Malpe: ಆದಿಉಡುಪಿ ಮಾರುಕಟ್ಟೆಯಲ್ಲಿ ತರಕಾರಿ ಜತೆ ಡೆಂಗ್ಯೂ ಉಚಿತ!

ಕೊಳೆತು ಗಬ್ಬುನಾತ ಬೀರುತ್ತಿರುವ ತ್ಯಾಜ್ಯಗಳು; ಸಾಂಕ್ರಾಮಿಕ ರೋಗಗಳ ತಾಣ

Team Udayavani, Aug 11, 2024, 4:47 PM IST

Malpe: ಆದಿಉಡುಪಿ ಮಾರುಕಟ್ಟೆಯಲ್ಲಿ ತರಕಾರಿ ಜತೆ ಡೆಂಗ್ಯೂ ಉಚಿತ!

ಮಲ್ಪೆ: ಎತ್ತ ನೋಡಿದರೂ ಕೆಸರು, ಕೊಳೆತ ತರಕಾರಿಗಳ ತ್ಯಾಜ್ಯಗಳ ದುರ್ವಾಸನೆ, ಎಲ್ಲೆಂದರಲ್ಲಿ ಕಸದ ರಾಶಿ, ಅಂಗಳದಲ್ಲಿ ಕಾಲಿಟ್ಟರೆ ಪಿಚಕ್‌ ಎನ್ನುವಂತೆ ಕಾಲಿಗೆ ಮೆತ್ತಿಕೊಳ್ಳುವ ರಾಡಿ ಮಣ್ಣು, ಸರಿಯಾದ ನಿರ್ವಹಣೆ ಇಲ್ಲದೆ ಚರಂಡಿಯಲ್ಲಿ ಬೇಕಾ ಬಿಟ್ಟು ಹರಿಯುತ್ತಿರುವ ಕೊಳಚೆ ನೀರು. ಹೀಗೆ ಕಾಲಿಡಲೂ ಒಂದು ಕ್ಷಣ ಯೋಚನೆ ಮಾಡುವಂತಹ ಜಾಗಕ್ಕೆ ರೈತರು ತಾವು ಬೆಳೆದ ಫಸಲುಗಳನ್ನು ಮಾರಾಟ ಮಾಡಲು ತರುತ್ತಾರೆ. ಸಾರ್ವಜನಿಕರು ಸೊಪ್ಪು ತರಕಾರಿಗಳ ಖರೀದಿಗೆ ಇಲ್ಲಿಗೆ ತರುತ್ತಾರೆ. ಇದು ಜನಜನಿತ ಆದಿಉಡುಪಿ ಸಂತೆ ಮಾರುಕಟ್ಟೆಯ ಮಳೆಗಾಲದ ಚಿತ್ರಣ.

ಇದು ಒಂದು ದಿನದ ಕತೆಯಲ್ಲ. ಮಳೆ ಸುರಿದಾಗಲೆಲ್ಲ ವ್ಯಾಪಾರಿಗಳು ವಾರದ ಮಾರುಕಟ್ಟೆಯಲ್ಲಿ ತಿಪ್ಪೆಯಾಗುವಂತ ರಸ್ತೆಯಲ್ಲಿ ಕುಳಿತು ವ್ಯಾಪಾರ ಮಾಡುತ್ತಾರೆ. ಬೇರೆ ದಾರಿ ಕಾಣದ ಸಾರ್ವಜನಿಕರು ದುರ್ನಾತದ ಮಧ್ಯೆಯೇ ತರಕಾರಿ ಕೊಳ್ಳಬೇಕಾದ ಸ್ಥಿತಿ ಉಂಟಾಗಿದೆ. ನಿಜಕ್ಕೂ ಇದು ತರಕಾರಿ ಮಾರುಕಟ್ಟೆಯೇ ಎಂಬ ಆನುಮಾನ ಮೊದಲ ಬಾರಿಗೆ ಕಾಲಿಡುವವರಿಗೆ ಕಾಡುತ್ತದೆ. ಪ್ರತಿ ವಾರ ಇಲ್ಲಿ ಮಾರಾಟಕ್ಕೆ ತೆರಿಗೆ ಕಟ್ಟುತ್ತೇವೆ ಆದರೆ ಸಂಬಂಧಪಟ್ಟ ಆಡಳಿತ ಸೂಕ್ತ ಸೌಲಭ್ಯ ಮಾತ್ರ ನೀಡುತ್ತಿಲ್ಲ ಎಂದು ವ್ಯಾಪಾರಿಗಳು ಅರೋಪಿಸಿದ್ದಾರೆ.

