರೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

ganja

Udupi: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಬಂಧನ

1

Kelarkalabettu: ವ್ಯಕ್ತಿ ನಾಪತ್ತೆಯಾಗಿ 22 ವರ್ಷದ ಬಳಿಕ ದೂರು ದಾಖಲು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.