Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ

ಪುರಾತನ ದೇಗುಲದ ವಾಸ್ತುವಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ಈ ಕ್ರಮ

Team Udayavani, Sep 14, 2024, 7:15 AM IST

Perduru-Highway

ಹೆಬ್ರಿ: ಪೆರ್ಡೂರಿನ ಸಾವಿರ ವರ್ಷಗಳ ಇತಿಹಾಸದ ಅನಂತ ಪದ್ಮನಾಭ ದೇವಾಲಯದ ನಾಗವನ ಹಾಗೂ ವಾಸ್ತು ಪರಿಧಿಗೆ ಧಕ್ಕೆ ಆಗ ದಂತೆ ರಾಷ್ಟ್ರೀಯ ಹೆದ್ದಾರಿ-169ಎ ಕಾಮಗಾರಿ ನಡೆಸಲು ಸಾಧ್ಯವೇ ಎಂದು ಪರಿಶೀಲಿಸಲು ಹೆದ್ದಾರಿ ಇಲಾಖೆಗೆ ಹೈಕೋರ್ಟ್‌ ಸಲಹೆ ನೀಡಿದೆ.

ಮಲ್ಪೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಪೆರ್ಡೂರು ಭಾಗದಲ್ಲಿ ದೇವಸ್ಥಾನಕ್ಕೆ ತಾಗಿಕೊಂಡು ಹಾದು ಹೋಗುವ ನೀಲನಕ್ಷೆ ತಯಾರಾಗಿದೆ. ಇದನ್ನು
ಸ್ಥಳೀಯರಾದ ರಂಜಿತ್‌ ಪ್ರಭು ಕೋರ್ಟ್‌ನಲ್ಲಿ ಪ್ರಶ್ನಿಸಿ, ದೇಗುಲಕ್ಕೆ ಧಕ್ಕೆ ಯಾಗುವುದನ್ನು ತಡೆ ಯುವಂತೆ ಮನವಿ ಮಾಡಿದ್ದರು. ಪ್ರಸ್ತುತ ದೇವಸ್ಥಾನದ ಆಡಳಿತ ಮಂಡಳಿಯೂ ನ್ಯಾಯಾ ಲಯದ ಮೆಟ್ಟಿಲೇರಿದೆ. ನಕ್ಷೆ ಪ್ರಕಾರ ಹೆದ್ದಾರಿಯು ದೇವಾಲಯದ ರಥಬೀದಿ, ನಾಗವನ ಇರುವ ಜಾಗದಲ್ಲೇ ಹಾದು ಹೋಗಲಿದೆ.
ಇದರಿಂದ ದೇವಾಲಯವು ಮೂಲ ಸ್ವರೂಪವನ್ನು ಕಳೆದುಕೊಳ್ಳಲಿದೆ ಹಾಗೂ ವಾಸ್ತುವಿಗೆ ಧಕ್ಕೆ ಅಗಲಿದೆ. ಆದ್ದರಿಂದ ಪರ್ಯಾಯ ಸಾಧ್ಯತೆ ಬಗ್ಗೆ ಪರಿಶೀಲಿಸಲು ಸಲಹೆ ನೀಡುವಂತೆ ನ್ಯಾಯವಾದಿ ಕೇತನ್‌ ಕುಮಾರ್‌ ಬಂಗೇರ ಅವರು ದೇಗುಲದ ಪರವಾಗಿ ಮನವಿ ಮಾಡಿದ್ದರು.

