Rain: ಉಡುಪಿ ಜಿಲ್ಲಾದ್ಯಂತ ಗಾಳಿ-ಮಳೆ… ಹಲವೆಡೆ ಮರಗಳು ಬಿದ್ದು ವಿದ್ಯುತ್ ವ್ಯತ್ಯಯ


Team Udayavani, Jul 26, 2024, 8:00 AM IST

Rain: ಉಡುಪಿ ಜಿಲ್ಲಾದ್ಯಂತ ಗಾಳಿ-ಮಳೆ… ಹಲವೆಡೆ ಮರಗಳು ಬಿದ್ದು ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾದ್ಯಂತ ಎರಡು ದಿನಗಳಿಂದ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ಗುರುವಾರ ಮುಂಜಾನೆ ನಿರಂತರವಾಗಿ ಗಾಳಿ ಸಹಿತ ಮಳೆಯಾಗಿದ್ದು, ಹಲವೆಡೆ ಮರಗಳು ಬಿದ್ದಿದ್ದು, ಕೆಲವು ಕಡೆಗಳಲ್ಲಿ ದಿನವಿಡೀ ವಿದ್ಯುತ್‌ ವ್ಯತ್ಯಯವಾಗಿದೆ.

ಜಿಲ್ಲೆಯ ಕಡಲಿನ ಪ್ರಕ್ಷುಬ್ಧ ವಾತಾವರಣ ಮುಂದುವರಿದಿದ್ದು, ಶಿರೂರು, ಉಪ್ಪುಂದ, ಕೊಡೇರಿ, ಮರವಂತೆ, ಕೋಡಿ ಕನ್ಯಾನ, ಮಲ್ಪೆ, ಕಾಪು, ಪಡುಬಿದ್ರಿ ಹಾಗೂ ಹೆಜಮಾಡಿಯ ಕಡಲು ತೀರದ ಗ್ರಾಮಗಳಲ್ಲಿ ಕಡಲ್ಕೊರೆತದ ಆತಂಕ ಮುಂದುವರಿದ್ದು, ಬೃಹತ್‌ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜು. 27ರ ವರೆಗೂ ಸಮುದ್ರದಿಂದ ತೀವ್ರ ಗಾಳಿ ಬೀಸುವ ಮುನ್ಸೂಚನೆಯಿದೆ.

ಕುಂದಾಪುರ ತಾಲೂಕಿನಲ್ಲಿ ಮನೆ, ಕೃಷಿ ಭೂಮಿಗೆ ವ್ಯಾಪಕ ಹಾನಿ ಸಂಭವಿಸಿದೆ. ಕಾಪು, ಉಡುಪಿ, ಕಾರ್ಕಳ, ಬೈಂದೂರು, ಬ್ರಹ್ಮಾವರ, ಹೆಬ್ರಿ ಭಾಗದಲ್ಲಿ ಮಳೆ ಸುರಿದಿದ್ದು, ಗುರುವಾರ ಕುಂದಾಪುರ, ಹೆಬ್ರಿ, ಬೈಂದೂರು, ಕಾರ್ಕಳ ತಾಲೂಕಿನ ತಹಶೀಲ್ದಾರ್‌ ಮುಂಜಾಗ್ರತ ಕ್ರಮವಾಗಿ ಗುರುವಾರ ಬೆಳಗ್ಗೆ ಅಂಗನ ವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿವರೆಗೆ ರಜೆ ಘೋಷಿಸಿದರು. ಶುಕ್ರವಾರ ಮಳೆ ಪರಿಸ್ಥಿತಿ ನೋಡಿ ಕೊಂಡು ರಜೆ ನೀಡುವ ಬಗ್ಗೆ ನಿರ್ಧರಿ ಸಲಾಗುವುದು ಎಂದು ಆಯಾ ತಾಲೂಕಿನ ತಹಶೀಲ್ದಾರ್‌ ತಿಳಿಸಿದ್ದಾರೆ.

ಕುಂದಾಪುರ ತಾಲೂಕಿನಲ್ಲಿ 48 ಮನೆಗಳಿಗೆ ಹಾನಿಯಾಗಿದ್ದು, 10 ಮಂದಿ ಕೃಷಿಕರ ತೋಟಗಾರಿಕೆ ಬೆಳೆಗಳಿಗೆ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳ ಗಾಳಿ ಮಳೆಗೆ ಒಟ್ಟು 58 ಮನೆಗಳಿಗೆ ಹಾನಿ ಸಂಭವಿಸಿದೆ. ಮಳೆಯಿಂದಾಗಿ ನಗರ, ಗ್ರಾಮಾಂತರ ರಸ್ತೆ ಮತ್ತು ಮೂಲ ಸೌಕರ್ಯಗಳಿಗೆ ಸಾಕಷ್ಟು ಹಾನಿಯಾಗಿದೆ. ಹಾನಿಗೀಡಾದ ರಸ್ತೆಗಳನ್ನು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಪರಿಶೀಲಿಸಿದರು.

ದಿನವಿಡೀ ಕೈಕೊಟ್ಟ ವಿದ್ಯುತ್‌
ಹಲವು ಭಾಗಗಳಲ್ಲಿ ದಿನವಿಡೀ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡು ಜನರು ಪರದಾಡುವಂತಾಯಿತು. ಗ ಜಿಲ್ಲೆಯಲ್ಲಿ 130ಕ್ಕೂ ಅಧಿಕ ವಿದ್ಯುತ್‌ ಕಂಬಗಳು, 1.82 ಕಿ.ಮೀ. ವಿದ್ಯುತ್‌ ತಂತಿ, 7 ವಿದ್ಯುತ್‌ ಪರಿವರ್ತಕಗಳಿಗೆ ಹಾನಿ ಸಂಭವಿಸಿದ್ದು, 24.16 ಲಕ್ಷ ರೂ. ನಷ್ಟವಾಗಿದೆ. ಮೆಸ್ಕಾಂ ಸಿಬಂದಿ ನಿರಂತರ ನಿರ್ವಹಣೆಯಲ್ಲಿ ತೊಡಗಿಸಿದ್ದು, ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ. ಸಾಧ್ಯವಾದ ಕಡೆಗಳಲ್ಲಿ ಪರ್ಯಾಯ ಸಂಪರ್ಕ ಕಲ್ಪಿಸಿ ನಿರಂತರ ವಿದ್ಯುತ್‌ ಪೂರೈಕೆಗೆ ಶ್ರಮಿಸ ಲಾಗುತ್ತಿದೆ ಎಂದು ಮೆಸ್ಕಾಂ ತಿಳಿಸಿದೆ.

ಇದನ್ನೂ ಓದಿ: Mangaluru: ತಿಂಗಳೊಳಗೆ ಗೋಹತ್ಯೆ ತಡೆಯದಿದ್ದರೆ ಪ್ರತಿಭಟನೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.