Udupi: ಸವಾಲುಗಳ ನಡುವೆ ಡ್ರ್ಯಾಗನ್‌ ಫ್ರೂಟ್ ಬೆಳೆಗೆ ರೈತರ ಆಸಕ್ತಿ

ಕಾರ್ಕಳ ಭಾಗದಲ್ಲಿ 6 ಹೆಕ್ಟೇರ್‌, ಕುಂದಾಪುರ, ಉಡುಪಿಯಲ್ಲಿ ತಲಾ 2 ಹೆಕ್ಟೇರ್‌ ಪ್ರದೇಶದಲ್ಲಿ  ಕೃಷಿ

Team Udayavani, Aug 23, 2024, 4:32 PM IST

Udupi: ಸವಾಲುಗಳ ನಡುವೆ ಡ್ರ್ಯಾಗನ್‌ ಫ್ರೂಟ್ ಬೆಳೆಗೆ ರೈತರ ಆಸಕ್ತಿ

ಉಡುಪಿ: ಜಿಲ್ಲೆಯಲ್ಲಿ ಹಲವು ಸವಾಲುಗಳ ನಡುವೆಯೂ ಡ್ರ್ಯಾಗನ್‌ ಫ್ರೂಟ್ ಅಲ್ಲಲ್ಲಿ ಯಶಸ್ವಿಯಾಗುತ್ತಿದ್ದರೆ, ಇನ್ನೊಂದೆಡೆ ಇಳುವರಿ ಕುಸಿತವು ಬೆಳೆಗಾರರಲ್ಲಿ ತಲೆಬಿಸಿಗೆ ಕಾರಣವಾಗುತ್ತಿದೆ.

ಭತ್ತ, ಅಡಕೆ, ಬಾಳೆ, ತೆಂಗು, ಕಾಳು ಮೆಣಸು ಕರಾವಳಿಯಲ್ಲಿ ಸಾಮಾನ್ಯ ಕೃಷಿಯಾಗಿದ್ದು, ಕಳೆದ ಐದಾರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬೆರಳಣಿಕೆಯಷ್ಟು ಕೃಷಿಕರು ಡ್ರ್ಯಾಗನ್‌ ಫ್ರೂಟ್ ಬೆಳೆಯಲು ಸಾಹಸ ಆರಂಭಿಸಿದ್ದರು. ಹವಾಮಾನ, ನೀರು ಮೊದಲಾದ ದೃಷ್ಟಿಯಿಂದ ಬಯಲು ಸೀಮೆ ಪ್ರದೇಶಗಳಲ್ಲಿ ಮಾತ್ರ ಡ್ರ್ಯಾಗನ್‌ ಫ್ರೂಟ್ ಸಮರ್ಪಕವಾಗಿ ಬೆಳೆಯುತ್ತದೆ. ಕರಾವಳಿ ಹವಾಮಾನವು ಈ ಬೆಳೆಗೆ ತದ್ವಿರುದ್ಧವಾಗಿದ್ದರೂ ಇಲ್ಲಿನ ಕೆಲವು ಕೃಷಿಕರು ಲಾಭದಾಯಕ ದೃಷ್ಟಿಕೋನವಲ್ಲದೇ ಪ್ರಯೋಗಾತ್ಮಕವಾಗಿ ಬೆಳೆದು ಒಳ್ಳೆಯ ಇಳುವರಿ ಪಡೆದಿದ್ದಾರೆ.

ಆರಂಭದಲ್ಲಿ ಕಾರ್ಕಳ ಭಾಗದಲ್ಲಿ ಕೆಲವು ಕೃಷಿಕರು ಡ್ರ್ಯಾಗನ್‌ ಫ್ರೂಟ್ ಬೆಳೆಯಲು ಆರಂಭಿಸಿದ್ದು ಮೂರು ವರ್ಷಗಳ ಹಿಂದೆ ಜಿಲ್ಲೆಯಲ್ಲಿ 3 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿತ್ತು. ಇದೀಗ ಕಾರ್ಕಳ ಭಾಗದಲ್ಲಿ 6 ಹೆಕ್ಟೇರ್‌, ಕುಂದಾಪುರ ಹಾಗೂ ಉಡುಪಿಯಲ್ಲಿ ತಲಾ 2 ಹೆಕ್ಟೇರ್‌ ಪ್ರದೇಶದಲ್ಲಿ ಈ ಬೆಳೆ ಬೆಳೆಯಲಾಗುತ್ತಿದೆ. ಕೆಲವರು ಲಾಭ ಕಂಡುಕೊಂಡರೆ, ಇನ್ನು ಕೆಲವರು ನಷ್ಟ ಎದುರಿಸುತ್ತಿದ್ದಾರೆ.

