Doddanagudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಆ.28ರಂದು ಏಕಕಾಲ ಶ್ರೀಚಕ್ರ ಮಂಡಲ ಪೂಜೆ
Team Udayavani, Aug 26, 2024, 6:05 PM IST
ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಆ.28(ಬುಧವಾರ)ರಂದು ಏಕಕಾಲ ಶ್ರೀಚಕ್ರ ಮಂಡಲ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ವೇದಮೂರ್ತಿ ವಿಕ್ಯಾತ್ ಭಟ್ ಅವರ ನೇತೃತ್ವದಲ್ಲಿ ಚೆನ್ನೈನ ವಾಸುದೇವನ್ ಮತ್ತು ಮನೆಯವರ ಸೇವಾ ರೂಪದಲ್ಲಿ ನಡೆಯಲಿದೆ.
ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿದ್ದು ಬೆಳಗ್ಗೆ 8 ಗಂಟೆಗೆ ದೇವತಾ ಪ್ರಾರ್ಥನೆ, ಅರಣಿಮಥನ, ಆದ್ಯ ಗಣಪತಿಯಾಗ, ಶ್ರೀ ಚಕ್ರ ಪೂಜಾ ಮಂಟಪದಲ್ಲಿ ಬಿಂದು ಪ್ರಕ್ರಿಯೆ ನಂತರ ಶ್ರೀ ಚಕ್ರ ಮಂಡಲ ರಚನೆ ಆರಂಭಗೊಳ್ಳಲಿದೆ.
ಸಂಜೆ 5:30 ರಿಂದ ಶ್ರೀ ಚಕ್ರ ಮಂಡಲ ಪೂಜೆ ಆರಂಭಗೊಳ್ಳಲಿದ್ದು ಶ್ರೀ ಚಕ್ರ ಪೀಠ ಸುರಪೂಜಿತೆಯಾದ ರಾಜರಾಜೇಶ್ವರಿಯನ್ನು ವಿಧ ವಿಧದ ಕುಸುಮಗಳಿಂದ ಅರ್ಜಿಸಿ, ವಿಶೇಷ ನಾಮಾವಳಿಗಳಿಂದ ಪೂಜಿಸಿ, ಬಗೆ ಬಗೆಯ ನೈವೇದ್ಯವನ್ನಿತ್ತು, ಅಷ್ಟಾವಧಾನದಿಂದ ಸಂಪ್ರೀತಗೊಳಿಸಿ ವಿಶೇಷ ಅನುಗ್ರಹವನ್ನು ಯಾಚಿಸುವ ಈ ಪೂಜೆ ಬಹು ವಿಶಿಷ್ಟವೂ ಅಪರೂಪವು ಆಗಿದೆ. ಬ್ರಾಹ್ಮಣ ಸುವಾಸಿನಿ ಆರಾಧನೆ, ಕನ್ನಿಕರಾಧನೆ, ದಂಪತಿ ಪೂಜೆ ಮತ್ತು ಆಚಾರ್ಯ ಪೂಜೆ ನೆರವೇರಲಿವೆ.
ಮೇರುಶ್ರೀಚಕ್ರವನ್ನು ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಶ್ರೀ ಚಕ್ರ ಮಂಡಲ ಪೂಜೆಗೆ ವಿಶೇಷವಾದ ಮಂಟಪ ರಚಿಸಲಾಗಿದ್ದು ಭಕ್ತರುಗಳಿಗೆ ಈ ಪೂಜೆಯನ್ನು ವೀಕ್ಷಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಹಾಗೂ ಕ್ಷೇತ್ರದಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ವಿಶೇಷ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ.
ದೃಢ ಕಲಶ ಮಹೋತ್ಸವ
ಶ್ರೀ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿ ನೂತನ ಆರೂಢದಲ್ಲಿ ಪ್ರತಿಷ್ಠಾಪನೆಯಾಗಿರುವ ಶ್ರೀ ಪ್ರಸನ್ನ ಕ್ಷಿಯಾ ಸನ್ನಿಧಾನದ ದೃಢ ಕಲಶ ಮಹೋತ್ಸವವೂ ಕೂಡ ಬುಧವಾರವೇ ನೆರವೇರಲಿದ್ದು ಆ ಪ್ರಯುಕ್ತ ಪ್ರಸನ್ನಕ್ಷಿಯ ಸನ್ನಿಧಾನದಲ್ಲಿ ನವಕ ಕಲಶ ಪ್ರಧಾನ ಹೋಮ ಕಲಶಾ ಭಿಷೇಕ , ಶ್ರೀ ದುರ್ಗಾ ದುರ್ಗಾ ಹೋಮ, ಪ್ರಸನ್ನ ಪೂಜೆಗಳು ಗಣೇಶ್ ಸರಳಾಯ ಇವರ ನೇತೃತ್ವದಲ್ಲಿ ನೆರವೇರಲಿವೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.