ಅವಿಭಜಿತ ದ.ಕ. ಜಿಲ್ಲೆಯ 195 ಗ್ರಾ.ಪಂ. ಗಳಿಂದ ವರದಿ ಸಲ್ಲಿಕೆ

ಜನತಾ ಜೀವವೈವಿಧ್ಯ ನಿರ್ವಹಣೆ ಸಮಿತಿ ರಚನೆ

Team Udayavani, Jul 28, 2020, 11:30 AM IST

ಅವಿಭಜಿತ ದ.ಕ. ಜಿಲ್ಲೆಯ 195 ಗ್ರಾ.ಪಂ. ಗಳಿಂದ ವರದಿ ಸಲ್ಲಿಕೆ

ಸಾಂದರ್ಭಿಕ ಚಿತ್ರ

ಉಡುಪಿ: ಅವಿಭಜಿತ ದ.ಕ. ಜಿಲ್ಲೆ ಗ್ರಾಮೀಣ ಭಾಗದ ಜೀವ ವೈವಿಧ್ಯಗಳ ರಕ್ಷಣೆ ಹಾಗೂ ನಿರ್ವಹಣೆಗೆ ದಿಟ್ಟ ಹೆಜ್ಜೆ ಇಟ್ಟಿದ್ದು, ಅವಳಿ ಜಿಲ್ಲೆಯ 380 ಗ್ರಾ.ಪಂ.ಗಳಲ್ಲಿ ಜೀವವೈವಿಧ್ಯ ನಿರ್ವಹಣೆ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಅವಳಿ ಜಿಲ್ಲೆಯ 195 ಗ್ರಾಪಂಗಳು ಸರ್ವೇ ಮುಗಿಸಿ ವರದಿಯನ್ನು ಸಲ್ಲಿಸಿವೆ.
ಗ್ರಾಮೀಣ ಭಾಗದಲ್ಲಿನ ಜನತಾ ಜೀವ ವೈವಿಧ್ಯವನ್ನು ಕಾಪಾಡಿ ಅದನ್ನು ಭವಿಷ್ಯದ ದೃಷ್ಟಿಯಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ 150 ಗ್ರಾ.ಪಂ., ತಾ.ಪಂ.ಗಳು, ಜಿ.ಪಂ. ಹಾಗೂ ದ.ಕ. ಜಿಲ್ಲೆಯ 229 ಗ್ರಾ.ಪಂ., ತಾ.ಪಂ.ಗಳು. ಜಿ.ಪಂ.ನಲ್ಲಿ ಜೀವವೈವಿಧ್ಯ ನಿರ್ವಹಣೆ ಸಮಿತಿ ರಚನೆಯಾಗಿದೆ.

ಉಡುಪಿ ಜಿಲ್ಲೆಯ 150 ಗ್ರಾ.ಪಂ. ವ್ಯಾಪ್ತಿಯಲ್ಲಿ 35 ಗ್ರಾ.ಪಂ.ಗಳು ಹಾಗೂ ದ.ಕ. ಜಿಲ್ಲೆಯ 229 ಗ್ರಾ.ಪಂ. ವ್ಯಾಪ್ತಿಯಲ್ಲಿ 160 ಗ್ರಾ.ಪಂ. ಜನತಾ ಜೀವವೈವಿಧ್ಯ ವರದಿಯನ್ನು ಸಲ್ಲಿಸಿದೆ. ಬಾಕಿ ಉಳಿದ ಗ್ರಾಪಂಗಳು ಇನ್ನಷ್ಟೇ ವರದಿಯನ್ನು ಸಲ್ಲಿಸಬೇಕಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ವರದಿ ಸಲ್ಲಿಕೆ ಅವಧಿ ಮುಂದೆ ಹೋಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಸರ್ವೇಗೆ ಅನುದಾನ
ಪ್ರಸ್ತುತ ಸರ್ವೇ ನಡೆಸಲು ಪ್ರತಿ ಗ್ರಾ.ಪಂ.ಗೆ 30,000 ರೂ., ತಾ.ಪಂ., 80,000 ರೂ., ಜಿ.ಪಂ. 2 ಲ.ರೂ. ಸರಕಾರ ನೀಡಲಿದೆ. ಉಡುಪಿಗೆ 49.50 ಲ.ರೂ. ಹಾಗೂ ದ.ಕ. ಜಿಲ್ಲೆಯ ಗ್ರಾ.ಪಂ.ಗೆ 69 ಲ.ರೂ., ತಾ.ಪಂ.ಗೆ 4 ಲ.ರೂ., ಜಿ.ಪಂ.ಗೆ 2 ಲ.ರೂ ಸೇರಿದಂತೆ ಒಟ್ಟು 75 ಲ.ರೂ. ಸಿಗಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ಬೆಂಗಳೂರಿನ ಸಂಸ್ಥೆಯೊಂದು ಸ್ಥಳೀಯರನ್ನೊಳಗೊಂಡ ಸಮಿತಿ ರಚಿಸಿ ವರದಿ ತಯಾರಿಸುತ್ತಿದೆ.