ಮಾರುಕಟ್ಟೆ ದರ ಏರಿಳಿತ
ಜುಲೈ ಸೀಸನ್‌ ತಿಂಗಳಾಗಿದ್ದು, ಹೊರ ಜಿಲ್ಲೆ ಸಹಿತ ಸ್ಥಳೀಯವಾಗಿಯೂ ಹಣ್ಣು ಪೂರೈಕೆ ಉತ್ತಮವಾಗಿರುತ್ತದೆ, 150-200 ರೂ. ಇತ್ತು. ಇದೀಗ ಪೂರೈಕೆ ಕಡಿಮೆಯಾಗಿದ್ದು, ಕೇರಳ, ಮಹಾರಾಷ್ಟ್ರ, ಬೆಂಗಳೂರು ಮಾರುಕಟ್ಟೆಗಳಿಂದ ಪೂರೈಕೆಯಾಗುತ್ತಿದೆ. ಸಾಗಾಟ ವೆಚ್ಚ ಸೇರಿರುವುದರಿಂದ ಬೆಲೆ ಹೆಚ್ಚಿರುತ್ತದೆ ಕೆಜಿಗೆ 250-280 ದರವಿದೆ ಎಂದು ಮಣಿಪಾಲದ ಹಣ್ಣು ತರಕಾರಿ ವ್ಯಾಪಾರಿ ರಮೇಶ್‌ ಹೇಳುತ್ತಾರೆ.

ಕೃಷಿ ವಿಜ್ಞಾನಿಗಳು ಏನು ಹೇಳುತ್ತಾರೆ?
ನೀರಿನಾಂಶ ಕಡಿಮೆ ಇರುವ ಪ್ರದೇಶದಲ್ಲಿ ಡ್ರ್ಯಾಗನ್‌ ಫ್ರೂಟ್ ಉತ್ತಮ ಇಳುವರಿ ಕೊಡುತ್ತದೆ. ಇದು ಜೂನ್‌-ಜುಲೈ ತಿಂಗಳಿನಲ್ಲಿ ಹಣ್ಣು ಬರುವ ಬೆಳೆ. ಕರಾವಳಿ ಭಾಗದಲ್ಲಿ ಮಳೆ ಹೆಚ್ಚಿರುವುದರಿಂದ ಬೆಳೆಗೆ ಸಮಸ್ಯೆಗಳಾಗುವ ಸಾಧ್ಯತೆ ಹೆಚ್ಚು. ಫ‌ಂಗಸ್‌ ಕಾಟ, ನೀರಿನಾಂಶ ಹೆಚ್ಚಳದಿಂದ ಗುಣಮಟ್ಟ ಕಳೆದುಕೊಳ್ಳುವ ಸಾಧ್ಯತೆಯು ಇದೆ. ಇದಕ್ಕೆ ಕೆಲವು ಪರಿಹಾರಗಳು ಲಭ್ಯವಿದೆ. ನೈಸರ್ಗಿಕವಾಗಿ ವಾತಾವರಣ ಅನುಕೂಲವಾಗಿದ್ದರೆ ಅಧಿಕ ವೆಚ್ಚದ ಅಗತ್ಯವಿಲ್ಲ. ಉತ್ಪಾದನೆ ವೆಚ್ಚ ಅಧಿಕವಾಗಿ ಬೆಳೆಗಾರರಿಗೆ ಆರ್ಥಿಕ ನಷ್ಟವು ಆಗಬಹುದು. ಯೂಟ್ಯೂಬ್‌ ವೀಡಿಯೋಗಳನ್ನು ನೋಡಿಕೊಂಡು ಡ್ರ್ಯಾಗನ್‌ ಫ್ರೂಟ್ ಬೆಳೆಯುವ ಮುನ್ನ ಅಗತ್ಯ ಮಾಹಿತಿಗಳನ್ನು ತಜ್ಞರು, ಬೆಳೆಗಾರರಿಂದ ಪಡೆಯಬೇಕು. ಮಾರುಕಟ್ಟೆ ಮೌಲ್ಯವನ್ನು ತಿಳಿಯಬೇಕು. ಈಗಾಗಲೇ ಬೆಳೆ ಬೆಳೆದ ಕೃಷಿಕರೊಂದಿಗೆ ಮುಕ್ತವಾಗಿ ಚರ್ಚಿಸಿ ಮುಂದುವರಿಯಬೇಕು ಎಂದು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರದ ವಿಜ್ಞಾನಿ ಡಾ| ಚೈತನ್ಯ ಎಚ್‌. ಎಸ್‌. ತಿಳಿಸಿದ್ದಾರೆ.

