Udupi: ಘನ ಸರಕು ವಾಹನ ಸಂಚಾರ: ಯಡಾಡಿ ಸೇತುವೆಗೆ ಅಪಾಯ

ಲೋಕೋಪಯೋಗಿ ಇಲಾಖೆಯಿಂದ ಪೊಲೀಸ್‌, ಆರ್‌ಟಿಒಗೆ ದೂರು ನೀಡಿದರೂ ಸ್ಪಂದನೆಯಿಲ್ಲ

Team Udayavani, Jul 29, 2024, 1:00 PM IST

Screenshot (11)

ಉಡುಪಿ: ರಸ್ತೆಯ ನಿಗದಿತ ಸಾಮರ್ಥ್ಯ ಮೀರಿದ ಘನವಾಹನಗಳ ಸಂಚಾರದಿಂದಾಗಿ ಯಡ್ತಾಡಿ ಸಮೀಪದ ಕಿರು ಸೇತುವೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಕಂಡು ಬಂದಿದೆ. 20 ಮೆಟ್ರಿಕ್‌ ಟನ್‌ಗಿಂತಲೂ ಅಧಿಕ ಭಾರ ಇರುವ ಸರಕು ವಾಹನಗಳು ಹುಣ್ಸಮಕ್ಕಿ, ಬಿದ್ಕಲ್‌ ಕಟ್ಟೆ, ಸಾೖಬರಕಟ್ಟೆ, ಯಡ್ತಾಡಿ, ಬಾರಕೂರು ಮಾರ್ಗದಲ್ಲಿ ಸಂಚರಿಸುತ್ತಿವೆ. ಇದರಿಂದ ಈ ರಸ್ತೆಯ ಮತ್ತು ಅದರಲ್ಲಿರುವ ಸೇತುವೆಗಳು ಶಿಥಿಲಗೊಳ್ಳುತ್ತಿವೆ ಎಂದು ಆಪಾದಿಸಲಾಗಿದೆ. ಹೆದ್ದಾರಿಯಲ್ಲಿ ಸಾಗಬಹುದಾದ ಲಾರಿಗಳು ಒಳಮಾರ್ಗವನ್ನು ಬಳಸುತ್ತಿರುವ ಬಗ್ಗೆ ಖುದ್ದು ಲೋಕೋಪಯೋಗಿ ಇಲಾಖೆಯೇ ಪೊಲೀಸ್‌ ಹಾಗೂ ಆರ್‌ಟಿಒಗೆ ದೂರು ಸಲ್ಲಿಸಿದೆ.

ರಾಜ್ಯ ಹೆದ್ದಾರಿಯಲ್ಲಿ ಭಾರೀ ಗಾತ್ರದ ಅಥವಾ ಸರಕು ಸಾಗಾಟದ ವಾಹನಗಳು ಸಂಚಾರ ಮಾಡುವುದರಿಂದ ರಸ್ತೆಗೆ ವರ್ಷವೂ ತೇಪೆ ಹಚ್ಚಲೇ ಬೇಕಾದಷ್ಟು ಗುಂಡಿಗಳು ಬೀಳುತ್ತಿವೆ. ಸ್ಥಳೀಯರ ವಾಹನ ಸಂಚಾರಕ್ಕೂ ಸಮಸ್ಯೆಯಾಗುತ್ತದೆ. ದ್ವಿಪಥವಾಗಿದ್ದರಿಂದ ಭಾರೀ ಸರಕು ತುಂಬಿದ ವಾಹನಗಳು ಬರುವುದರಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನಿಯಮ ಪಾಲನೆ ಕಟ್ಟುನಿಟ್ಟಾಗಿ ಆಗಬೇಕು ಎಂಬುದು ಸ್ಥಳೀಯರ ಆಗ್ರಹ.