ಸಮಿತಿ ಕೆಲಸವೇನು?
ಈ ಸಮಿತಿಗಳು ತಮ್ಮ ವ್ಯಾಪ್ತಿಗೆ ಬರುವ ಅರಣ್ಯ ಭೂಮಿ, ಕೃಷಿ ಜಮೀನು, ಸಂರಕ್ಷಿತ ಅರಣ್ಯ ಪ್ರದೇಶ, ಅರಣ್ಯ ಸಂಪತ್ತು, ಗಿಡ-ಮರ, ಹುಳು-ಜಂತು, ಪ್ರಾಣಿ-ಪಕ್ಷಿ ಇವುಗಳ ವಿವಿಧ ಪ್ರಭೇದ ಮತ್ತು ತಳಿಗಳ ಮಾಹಿತಿ, ಔಷಧೀಯ ಗಿಡಮೂಲಿಕೆಗಳ ವಿವರ, ಪಾರಂಪರಿಕ ತಾಣ, ನಾಟಿ ವೈದ್ಯರು, ಗುಡಿ-ದೈವಸ್ಥಾನ, ಇತಿಹಾಸದ ಜತೆಗೆ ಪ್ರಸಕ್ತ ಅಂಕಿ-ಅಂಶಗಳನ್ನು ದಾಖಲೆ ಹಾಗೂ ಚಿತ್ರಗಳನ್ನು ತಾಲೂಕು ಸಮಿತಿಗೆ ನೀಡಬೇಕು. ತಾಲೂಕು ಸಮಿತಿ ಅದನ್ನು ಜಿಲ್ಲಾ ಸಮಿತಿಗೆ ನೀಡಲಿದ್ದು, ಆ ಬಳಿಕ ರಾಜ್ಯ ಸಮಿತಿಗೆ ಕೊನೆಯ ವರದಿ ಸಲ್ಲಿಸಲಾಗುತ್ತದೆ.

ಸಮಿತಿ ರಚನೆಗೆ ವೇಗ!
ಜೈವಿಕ ವೈವಿಧ್ಯ ಅಧಿನಿಯಮ 2002ರ ಸೆಕ್ಷನ್‌ 41 (1), ಜೈವಿಕ ವೈವಿಧ್ಯ ನಿಯಮ ಗಳು-2005ರ ನಿಯಮ 22 ಮತ್ತು ಕರ್ನಾಟಕ ಜೈವಿಕ ವೈವಿಧ್ಯ ನಿಯಮಗಳು-2005ರ ನಿಯಮ 21ರ ಪ್ರಕಾರ ಪಂಚಾಯತ್‌ಗಳಲ್ಲಿ ಜೀವವೈವಿಧ್ಯ ನಿರ್ವಹಣೆ ಸಮಿತಿಗಳ ರಚನೆ ಕಡ್ಡಾಯವಾಗಿದೆ.
ಆದರೆ, ಈ ಬಗ್ಗೆ ಅಷ್ಟೊಂದು ಗಮನ ಹರಿಸಲಾಗುತ್ತಿರಲಿಲ್ಲ. 2019ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಪಂಚಾಯತ್‌ಗಳಲ್ಲಿ ಈ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕೆಂದು ಆದೇಶ ನೀಡಿರುವುದು, ಸಮಿತಿ ಕೆಲಸಗಳಿಗೆ ವೇಗ ಸಿಕ್ಕಿದೆ.

