Udupi ಬನ್ನಂಜೆಯಲ್ಲಿ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆ ಉದ್ಘಾಟನೆ


Team Udayavani, Aug 25, 2023, 10:29 AM IST

3-jayalakshmi-silks

ಉಡುಪಿ: ರಾ.ಹೆ. 169ಎ ಸನಿಹದ ಬನ್ನಂಜೆಯಲ್ಲಿ ನಿರ್ಮಿಸಿರುವ ಸಮುಚ್ಚಯದಲ್ಲಿ ಜಯ ಲಕ್ಷ್ಮೀ ಸಿಲ್ಕ್ಸ್ ನ ಉದ್ಘಾಟನೆ ಗುರುವಾರ ನಡೆಯಿತು.

ಕರ್ಣಾಟಕ ಬ್ಯಾಂಕ್‌ನ ನಿವೃತ್ತ ಎಂಡಿ ಮತ್ತು ಸಿಇಒ ಡಾ| ಮಹಾಬಲೇಶ್ವರ ಎಂ.ಎಸ್‌. ಉದ್ಘಾಟಿಸಿ ಮಾತನಾಡಿ, ಉಡುಪಿಯ ವರ್ಣಮಯ ಇತಿಹಾಸದೊಂದಿಗೆ ಹೆಸರಾಂತ ಜವುಳಿ ಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಸೇರಿಕೊಂಡು ಮತ್ತಷ್ಟು ಸುಂದರಗೊಳಿಸಿದೆ. ಉದ್ಯಮವೊಂದು ಯಶಸ್ವಿಗೊಂಡರೆ ಅದರೊಂದಿಗೆ ಊರು/ ನಗರ ಅಭಿವೃದ್ಧಿ ಹೊಂದುತ್ತದೆ. ಈ ಉದ್ಯಮವು ಜಯ ಸಾಧಿಸಿ, ಲಕ್ಷ್ಮೀಯನ್ನು ಒಲಿಸಿಕೊಂಡು ಯಶಸ್ವಿ ಯಾಗಲಿ ಎಂದು ಹಾರೈಸಿದರು.

ಪ್ರಥಮ ಅಂತಸ್ತಿನ ಸೀರೆ ವಿಭಾಗವನ್ನು ಉದ್ಘಾಟಿಸಿದ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌, ಸಿಬಂದಿಯ ನಗುಮೊಗದ ಸೇವೆಯೊಂದಿಗೆ ಉತ್ತಮ ಗುಣಮಟ್ಟದ ಬಟ್ಟೆಬರೆಗಳನ್ನು ಗ್ರಾಹಕರಿಗೆ ಒದಗಿಸಿದಾಗ ವಸ್ತ್ರೋದ್ಯಮ ಬೆಳವಣಿಗೆ ಕಾಣುತ್ತದೆ. ಈ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದರು.

5ನೇ ಅಂತಸ್ತಿನ ಬ್ರ್ಯಾಂಡೆಡ್‌ ಮೆನ್ಸ್‌ ವೇರ್‌ ಉದ್ಘಾಟಿಸಿದ ಉದ್ಯಾವರ ಹಲೀಮಾ ಸಬ್ಜು ಆಡಿಟೋರಿಯಂನ ಹಾಜಿ ಅಬ್ದುಲ್‌ ಜಲೀಲ್‌ ಸಾಹೇಬ್‌, ನೆಲ ಅಂತಸ್ತಿನ ಹ್ಯಾಂಡ್‌ಲೂಮ್‌ ವಿಭಾಗ ಉದ್ಘಾಟಿಸಿದ ಮಾಂಡವಿ ಬಿಲ್ಡರ್ ನ ಎಂಡಿ ಜೆರ್ರಿ ವಿನ್ಸೆಂಟ್‌ ಡಯಾಸ್‌, 4ನೇ ಅಂತಸ್ತಿನ ಎತ್ನಿಕ್‌ ವೇರ್‌ ವಿಭಾಗ ಉದ್ಘಾಟಿಸಿದ ಕರ್ಣಾಟಕ ಬ್ಯಾಂಕ್‌ನ ಜಿಎಂ ರವಿಚಂದ್ರನ್‌ ಶುಭಾಶಂಸನೆಗೈದರು.