ಸಂತೆಗೆ ಬಂದರೆ ಡೆಂಗ್ಯೂ ಉಚಿತ

ಮಳೆಗಾಲದ ಸಮಯದಲ್ಲಿ ತ್ಯಾಜ್ಯಗಳ ಸಹಿತ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಈ ತ್ಯಾಜ್ಯಗಳು ವಿಲೇವಾರಿ ಆಗದೇ ನೀರಿನಲ್ಲಿ ಕೊಳೆತು ಮಣ್ಣಿನಲ್ಲಿ ಸೇರಿ ದುರ್ವಾಸನೆ ಬೀರುವುದಲ್ಲದೆ, ನೊಣ, ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಮಳೆಗಾಲದ ಸಮಯದಲ್ಲಿ ಸೊಳ್ಳೆ ಕಡಿತದೊಂದಿಗೆ ವ್ಯಾಪಾರಿಗಳು, ಗ್ರಾಹಕರು ಕೆಸರು ಗುಂಡಿಯಲ್ಲಿಯೇ ವ್ಯಾಪಾರ ವ್ಯವಹಾರ ಮಾಡುವಂತಾಗಿದೆ. ಇಲ್ಲಿ ಕಾಲಿಟ್ಟವರಿಗೆ ಯಾವುದಾದರೊಂದು ರೋಗ ಖಚಿತ ಎಂಬಂತಾಗಿದೆ. ಇತ್ತೀಚೆಗೆ ಇಲ್ಲಿನ ಸಂತೆ ಮಾರುಕಟ್ಟೆಯಲ್ಲಿ ಖರೀದಿಗೆ ಬಂದವರಿಗೆ ಡೆಂಗ್ಯೂ ಕಾಣಿಸಿಕೊಂಡು ಹಲವರು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ನಡೆದಿದೆ. ಇದೊಂದು ಗಂಭೀರವಾದ ವಿಚಾರವಾಗಿದ್ದು, ಸಾರ್ವಜನಿಕರು, ರೈತರು, ವ್ಯಾಪಾರಸ್ಥರ ಬಗ್ಗೆ ಆಡಳಿತ ವರ್ಗಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂಬುದನ್ನು ಸಾಕ್ಷೀಕರಿಸುತ್ತದೆ. ಇತ್ತೀಚೆಗೆ ಎಲ್ಲೆಡೆ ಹರಡುತ್ತಿರುವ ಡೆಂಗ್ಯು ಬಗ್ಗೆ ಜಿಲ್ಲಾಡಳಿತ ಎಷ್ಟರ ಮಟ್ಟಿಗೆ ಕ್ರಮ ಕೈಗೊಳ್ಳುತ್ತಿದೆ ಎಂಬುದನ್ನು ಈ ಮಾರುಕಟ್ಟೆ ಪ್ರದೇಶ ಸಾಬೀತು ಪಡಿಸುತ್ತದೆ ಎನ್ನಲಾಗುತ್ತಿದೆ.

ಆಟಕ್ಕುಂಟು ಲೆಕ್ಕಕ್ಕಿಲ್ಲ

ಸಂತೆಯ ಪಕ್ಕದಲ್ಲೆ ಶೌಚಾಲಯ ವ್ಯವಸ್ಥೆ ಇದ್ದರೂ ಸ್ವತ್ಛತೆ ಜತೆಗೆ ಮೂಲಭೂತ ವ್ಯವಸ್ಥೆ ಇಲ್ಲದೇ ಗಬ್ಬೆದ್ದು ನಾರುತ್ತಿದೆ. ಇಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲದೆ ಪಾಳು ಬಿದ್ದಂತಿದೆ. ಹಾಗಾಗಿ ಇಲ್ಲಿಗೆ ಬರುವ ವ್ಯಾಪಾರಿಗಳು ಸೇರಿದಂತೆ ಗ್ರಾಹಕರು ಎಲ್ಲೆಂದರಲ್ಲಿ ಬಹಿರ್ದೆಸೆ ತೀರಿಸುವುದು ಕಂಡು ಬರುತ್ತದೆ.

ಸೂಕ್ತ ವ್ಯವಸ್ಥೆ ಅಗತ್ಯ

ಇಲ್ಲಿನ ಸಂತೆ ಮಾರುಕಟ್ಟೆ ಉಚಿತ ದುರ್ವಾಸನೆ, ಉಚಿತ ಸೊಳ್ಳೆ ಕಡಿತ, ಉಚಿತ ಖಾಯಿಲೆಗಳ ಕೇಂದ್ರವಾಗಿ ಪರಿಣಮಿಸಿದರೂ ಪ್ರತೀ ವಾರ ಬಾಡಿಗೆ ವಸೂಲಿ ಮಾಡುವ ಇಲಾಖೆಗೆ ಇದೆಲ್ಲಾ ತಿಳಿಯದಿರುವುದು ದುರಂತ. ಸಾಂಕ್ರಮಿಕ ರೋಗ ಭೀತಿಯಿಂದಾಗಿ ಇತ್ತೀಚೆಗೆ ಜನರು ಸಾಮಗ್ರಿ ಖರೀದಿಸಲು ಬರಲು ಹೆದರುತ್ತಾರೆ. ಜನರ ಆರೋಗ್ಯ ದೃಷ್ಟಿಯಿಂದಾದರೂ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು.
-ಬಸವರಾಜ್‌, ಹಣ್ಣಿನ ವ್ಯಾಪಾರಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.