ಪಾಂಬೂರು ಪರಿಚಯ ಪ್ರತಿಷ್ಠಾನ; ಚಿತ್ರ ಪರಿಚಯ; ನಿಸರ್ಗ ಚಿತ್ರಣ ಶೈಕ್ಷಣಿಕ ವಸತಿ ಶಿಬಿರ


Team Udayavani, Jan 9, 2024, 2:10 PM IST

5-shirwa

ಶಿರ್ವ: ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟಿವಟಿಕೆಗಳನ್ನು ಆಯೋಜಿಸುವ ಪಡುಬೆಳ್ಳೆ ಪಾಂಬೂರಿನ ಪರಿಚಯ ಪ್ರತಿಷ್ಠಾನವು ಚಿತ್ರ ಪರಿಚಯ; ನಿಸರ್ಗ ಚಿತ್ರಣ ಶೈಕ್ಷಣಿಕ ಶಿಬಿರವನ್ನು ಜ. 11 ರಿಂದ 21ರ ವರೆಗೆ ಪಾಂಬೂರಿನ ರಂಗ ಪರಿಚಯದಲ್ಲಿ ಆಯೋಜಿಸಿದೆ ಎಂದು ಪಾಂಬೂರು ಪರಿಚಯ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಕಾಶ್‌ ನೊರೊನ್ಹಾ ಜ.8ರಂದು ಕಾಪು ಪ್ರಸ್‌ ಕ್ಲಬ್‌ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜ. 11 ರಂದು ಸಂಜೆ 6 ಗಂಟೆಗೆ ಚಿತ್ರಕಲಾವಿದ ಹಾಗೂ ಶಿಕ್ಷಕ ರಮೇಶ್‌ ಬಂಟಕಲ್ಲು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಪಾಂಬೂರು ಹೋಲಿ ಕ್ರಾಸ್‌ ಚರ್ಚ್‌ನ ಧರ್ಮಗುರು ರೆ|ಫಾ| ಹೆನ್ರಿ ಮಸ್ಕರೇನಸ್‌ ಮತ್ತು ಮಂಗಳೂರು ಮಹಾಲಸಾ ದ್ರಶ್ಯಕಲಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಸೈಯದ್‌ ಆಸಿಫ್‌ ಆಲಿ ಉಪಸ್ಥಿತರಿರುವರು.

ಶಿಬಿರದಲ್ಲಿ ಮಂಗಳೂರು ಮಹಾಲಸಾ ದೃಶ್ಯಕಲಾ ಮಹಾವಿದ್ಯಾಲಯದ 30 ವಿದ್ಯಾರ್ಥಿಗಳು ರಂಗ ಪರಿಚಯದಲ್ಲಿದ್ದು, ಹಗಲು ಹೊತ್ತು ವಿವಿಧ ಸ್ಥಳಗಳಲ್ಲಿ ಪ್ರಕೃತಿ ಚಿತ್ರಣ ನಿರತರಾಗಿದ್ದು, ಸಾಯಂಕಾಲ ರಂಗ ಪರಿಚಯದಲ್ಲಿ ಸಾಂಸðತಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಶಿಬಿರದ ಎಲ್ಲಾ ದಿನಗಳಲ್ಲಿ ರಂಗಪರಿಚಯದಲ್ಲಿ ವಿವಿಧ ಸಾಂಸðತಿಕ ಕಾರ್ಯಕ್ರಮಗಳು, ಉಪನ್ಯಾಸಗಳು ಹಾಗೂ ಸಿನೆಮಾ ಪ್ರದರ್ಶನ ಆಯೋಜಿಸಲಾಗಿದೆ.