ಬದಲಿ ಮಾರ್ಗಕ್ಕೆ ಸೂಚನೆ
ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಪುರಾತನ ಇತಿಹಾಸ ಹೊಂದಿರುವ ದೇವಸ್ಥಾನ ಗಳನ್ನು ರಕ್ಷಿಸಬೇಕಿದೆ. ಈ ಭಾಗದಲ್ಲಿ ಪರ್ಯಾಯ ಮಾರ್ಗದ ಸಾಧ್ಯತೆ ಬಗ್ಗೆ ಪರಿಶೀಲಿಸಬೇಕು. ಬೆಂಗಳೂರಿನ ಕೋರ್ಟ್‌ ಪಕ್ಕದ ಕಟ್ಟಡ ನೆಲಸಮಕ್ಕೆ ವಿರೋಧ ಇದೆ. ದೇವಸ್ಥಾನಕ್ಕೆ ಧಕ್ಕೆ ಅಗುವುದನ್ನು ತಡೆಯಲು ಸಾಧ್ಯ ವಿಲ್ಲವೇ ಎಂದು ಪ್ರಶ್ನಿಸಿದೆ. ರಸ್ತೆ ಅಗಲ ಗೊಳಿಸುವುದು ಅಥವಾ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡುವಾಗ ದೇವಾಲಯ ಸಹಿತ ಧಾರ್ಮಿಕ ಕಟ್ಟಡಗಳಿಗೆ ಧಕ್ಕೆ ಆಗುವುದಾದರೆ ಅಂತಹ ಸಂದರ್ಭಗಳಲ್ಲಿ ಸಂಬಂಧಿಸಿದ ಪ್ರಾಧಿಕಾರ ಪರ್ಯಾಯ ಮಾರ್ಗ ಗಳನ್ನು ಬಳಸಬಹುದು ಎಂದರು.

ಬದಲಿ ಮಾರ್ಗ
ಪೆರ್ಡೂರು ಮೇಲ್ಪೇಟೆಯಿಂದ ದೇವಸ್ಥಾನಕ್ಕೆ ಸಂಬಂಧಪಟ್ಟ ಖಾಲಿ ಜಾಗದ ಮೂಲಕ ಹಾದು ಬಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಪರ್ಯಾಯ ಮಾರ್ಗವನ್ನು ಬಳಸಬಹು ದು ಎಂದು ಸ್ಥಳೀಯರು ಹೆದ್ದಾರಿ ಇಲಾಖೆಗೆ ತಿಳಿಸಿದ್ದಾರೆ. ಇಲ್ಲೂ ದೇವಸ್ಥಾನದ ಶೇ. 80ರಷ್ಟು ಜಾಗ ರಸ್ತೆಗೆ ಹೋಗುತ್ತದೆ. ಆದರೆ ದೇಗು ಲದ ವಾಸ್ತುವಿಗೆ ಹಾನಿಯಾಗದು. ಇಲಾಖೆಯ ನಕ್ಷೆ ಪ್ರಕಾರ ಕಾಮಗಾರಿ ನಡೆದರೆ ಹಲವು ಅಂಗಡಿ, ಮನೆಗಳು, ರಾಮ ಮಂದಿರ, ನಾಗಬನಕ್ಕೂ ಧಕ್ಕೆಯಾಗುವುದಲ್ಲದೆ, ದೇವಸ್ಥಾನದ ವಾಸ್ತು ಭಿನ್ನವಾಗಲಿದೆ.

“ದೇಗುಲ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು.” –ಕೋಟ ಶ್ರೀನಿವಾಸ ಪೂಜಾರಿ , ಸಂಸದರು, ಉಡುಪಿ -ಚಿಕ್ಕಮಗಳೂರು ಕ್ಷೇತ್ರ

ದೇವಸ್ಥಾನದ ವಾಸ್ತು ಉಳಿಸಲು ಕೈಜೋಡಿಸಿ
“ಪೆರ್ಡೂರು ದೇವಸ್ಥಾನದ ವಾಸ್ತು ಮತ್ತು ಮೂಲ ಸ್ವರೂಪವನ್ನು ಉಳಿಸಲು ಭಕ್ತರು ಹಾಗೂ ಗ್ರಾಮಸ್ಥರೆಲ್ಲರೂ ಕೈಜೋಡಿಸ ಬೇಕಿದೆ. ಹೈಕೋರ್ಟ್‌ನ ನ್ಯಾಯಾಧೀಶರೂ ದೇವಸ್ಥಾನದ ಪರ ಅಭಿಪ್ರಾಯ ವ್ಯಕ್ತಪಡಿಸಿರುವುದು ಶ್ಲಾಘನೀಯ.” – ರಂಜಿತ್‌ ಪ್ರಭು, ಸ್ಥಳೀಯರು

 

– ಹೆಬ್ರಿ ಉದಯ ಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.