ಅಪಾಯದ ಎಚ್ಚರಿಕೆ
ಬಾರಕೂರು ಹೊಳೆಗೆ ನಿರ್ಮಿಸಿರುವ ಸೇತುವೆ, ಯಡ್ತಾಡಿ ಸಮೀಪದ ಕಿರು ಸೇತುವೆ ಹೀಗೆ ಈ ಮಾರ್ಗದಲ್ಲಿಸಣ್ಣಪುಟ್ಟ ಮೂರ್‍ನಾಲ್ಕು ಸೇತುವೆ ಸಿಗುತ್ತದೆ. ಬಾರಕೂರು ಸೇತುವೆ ಹೊರತುಪಡಿಸಿ ಉಳಿದೆಲ್ಲವೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ಅಷ್ಟೊಂದು ಸುರಕ್ಷಿತವಲ್ಲ. ಇದನ್ನು ಉಲ್ಲೇಖೀಸಿ ಪಿಡ ಬ್ಲ್ಯುಡಿ ಇಲಾಖೆ ಪೊಲೀಸ್‌ ಮತ್ತು ಆರ್‌ ಟಿಒಗೆ ಮನವಿ ಸಲ್ಲಿಸಿದೆ.

ಬೋರ್ಡ್‌ ಅಳವಡಿಸಿದ್ದು ಮಾತ್ರ!
ಸೇತುಗಳಿಗೂ ಅಪಾಯ ಎದುರಾಗಬಹುದು ಎಂಬ ನೆಲೆಯಲ್ಲಿ ಇಲಾಖೆಯು ಯಡ್ತಾಡಿ ಸಮೀಪದಲ್ಲಿ ಸರಕು ಸಹಿತ 20 ಮೆಟ್ರಿಕ್‌ ಟನ್‌ಕಿಂತ ಅಧಿಕ ಭಾರವಿರುವ ವಾಹನಗಳಿಗೆ ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಬೋರ್ಡ್‌ ಹಾಕಿದ್ದರೂ ಘನ ವಾಹನ ಸಂಚಾರ ನಿರಂತರವಾಗಿದೆ.

ಇಲಾಖೆಗಳ ನಡುವಿನ ಸಮಸ್ಯೆ
20 ಮೆಟ್ರಿಕ್‌ ಟನ್‌ಗಿಂತ ಅಧಿಕ ಭಾರವಿರುವ ವಾಹನ ಸಂಚಾರ ನಿಷೇಧಿಸಿ ನಾಮಫ‌ಲಕ ಅಳವಡಿಸಿದ್ದು ಲೋಕೋಪಯೋಗಿ ಇಲಾಖೆ. ಆದರೆ ವಾಹನ ಟ್ರಾಫಿಕ್‌ ಕಂಟ್ರೋಲ್‌ ಅದರ ವ್ಯಾಪ್ತಿಗೆ ಬರುವುದಿಲ್ಲ. ರಸ್ತೆ ನಿರ್ಮಾಣ, ಗುಂಡಿಗಳಿಗೆ ತೇಪೆ ಹಚ್ಚುವ ಕೆಲಸ ಪಿಡಬ್ಲ್ಯುಡಿಯದ್ದು. ನಿಷೇಧಿತ ವಾಹನಗಳ ಸಂಚಾರ ತಡೆಯುವುದು ಪೊಲೀಸ್‌ ಹಾಗೂ ಆರ್‌ ಟಿಒ ಕೆಲಸ. ಈ ಇಲಾಖೆಗಳು ಸಮನ್ವಯದಿಂದ ಸಮಸ್ಯೆ ಬಗೆಹರಿಸಬೇಕು ಎಂದು ಸ್ಥಳೀಯರಾದ ಪ್ರಗತಿಪರ ಕೃಷಿಕ ಸತೀಶ್‌ ಕುಮಾರ್‌ ಶೆಟ್ಟಿ ಯಡ್ತಾಡಿ ಆಗ್ರಹಿಸಿದ್ದಾರೆ.

