ರಾಜಕಾರಣಿಗಳಿಗೂ ಗುರು


Team Udayavani, Dec 30, 2019, 8:00 AM IST

bg-65

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ವಾಜಪೇಯಿಯವರು ಆಗಮಿಸಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಅವರಿಗೆ ಗೌರವಾರ್ಪಣೆ.

ಮಣಿಪಾಲ: ಕಾವಿ ವಸ್ತ್ರ, ಅನುಷ್ಠಾನ, ಉಪಾಸನೆಗಳ ಕಟ್ಟುನಿಟ್ಟು ಇದ್ದರೂ ಪೇಜಾವರ ಶ್ರೀಗಳಿಗೂ ರಾಜಕೀಯಕ್ಕೂ ಬಲವಾದ ನಂಟು. ಕೊನೆಯವರೆಗೂ ರಾಜಕಾರಣಿಗಳು, ರಾಜಕೀಯ ಅವರನ್ನು ಬಿಟ್ಟಿರಲಿಲ್ಲ. ರಾಜಕೀಯ ವಿದ್ಯಮಾನಗಳ ಬಗ್ಗೆ ನಿರಂತರವಾಗಿ ಪ್ರತಿಕ್ರಿಯಿಸುತ್ತಿದ್ದರು. ಇತ್ತೀಚೆಗೆ ಕರ್ನಾಟಕದ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಿ, ಈಗಿನ ರಾಜಕೀಯದಲ್ಲಿ ನೈತಿಕತೆ ಕುಸಿದಿದೆ ಎಂದಿದ್ದರು.

ಶ್ರೀಗಳ ಮತ್ತು ರಾಜಕೀಯದ ನಂಟು ಇಂದು ನಿನ್ನೆಯದಲ್ಲ. ಅಷ್ಟಮಠಗಳಲ್ಲೇ ಅತಿ ಹೆಚ್ಚು ರಾಜಕೀಯ ಸಂಪರ್ಕ ಹೊಂದಿದ್ದ ಯತಿವರೇಣ್ಯರು ಅವರು. ಈ ಸಂಪರ್ಕಗಳನ್ನು ಅವರು ಸ್ವಂತಕ್ಕಾಗಿ ಬಳಸಿಕೊಂಡಿದ್ದಿಲ್ಲ. ಬದಲಿಗೆ ತಾನು ಮಾಡುತ್ತಿರುವ ಕೆಲಸಗಳಿಗಾಗಿ ಬಳಸಿಕೊಂಡಿದ್ದರು. ಸಂತ ಸಮ್ಮೇಳನ, ವಿಹಿಂಪ ಜತೆಗಿನ ಒಡನಾಟದೊಂದಿಗೆ ಅವರಿಗೆ ರಾಜಕಾರಣಿಗಳ ಸಖ್ಯ ಲಭ್ಯವಾಗಿತ್ತು.

ಹಿಂದಿನ ಮುಖ್ಯಮಂತ್ರಿ ನಿಜಲಿಂಗಪ್ಪನವರಿಂದ ಹಿಡಿದು ಪ್ರಧಾನಿ ನರೇಂದ್ರ ಮೋದಿಯವರೆಗೆ ಅವರಿಗೆ ರಾಜಕಾರಣಿಗಳ ಸಂಪರ್ಕ ಇತ್ತು. ಇದಕ್ಕೆ ಕಾಂಗ್ರೆಸ್‌, ಬಿಜೆಪಿ ಎಂಬ ಭೇದ ಇರಲಿಲ್ಲ. ಅವರ ಅಂತಿಮ ದಿನಗಳ ಸಂದರ್ಭ ಪಕ್ಷ- ಜಾತಿ, ಮತಗಳ ಭೇದವಿಲ್ಲದೆ ಹಲವಾರು ರಾಜಕೀಯ ನಾಯಕರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು. ಪೇಜಾವರ ಶ್ರೀಗಳು ಎಲ್ಲ ರಾಜಕೀಯ ವ್ಯಕ್ತಿಗಳೊಂದಿಗೆ ಪರಿಚಯರಾಗಿದ್ದರಿಂದಲೋ ಏನೋ, ಅವರ ಮಾತಿಗೆ ರಾಜಕೀಯ ವಲಯದಲ್ಲಿ ವಿಶೇಷ ತೂಕ ಇರುತ್ತಿತ್ತು. ಕೆಲವು ನಾಯಕರಂತೂ ಪೇಜಾವರರ ಮಾತುಗಳನ್ನು ಮೀರಿ ನಡೆಯೆವು ಎಂಬಷ್ಟರ ಮಟ್ಟಿಗೆ ಗೌರವ ಭಾವ ಹೊಂದಿದ್ದರು. ಇದೇ ಕಾರಣಕ್ಕೆ ಪ್ರಮುಖ ರಾಜಕೀಯ ವಿದ್ಯಮಾನಗಳಾದಾಗ ಪತ್ರಕರ್ತರು ಪೇಜಾವರ ಶ್ರೀಗಳ ಪ್ರತಿಕ್ರಿಯೆ ಕೇಳುತ್ತಿದ್ದರು. ಅವರ ಅಭಿಪ್ರಾಯವೂ ಒಂದು ಚರ್ಚೆಗೆ ನಾಂದಿಯಾಗುತ್ತಿತ್ತು.

ರಾಮಜನ್ಮಭೂಮಿ ಆಂದೋಲನದ ಬಳಿಕವಂತೂ ಪೇಜಾವರ ಶ್ರೀಗಳ ಹೆಸರು ರಾಜಕೀಯ ವಲಯದಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿತ್ತು. ಅವರು ಆಂದೋಲನದ ಮುಂಚೂಣಿಯಲ್ಲಿದ್ದದ್ದು ಮತ್ತು ಅವರ ನಿರ್ಧಾರಗಳಿಗೆ ಸಿಕ್ಕ ಮನ್ನಣೆಯಿಂದಾಗಿ ರಾಜಕೀಯ ವಲಯ ಅವರ ಮಾತುಗಳನ್ನು ಕೇಳುತ್ತಿತ್ತು. ಧರ್ಮವು ಪ್ರಬಲವಾಗಿದ್ದು ರಾಜಕೀಯಕ್ಕೆ ನಿರ್ದೇಶನ ನೀಡುವಂತಿರಬೇಕುಎಂಬ ರೀತಿಯ ಆಶಯವನ್ನು ಹೊಂದಿದ್ದರು. ಇದಕ್ಕೆ ರಾಜಕಾರಣಿಗಳು ಸಲಹೆ ಕೇಳಿದರೆ ತುಂಬು ಮನಸ್ಸಿನಿಂದ ಮಾರ್ಗದರ್ಶನ ಮಾಡುತ್ತಿದ್ದುದು ನಿದರ್ಶನವಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.