ಉಪಯೋಗ ಏನು?
ಜೀವ ವೈವಿಧ್ಯ ನಿರ್ವಹಣೆ ಸಮಿತಿ ರಚನೆಯಿಂದ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿ ಸಿಗುವ ಪ್ರಕೃತಿ ದತ್ತ ಸಂಪತ್ತುಗಳ ಅರಿವು ಸಿಗಲಿದೆ. ಕಲೆ, ಕರಕುಶಲ ವಸ್ತುಗಳ ಬಗ್ಗೆ ಬೇರೆ ಜಿಲ್ಲೆ, ರಾಜ್ಯದವರಿಗೆ ಮಾಹಿತಿ ಸಿಗಲಿದೆ. ಜತೆಗೆ ಜನರಿಗೆ ಉತ್ತಮ ಮಾರ್ಗದರ್ಶನ, ಅಧಿಕಾರ ಲಭ್ಯವಾಗಲಿದೆ. ಕೃಷಿ, ತೋಟಗಾರಿಕೆ, ಕೋಳಿ ಸಾಕಣೆ, ಹೈನುಗಾರಿಕೆ, ಪಶುಸಂಗೋಪನೆ ಸಾಂಪ್ರದಾಯಿಕ ಚಟುವಟಿಕೆಗೆ ಸಮಿತಿ ರಕ್ಷಣೆ ನೀಡಲಿದೆ. ಸ್ಥಳೀಯ ಸಂಪನ್ಮೂಲ ಸಂರಕ್ಷಣೆ, ಇತರೆ ಜವಾಬ್ದಾರಿ ನಿರ್ವಹಣೆ ಅಧಿಕಾರ ಸಮಿತಿ ವ್ಯಾಪ್ತಿಯಲ್ಲಿರುತ್ತದೆ.

ಸಮಿತಿ ರಚನೆ
ದ.ಕ. ಜಿಲ್ಲೆಯಲ್ಲಿ ಜನತಾ ಜೀವವೈವಿಧ್ಯ ನಿರ್ವಹಣ ಸಮಿತಿ ರಚನೆ ಮಾಡಲಾಗಿದೆ. ಅದರ ಸರ್ವೇಗೆ ಅಗತ್ಯವಿರು ತರಬೇತಿಯನ್ನು ಸಮಿತಿ ಸದಸ್ಯರಿಗೆ ನೀಡಲಾಗಿದೆ. ಸರಕಾರ ನೀಡಿದ ಅವಧಿಯಲ್ಲಿ ಸರ್ವೇ ಪೂರ್ಣಗೊಳಿಸಿ ವರದಿ ಸಲ್ಲಿಸಲಾಗುತ್ತದೆ.
-ಡಾ| ಸೆಲ್ವಮಣಿ ಆರ್‌., ಸಿಇಒ, ಜಿ.ಪಂ., ದ.ಕ. ಜಿಲ್ಲೆ.

ಮಾಹಿತಿ ಕ್ರೋಢೀಕರಣ
ಉಡುಪಿ ಜಿಲ್ಲೆಯ 35 ಗ್ರಾ.ಪಂ.ಗಳು ವರದಿ ನೀಡಿದೆ. ಬಾಕಿ ಉಳಿದ ಗ್ರಾ.ಪಂ.ಗಳ ವರದಿ ಸ್ವೀಕೃತವಾದ ತತ್‌ಕ್ಷಣ ತಾಲೂಕು ಹಾಗೂ ಜಿಲ್ಲಾ ಸಮಿತಿಯಿಂದ ಮಾಹಿತಿ ಕ್ರೋಢೀಕರಣಗೊಳಿಸಿ ರಾಜ್ಯಕ್ಕೆ ಸಲ್ಲಿಸಲಾಗುತ್ತದೆ.
-ಕಿರಣ್‌ ಫ‌ಡ್ನ್ ಕರ್‌, ಜಿ.ಪಂ. ಉಪಕಾರ್ಯದರ್ಶಿ, ಉಡುಪಿ.

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.