ಮಾಹಿತಿ ತಿಳಿದು ಬೆಳೆಯಬೇಕು
ನಾಲ್ಕು ವರ್ಷಗಳಿಂದ ಅರ್ಧ ಎಕರೆ ಜಾಗದಲ್ಲಿ ಡ್ರ್ಯಾಗನ್‌ ಫ್ರೂಟ್ ಬೆಳೆಯನ್ನು ಬೆಳೆಯುತ್ತಿದ್ದೇವೆ. ಈ ಬೆಳೆಯ ನಿರ್ವಹಣೆ ಬಾಯಿ ಮಾತಿಗೆ ಹೇಳುವಷ್ಟು ಸುಲಭ ಇರುವುದಿಲ್ಲ. ಹೆಚ್ಚು ಮಳೆ ಸುರಿದಾಗ ಬೆಳೆಗೆ ತೊಂದರೆಯಾಗುತ್ತದೆ. ಹಣ್ಣುಗಳು ಕೊಳೆತು ನಷ್ಟವು ಸಂಭವಿಸುತ್ತದೆ. ಕೀಟ ಬಾಧೆಯೂ ಇರುತ್ತದೆ. ಹೆಚ್ಚು ಸೂಕ್ಷ್ಮ ಮುತುವರ್ಜಿಯಿಂದ ಎಲ್ಲ ಮಾಹಿತಿ ತಿಳಿದು ಬೆಳೆಯಬೇಕು. ಅಂಗಡಿ, ಮಾರುಕಟ್ಟೆಗೆ ಮಾರಾಟ ಮಾಡುವುದಿಲ್ಲ. ಮನೆಯಲ್ಲಿಯೇ ಗ್ರಾಹಕರಿಗೆ ಕೆಜಿಗೆ 250-300 ರೂ.ಗೆ ಮಾರಾಟ ಮಾಡುತ್ತೇವೆ.
-ಇಗ್ನೇಶಿಯಸ್‌ ಡಿ’ಸೋಜಾ, ಪಾಂಬೂರು

ಯಶಸ್ವಿಯಾಗುವ ವಿಶ್ವಾಸ
ಒಂದು ಎಕ್ರೆಯಲ್ಲಿ ಡ್ರ್ಯಾಗನ್‌ ಫ್ರೂಟ್ ಬೆಳೆಯನ್ನು ಬೆಳೆದಿದ್ದು, ಈಗಾಗಲೇ 1 ವರ್ಷ 10 ತಿಂಗಳು ಕಳೆದಿದೆ. ಆರಂಭದಲ್ಲಿ ಮಳೆಯಿಂದಾಗಿ 1.50 ಕ್ವಿಂಟಲ್‌ ಕಾಯಿ ಕೊಳೆತು ಹೋಗಿತ್ತು. ಇದೀಗ ಮತ್ತೆ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದೇವೆ. ಕೃಷಿ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆಯಿಂದಲೂ ಮಾಹಿತಿಗಳನ್ನು ಪಡೆದಿದ್ದೇನೆ. ಕರಾವಳಿ ಹವಾಮಾನವು ಈ ಬೆಳೆಗೆ ಕೆಲವು ಸಮಸ್ಯೆಗಳು ತಂದೊಡ್ಡುತ್ತವೆ. ಆದರೆ ನಿರ್ವಹಣೆ ಬಗ್ಗೆ ಹೆಚ್ಚಿನ ಒತ್ತು ನೀಡುತ್ತ, ಪೂರಕ ಕ್ರಮಗಳನ್ನು ಕೈಗೊಂಡಲ್ಲಿ ಯಶಸ್ವಿಯಾಗುವ ವಿಶ್ವಾಸವಿದೆ. ಸ್ಥಳೀಯವಾಗಿ ಒಂದಿಷ್ಟು ಪ್ರಮಾಣದ ಬೆಳೆಯನ್ನು ಕೆಜಿಗೆ 150 ರೂ.ನಂತೆ ಮಾರಾಟ ಮಾಡಿದ್ದೇನೆ.
– ವಾಸು ಜೆ. ಕೆ., ಜಡ್ಕಲ್

ಆರೋಗ್ಯ ದೃಷ್ಟಿಯಿಂದ ಉತ್ತಮ
ಡ್ರ್ಯಾಗನ್‌ ಫ್ರೂಟ್ ಬಾಯಿಗೆ ರುಚಿಕರವಲ್ಲದಿದ್ದರೂ ಆರೋಗ್ಯ ದೃಷ್ಟಿಯಿಂದ ಉತ್ತಮ ಬೇಡಿಕೆ ಹೊಂದಿದೆ ಎಂಬುದು ಬೆಳೆಗಾರರ ಅಭಿಪ್ರಾಯ. ಕಡಿಮೆ ಸಕ್ಕರೆ ಅಂಶವನ್ನು ಹೊಂದಿದ್ದು ಕ್ಯಾಲ್ಸಿಯಂ, ಕಬ್ಬಿನಾಂಶ ಹಾಗೂ ವಿಟಮಿನ್‌ ಅಂಶಗಳನ್ನು ಹೊಂದಿರುವ ಈ ಹಣ್ಣು ಹೆಚ್ಚಾಗಿ ಜ್ಯೂಸ್‌ ಮಾಡಿ ಉಪಯೋಗಿಸಲಾಗುತ್ತದೆ.

 

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Sakhi

Udupi: ಮಗನಿಂದ ಕಿರುಕುಳ: ತಾಯಿ ಸಖಿ ಸೆಂಟರ್‌ಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.