![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 18, 2020, 11:29 AM IST
ಉಡುಪಿ: ಮೀನುಗಾರಿಕೆಗೆ ಹೊರಟಿದ್ದ ಬೋಟ್ ನಲ್ಲಿದ್ದ ಮೀನುಗಾರನೊಬ್ಬ ಜ್ವರದಿಂದ ಸಾವನ್ನಪ್ಪಿದ್ದು, ಆತನ ಜೊತೆಗಿದ್ದವರಿಗೂ ಜ್ವರ, ಕೆಮ್ಮಿನಂತಹ ಲಕ್ಷಣಗಳು ಕಂಡು ಬಂದಿದೆ. ಕೋವಿಡ್-19 ಸೋಂಕು ಇರಬಹುದು, ಆತನ ದೇಹದೊಂದಿಗೆ ಬೋಟ್ ಬಂದರಿಗೆ ಮರಳುತ್ತಿದೆ ಎಂಬ ಸುದ್ದಿಯೊಂದು ಉಡುಪಿಯ ಮಲ್ಪೆಯಲ್ಲಿ ಹರಿದಾಡುತ್ತಿದ್ದು, ಪರಿಸರದ ಜನರು ಭಯಭೀತರಾಗಿದ್ದಾರೆ.
ಆದರೆ ಇದು ಸುಳ್ಳು ಸುದ್ದಿ. ಯಾರಿಗೂ ಕೋವಿಡ್-19 ಸೋಂಕು ಬಂದಿಲ್ಲ. ಯಾರೂ ಇಲ್ಲಿ ಮೃತಪಟ್ಟಿಲ್ಲ ಎಂದು ಮಲ್ಪೆ ಮೀನುಗಾರಿಕಾ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ ಅವರು ಸ್ಪಷ್ಟಪಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಮೀನುಗಾರಿಕೆಗೆ ಹೋದ ಒಬ್ಬರಿಗೆ ಕೈಗೆ ಗಾಯವಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅದರ ನೋವಿಗೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು ಅಷ್ಟೇ. ಆದರೆ ಯಾವುದೇ ಕೋವಿಡ್-19 ಸೋಂಕಿನ ಲಕ್ಷಣ ಕಂಡು ಬಂದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಕೆಲವು ಕಿಡಿಗೇಡಿಗಳು ಮತ್ಸೋದ್ಯಮಕ್ಕೆ, ಮೀನುಗಾರರ ಜೀವನಕ್ಕೆ ಹಾನಿ ಮಾಡುವ ಉದ್ದೇಶದಿಂದ ಇಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿಯ ಬಿಡುತ್ತಿದ್ದಾರೆ. ಇದರಿಂದ ಒಂದು ಸಮಾಜವೇ ನಲುಗುತ್ತಿದೆ ಎಂದು ಕೃಷ್ಣ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಇಂತಹ ಸುಳ್ಳು ಸುದ್ದಿಗಳನ್ನು ಹರಿಯ ಬಿಡುತ್ತಿರುವವರ ಈ ಹಿಂದೆ ಒಮ್ಮೆ ಸೈಬರ್ ಅಪರಾಧ ದಳಕ್ಕೆ ದೂರು ನೀಡಿದ್ದೆವು. ನಂತರ ಸ್ವಲ್ಪ ಸಮಯ ತಣ್ಣಗಾಗಿತ್ತು. ಈಗ ಮತ್ತೆ ಅಪಾಯಕಾರಿಯಾಗಿದೆ. ಇದರ ಬಗ್ಗೆ ನಾವು ಸಮಿತಿಯಲ್ಲಿ ಚರ್ಚೆ ನಡೆಸಿ ಸಂಬಂಧಪಟ್ಟವರಿಗೆ ದೂರು ನೀಡುತ್ತೇವೆ ಎಂದು ಕೃಷ್ಣ ಸುವರ್ಣ ಅವರು ‘ಉದಯವಾಣಿ’ಗೆ ಹೇಳಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.