ದೂರು ಬಂದಿದೆ
ಸರಕು ಸಹಿತ 20 ಮೆಟ್ರಿಕ್‌ ಟನ್‌ಕಿಂತ ಅಧಿಕ ಭಾರವಿರುವ ವಾಹನಗಳು ಈ ರಸ್ತೆಯಲ್ಲಿ ಓಡಾಟ ಮಾಡುವುದರಿಂದ ಭವಿಷ್ಯದಲ್ಲಿ ಯಡ್ತಾಡಿ ಸಮೀಪದ ಸೇತುವೆಗೆ ಅಪಾಯ ಸಂಭವಿಸುವ ಸಾಧ್ಯತೆಯಿದೆ. ಈ ಬಗ್ಗೆ ಸ್ಥಳೀಯರಿಂದಲೂ ದೂರುಗಳು ಬಂದಿದೆ. ಆರ್‌ಟಿಒ ಮತ್ತು ಪೊಲೀಸ್‌ ಇಲಾಖೆಗೂ ಮಾಹಿತಿ ನೀಡಿದ್ದೇವೆ.
-ಮಂಜುನಾಥ್‌ ಎಸ್‌.,
ಎಂಜಿನಿಯರ್‌,ಲೋಕೋಪಯೋಗಿ ಇಲಾಖೆ

ಟೋಲ್‌ ತಪ್ಪಿಸಲು ಒಳಮಾರ್ಗ ಬಳಕೆ?
ಈ ನಡುವೆ, ಕೆಲವು ಘನ ವಾಹ ನ ಗಳು ಟೋಲ್‌ ತಪ್ಪಿಸಲೆಂದೇ ಒಳ ಮಾರ್ಗಬಳಸುತ್ತಿವೆ ಎಂಬ ಆಪಾದನೆ ಇದೆ. ಹೆದ್ದಾರಿಯಲ್ಲಿ ಟೋಲ್‌ ಪ್ಲಾಜಾ ಇರುವುದು ಕುಂದಾಪುರ-ಬ್ರಹ್ಮಾವರ ನಡುವಿನ ಸಾಸ್ತಾನದಲ್ಲಿ. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ಸರಕು ಸಾಗಾಟದ ವಾಹನಗಳು ಬಸ್ರೂರು ಮೂರ್‌ಕೈ ಅಲ್ಲಿ ಎಡ ತಿರುವು ಪಡೆದು ಹುಣ್ಸಮಕ್ಕಿ ಬಿದ್ಕಲ್‌ಕಟ್ಟೆ, ಸಾೖಬರ್‌ಕಟ್ಟೆ, ಯಡ್ತಾಡಿ, ಬಾರಕೂರು ಮಾರ್ಗವಾಗಿ ಬ್ರಹ್ಮಾವರದಲ್ಲಿ ರಾ.ಹೆದ್ದಾರಿ ಸೇರುತ್ತಿವೆ. ಇನ್ನು ಕೆಲವು ಕುಂದಾಪುರದಿಂದ ಕೋಟದವರೆಗೂ ರಾ.ಹೆದ್ದಾರಿಯಲ್ಲೇ ಬಂದು ಕೋಟ ವಿವೇಕ ಹೈಸ್ಕೂಲ್‌ ಎದುರು ಎಡಕ್ಕೆ ತಿರುವು ಪಡೆದು ಸಾೖಬರ್‌ ಕಟ್ಟೆ, ಯಡ್ತಾಡಿ, ಬಾರಕೂರು ಮಾರ್ಗವಾಗಿ ಬ್ರಹ್ಮಾವರದಲ್ಲಿ ರಾ.ಹೆದ್ದಾರಿಸೇರುತ್ತವೆ. ಈ ಮೂಲಕ ಟೋಲ್‌ ತಪ್ಪಿಸುತ್ತವೆ. ಇನ್ನು ಬ್ರಹ್ಮಾವರದಿಂದ ನೇರವಾಗಿ ಬಾರಕೂರು, ಯಡ್ತಾಡಿ, ಸಾೖಬರಕಟ್ಟೆ ಮಾರ್ಗವಾಗಿ ಸಿದ್ದಾಪುರ, ಬಾಳೆಬರೆ ಘಾಟಿ ಮೂಲಕ ಶಿವಮೊಗ್ಗ ಪ್ರದೇಶಿಸುವ ಭಾರೀ ಗಾತ್ರದ ವಾಹನಗಳಿಂದಲೂ ಸಮಸ್ಯೆಯಾಗುತ್ತಿವೆ.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.