Karkala: ಮಳೆ ಬಂದರೆ ಹೆದ್ದಾರಿಯೇ ಚರಂಡಿ!

ಕಾರ್ಕಳ-ಪಡುಬಿದ್ರಿ ಹೆದ್ದಾರಿಯುದ್ದಕ್ಕೂ ಮಣ್ಣು ಅಗೆದಿದ್ದರಿಂದ ಸಮಸ್ಯೆ

Team Udayavani, Aug 11, 2024, 3:43 PM IST

Karkala: ಮಳೆ ಬಂದರೆ ಹೆದ್ದಾರಿಯೇ ಚರಂಡಿ!

ಕಾರ್ಕಳ: ಹೆದ್ದಾರಿ ಬದಿಯಲ್ಲಿ ಸರಿಯಾದ ಚರಂಡಿ ವ್ಯವಸ್ಥೆಗಳಿಲ್ಲದೆ ಮಳೆಯ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರ ಪರಿಣಾಮ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತಗಳಿಗೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ.

ಪಡುಬಿದ್ರಿಯಿಂದ ಕಾರ್ಕಳ ಸಾಗುವ ರಾಜ್ಯ ಹೆದ್ದಾರಿ 1ರ 32 ಕಿ.ಮೀ ಉದ್ದದ ರಸ್ತೆಯಲ್ಲಿ ಈ ಬಾರಿ ಮಳೆ ಸುರಿಯುತ್ತಿದ್ದಂತೆ ಮಳೆಯ ನೀರು ಚರಂಡಿಯಲ್ಲಿ ಹರಿಯದೆ ನೇರವಾಗಿ ರಸ್ತೆಯಲ್ಲೇ ಹರಿಯುವುದರ ಪರಿಣಾಮ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೂ ನಿತ್ಯ ಸಮಸ್ಯೆಯಾಗುತ್ತಿದೆ. ಕೆಲವೊಂದು ಬಾರಿ ಸುರಿಯುವ ಭಾರೀ ಮಳೆಗೆ ರಸ್ತೆಯ ತುಂಬೆಲ್ಲ ನೀರು ಹರಿಯುವುದರಿಂದ ಅಪಘಾತಗಳಿಗೆ ನಿತ್ಯ ಎಡೆ ಮಾಡಿಕೊಡುತ್ತಿದೆ.

ಕೆಲವೆಡೆ ರಸ್ತೆಯಲ್ಲೇ ಕಲ್ಲು ಮಣ್ಣು ಮಳೆಯ ನೀರಿನೊಂದಿಗೆ ರಸ್ತೆಗೆ ಹರಿದು ಬರುವ ಕಸ ಕಡ್ಡಿ ಕಲ್ಲು ಮಣ್ಣು ಎಲ್ಲವೂ ರಸ್ತೆಯಲ್ಲೇ ಶೇಖರಣೆಗೊಳ್ಳುವುದರಿಂದ ಬೈಕ್‌ ಸವಾರರಂತು ನಿತ್ಯ ಎಡವಟ್ಟು ಮಾಡಿಕೊಂಡು ರಸ್ತೆಯಲ್ಲಿ ಬಿದ್ದು ಗಾಯಗೊಂಡ ನಿದರ್ಶನ ಸಾಕಷ್ಟಿದೆ. ಮಾವಿನಕಟ್ಟೆ ಸಮೀಪದ ತಿರುವು ರಸ್ತೆಯಲ್ಲಿ ಹಾಗೂ ನಂದಳಿಕೆ ಲಕ್ಷ್ಮೀಜನಾರ್ದನ ದೇವಾಲಯದ ತಿರುವು ರಸ್ತೆಯಲ್ಲಿ ಮತ್ತು ಬೆಳ್ಮಣ್‌, ಸಾಂತೂರು, ಹಾಗೂ ಅಡ್ವೆ ನಂದಿಕೂರು ಪರಿಸರದಲ್ಲಿಯೂ ಮಳೆಯ ನೀರು ರಸ್ತೆಯಲ್ಲೇ ಹರಿದಾಡುತ್ತಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಹೆದ್ದಾರಿಯಲ್ಲಿ ಮಳೆ ನೀರು ಹರಿಯುವುದರ ಪರಿಣಾಮ ಸಾಕಷ್ಟು ಕಡೆಗಳಲ್ಲಿ ನಿರಂತರ ಅಪಘಾತಗಳಾಗುತ್ತಿವೆ. ನೀಚಾಲು ತಿರುವು ರಸ್ತೆಯಲ್ಲಿ, ನಂದಿಕೂರು, ಹಾಗೂ ಬೆಳ್ಮಣ್‌ನ ನೀಚಾಲು ತಿರುವು ಭಾಗದಲ್ಲಿ ಮತ್ತು ನಂದಳಿಕೆ ಬೋರ್ಡ್‌ ಶಾಲೆಯ ಇಳಿಜಾರು ರಸ್ತೆಯಿಂದ ದಡ್ಡು ದ್ವಾರದ ವರೆಗೆ ಹಾಗೂ ಮಾವಿನಕಟ್ಟೆ, ಪರ್ಪಲೆ ಭಾಗದಲ್ಲಿಯೂ ಮಳೆ ನೀರು ರಸ್ತೆಯಲ್ಲೇ ಹರಿಯುವುದರ ಪರಿಣಾಮ ಅಪಘಾತಗಳಿಗೆ ಕಾರವಾಗುತ್ತಿದೆ.

ಮಣ್ಣು ಅಗೆದಿದ್ದೇ ಇಷ್ಟಕ್ಕೆಲ್ಲ ಕಾರಣ

ರಾಜ್ಯ ಹೆದ್ದಾರಿಯುದ್ದಕ್ಕೂ ಈ ಬಾರಿ ಚರಂಡಿ ಎಲ್ಲವೂ ಮಾಯಾವಾಗಿದೆ. ಬಹುತೇಕ ಕಡೆಗಳಲ್ಲಿ ಪೈಪ್‌ ಲೈನ್‌ ಕಾಮಗಾರಿಗಾಗಿ ಅಗೆದು ಹಾಕಿದ ಪರಿಣಾಮ ಚರಂಡಿಯ ತುಂಬೆಲ್ಲ ಮಣ್ಣು ತುಂಬಿಕೊಂಡು ಚರಂಡಿಯೇ ಇಲ್ಲದಂತಾಗಿದೆ. ಜೋರಾಗಿ ಮಳೆ ಬಂದರೆ ಸಾಕು ಹೆದ್ದಾರಿಯುದ್ದಕ್ಕೂ ಇಲ್ಲಿನ ನಿತ್ಯ ಸಮಸ್ಯೆಯ ಬಗ್ಗೆ ಗ್ರಾಮಸ್ಥರು ಸಾಕಷ್ಟು ಬಾರಿ ಸ್ಥಳೀಯ ಗ್ರಾ.ಪಂ.ಗಳಿಗೆ ಮನವಿಯನ್ನು ಮಾಡಿಕೊಂಡರೂ ಹಾಗೂ ಗ್ರಾಮ ಸಭೆಯಲ್ಲಿ ಚರ್ಚೆ ನಡೆಸಿದರೂ ಪ್ರಯೋಜನವಾಗಿಲ್ಲ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.