ಕೋವಿಡ್‌ ಚಿಕಿತ್ಸೆಯಲ್ಲಿ ವೈದ್ಯರ ಶ್ರಮ ಶ್ಲಾಘನೀಯ: ಡಿಸಿ

ಉಡುಪಿ: ಐಎಂಎ ವತಿಯಿಂದ ವೈದ್ಯರ ದಿನಾಚರಣೆ

Team Udayavani, Jul 2, 2020, 6:09 AM IST

ಕೋವಿಡ್‌ ಚಿಕಿತ್ಸೆಯಲ್ಲಿ ವೈದ್ಯರ ಶ್ರಮ ಶ್ಲಾಘನೀಯ: ಡಿಸಿ

ಉಡುಪಿ: ರಾಜ್ಯದ ವಿವಿಧ ಕೋವಿಡ್‌ ಆಸ್ಪತ್ರೆಗಳಿಗೆ ಹೋಲಿಸಿದರೆ ಉಡುಪಿ ಕೋವಿಡ್‌ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆದವರಲ್ಲಿ ಯಾರೊಬ್ಬರೂ ಮೃತಪಟ್ಟಿಲ್ಲ. ಇದರ ಹಿಂದೆ ಇಲ್ಲಿನ ವೈದ್ಯರ ಪರಿಶ್ರಮವಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದರು.

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆ ವತಿಯಿಂದ ಭಾರತರತ್ನ ಡಾ| ಬಿ.ಸಿ. ರಾಯ್‌ ಸ್ಮರಣಾರ್ಥ ಬುಧವಾರ ಉಡುಪಿ ಐಎಂಎ ಭವನದಲ್ಲಿ “ವೈದ್ಯರ ದಿನಾ ಚರಣೆ’ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವೈದ್ಯರನ್ನು ಸಮ್ಮಾ ನಿಸಿ ಮಾತನಾಡಿದರು.

ಕೋವಿಡ್‌- 19 ವಿರುದ್ಧ ಹೋರಾಟದಲ್ಲಿ “ವೈದ್ಯೋ ನಾರಾಯಣೋ ಹರಿಃ’ ಎನ್ನುವ ಮಾತು ಎಲ್ಲರ ಬಾಯಲ್ಲಿ ಕೇಳಿ ಬರುತ್ತಿದೆ. ಕೊರೊನಾ ಲಕ್ಷಣಗಳು ಕಂಡು ಬಂದರೆ ಕೂಡಲೇ ಆಸ್ಪತ್ರೆಯನ್ನು ಸಂಪರ್ಕಿಸಿ. ಆ ಮೂಲಕ ಸಮುದಾಯಕ್ಕೆ ಕೋವಿಡ್‌- 19 ಹರಡುವುದನ್ನು ತಪ್ಪಿಸಬಹುದಾಗಿದೆ ಎಂದರು.

ಯಾವಾಗ ಕೋವಿಡ್‌- 19 ವಿರುದ್ಧದ ಹೋರಾಟ ಮುಕ್ತಾಯವಾಗು ತ್ತದೆಯೋ ಅಂದು ನಾವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸ ಬಹುದು. ಅಲ್ಲಿಯವರೆಗೆ ಸುರಕ್ಷಿತ ಹಾಗೂ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಉತ್ತಮ ಎಂದು ತಿಳಿಸಿದರು.

ವೈದ್ಯರಿಗೆ ಸಮ್ಮಾನ
ಉಡುಪಿಯ ಶಸ್ತ್ರಚಿಕಿತ್ಸಾ ತಜ್ಞ ಡಾ| ವಾಸುದೇವ ಸೋಮಯಾಜಿ, ಕಟಪಾಡಿಯ ಡಾ| ಶ್ರೀನಿವಾಸ ರಾವ್‌ ಕೊರಡ್ಕಲ್‌ ಅವರನ್ನು ಸಮ್ಮಾನಿಸಲಾಯಿತು. ಐಎಂಎ ರಾಜ್ಯ ಘಟಕದಿಂದ ಕೊಡಲ್ಪಡುವ ಡಾ| ಬಿ.ಸಿ.ರಾಯ್‌ ಪ್ರಶಸ್ತಿ ಪುರಸ್ಕೃತ ಡಾ| ಪ್ರಭಾಕರ ಶೆಟ್ಟಿ ಕಾಪುಹಾಗೂ ಹಿರಿಯ ವೈದ್ಯ ಡಾ| ರವೀಂದ್ರನಾಥ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಕೋವಿಡ್‌- 19ರ ವಿರುದ್ಧ ಹೋರಾಡುತ್ತಿರುವ 16 ಮಂದಿ ಐಎಂಎ ಸದಸ್ಯ ವೈದ್ಯರನ್ನು ಗುರುತಿಸಿ ಗೌರವಿಸಿದರು.

ಅಧ್ಯಕ್ಷತೆಯನ್ನು ಐಎಂಎ ಘಟಕದ ಅಧ್ಯಕ್ಷ ಡಾ| ಉಮೇಶ್‌ ಪ್ರಭು ವಹಿಸಿದ್ದರು. ಕಾರ್ಯದರ್ಶಿ ಡಾ| ಪ್ರಕಾಶ್‌ ಭಟ್‌ ಕಾರ್ಯಕ್ರಮ ನಿರ್ವಹಿಸಿದರು. ಡಾ| ವಿನಾಯಕ ಶೆಣೈ ಪ್ರಸ್ತಾವನೆಗೈದರು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.