ಕಾರ್ಯಕ್ರಮಗಳು

ಜ. 12ರಂದು ನಾದ ಮಣಿನಾಲ್ಕೂರು ತಂಡದಿಂದ ಕತ್ತಲೆ ಹಾಡು, ಜ. 13 ರಂದು ಖ್ಯಾತ ವೈದ್ಯ ಹಾಗೂ ಸಂಗೀತ ಕಲಾವಿದ ಡಾ| ಆರ್‌.ಎನ್‌.ಭಟ್‌ ಅವರಿಂದ ಉಪನ್ಯಾಸ, ಸಂವಾದ ಮತ್ತು ಸಂಗೀತ ಪ್ರಸ್ತುತಿ, ಜ. 14 ರಂದು ಖ್ಯಾತ ವಿನೋದ ಭಾಷಣಗಾರ್ತಿ ಸಂಧ್ಯಾ ಶೆಣೈ ಅವರಿಂದ ಹಾಸ್ಯದೊಂದಿಗೆ ಜೀವನ ಮೌಲ್ಯಗಳು, ಜ. 15ರಂದು ಹವ್ಯಾಸಿ ಪಕ್ಷಿ ವೀಕ್ಷಕ ಮತ್ತು ವನ್ಯ ಜೀವಿ ಅಧ್ಯಯನಕಾರ ಅರವಿಂದ ಕುಡ್ಲ ಅವರಿಂದ ಪಕ್ಷಿಲೋಕದ ಸಾಕ್ಷ್ಯಚಿತ್ರ ಮತ್ತು ಸಂವಾದ-ಹಕ್ಕಿ ಪರಿಚಯ, ಜ.16 ರಂದು ಖ್ಯಾತ ಕಲಾವಿದರಿಂದ ತಾಳಮದ್ದಳೆ ಪಾದುಕಾ ಪ್ರದಾನ, ಜ. 17ರಂದು ಮಂಗಳೂರು ಸಂತ ಎಲೋಸಿಯಸ್‌ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ಕನ್ನಡ ನಾಟಕ ಹ್ಯಾಂಗ್‌ ಆನ್‌, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪುರಸðತ ಕನ್ನಡ ಸಿನೆಮಾಗಳ ಪ್ರದರ್ಶನ, ಜ. 18ರಂದು ಚಂಪಾ ಪಿ. ಶೆಟ್ಟಿ ನಿರ್ದೇಶನದ ಕೋಳಿ ಎಸ್ರು, ಜ. 19ರಂದು ಉತ್ಸವ್‌ ಗೋನವಾರ ನಿರ್ದೆಶನದ ಫೋಟೋ, ಜ. 20 ರಂದು ಉಮೇಶ್‌ ಬಡಿಗೇರ್‌ ನಿರ್ದೇಶನದ ದಿ ಗಾರ್ಡ್‌ ಪ್ರದರ್ಶನಗೊಳ್ಳಲಿದೆ. ಜ. 21ರಂದು ಮಧ್ಯಾಹ್ನ 3 ಗಂಟೆಯಿಂದ ಚಿತ್ರಕಲಾ ಪ್ರದರ್ಶನ ಆಯೋಜಿಸಲಾಗಿದ್ದು, ಸಂಜೆ 6. 30 ರಿಂದ ಶಿಬಿರ ಸಮಾರೋಪಗೊಳ್ಳಲಿದೆ.

ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್‌. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಖ್ಯಾತ ಚಿತ್ರ ಹಾಗೂ ಶಿಲ್ಪ ಕಲಾವಿದ ಬೆಂಗಳೂರಿನ ಸುದೇಶ್‌ ಮಹಾನ್‌ ಸಮಾರೋಪ ಸಂದೇಶ ನೀಡಲಿದ್ದಾರೆ.

ಎಲ್ಲಾ ಕಾರ್ಯಕ್ರಮಗಳು ಪ್ರತಿದಿನ ಸಂಜೆ 6.30ಕ್ಕೆ ಸರಿಯಾಗಿ ಆರಂಭಗೊಳ್ಳಲಿದ್ದು, ಕಲಾಸಕ್ತರಿಗೆ ಉಚಿತ ಪ್ರವೇಶವಿದೆ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪಾಂಬೂರು ಪರಿಚಯ ಪ್ರತಿಷ್ಠಾನದ ಟ್ರಸ್ಟಿಗಳಾದ ವಿಲ್ಸನ್‌ ಡಿಸೋಜಾ, ಪೀಟರ್‌ ಓಸ್ತಾ ಮತ್ತು  ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಪುಂಡಲೀಕ ಮರಾಠೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.