3ನೇ ಅಂತಸ್ತಿನ ಲೈಫ್ಸ್ಟೈಲ್‌ ವಿಭಾಗವನ್ನು ಎಸ್‌.ಪಿ. ಹಾಕೆ ಅಕ್ಷಯ ಮಚ್ಚೀಂದ್ರ, ಎತ್ನಿಕ್‌ವೇರ್‌, ಕಿಡ್ಸ್‌ ವಿಭಾಗವನ್ನು ಆನಂದ್‌ ಟ್ರಾವೆಲ್ಸ್‌ ನ ಮಾಲಕ ಎ.ಎಂ. ಡಿ’ಸೋಜಾ, ನಟರಾದ ದಯಾ ಶೆಟ್ಟಿ, ಹರೀಶ್‌, ಮೆನ್ಸ್‌ವೇರ್‌ ವಿವಿಧ ವಿಭಾಗವನ್ನು ಉದ್ಯಮಿ ವಾಸುದೇವ ಕಾಮತ್‌, ಲೆಕ್ಕಪರಿಶೋಧಕ ನವೀನ್‌ ನಾಯಕ್‌, ಗಾಗ್ರಾ ವಿಭಾಗವನ್ನು ನಟಿ ಅನ್ಶಾ ಉದ್ಘಾಟಿಸಿದರು.

ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌, ಶಾಸಕ ಯಶ್‌ಪಾಲ್‌ ಎ. ಸುವರ್ಣ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಕಾಂಚನ್‌ ಹ್ಯುಂಡೈ ಮಾಲಕ ಪ್ರಸಾದ್‌ರಾಜ್‌ ಕಾಂಚನ್‌, ಸಂಸ್ಥೆಯ ಮಾಲಕರಾದ ವೀರೇಂದ್ರ ಹೆಗ್ಡೆ, ರವೀಂದ್ರ ಹೆಗ್ಡೆ, ಜಯಲಕ್ಷ್ಮೀ ವೀರೇಂದ್ರ ಹೆಗ್ಡೆ, ಅಪರ್ಣಾ ರವೀಂದ್ರ ಹೆಗ್ಡೆ, ಹಿತೈಷಿಗಳು, ಗ್ರಾಹಕರು ಉಪಸ್ಥಿತರಿದ್ದರು. ಶಾಲಿನಿ ಜಿ. ಶಂಕರ್‌ ಪ್ರಥಮ ಗ್ರಾಹಕಿಯಾಗಿ ರೇಷ್ಮೆ ಸೀರೆ ಖರೀದಿಸಿದರು.

ಕರ್ಣಾಟಕ ಬ್ಯಾಂಕ್‌ ವತಿಯಿಂದ ಸಂಸ್ಥೆಯ ಮಾಲಕರನ್ನು ಗೌರವಿಸಲಾಯಿತು. ಅವಿನಾಶ್‌ ಕಾಮತ್‌ ನಿರೂಪಿಸಿ, ವಂದಿಸಿದರು.

ಟೆಕ್ಸ್‌ಟೈಲ್ಸ್‌ ವ್ಯವಹಾರದಲ್ಲಿ 2ನೇ ಸ್ಥಾನ

2ನೇ ಅಂತಸ್ತಿನ ದುಬಾರಿ ಬೆಲೆಯ ಸೀರೆ ವಿಭಾಗ ಉದ್ಘಾಟಿಸಿದ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ, ದೇಶದ ವಿಜ್ಞಾನಿಗಳು ಚಂದ್ರಲೋಕವನ್ನು ಅವಲೋಕಿಸುವ ಅವಕಾಶವನ್ನು ಒದಗಿಸಿಕೊಟ್ಟರೆ, ಜಯಲಕ್ಷ್ಮೀ ಸಿಲ್ಕ್$Õನವರು ಉಡುಪಿಯ ಜನತೆಗೆ ಟೆಕ್ಸ್‌ಟೈಲ್ಸ್‌ನ ಅವಲೋಕನ ಮಾಡಿಸಿದ್ದಾರೆ. ಕ್ವಾಲಿಟಿ, ಗ್ಯಾರಂಟಿ, ಸರ್ವಿಸ್‌ ಸಮರ್ಪಕವಾಗಿದ್ದರೆ ಉದ್ಯಮ ಯಶಸ್ವಿ ಆಗುವುದರಲ್ಲಿ ಅನುಮಾನವಿಲ್ಲ. ರಾಜ್ಯದಲ್ಲಿ ಟೆಕ್ಸ್‌ಟೈಲ್ಸ್‌ ವ್ಯವಹಾರದಲ್ಲಿ 2ನೇ ಸ್ಥಾನ ಗಳಿಸಿದ ಸಂಸ್ಥೆ ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನ ಗಳಿಸಲಿ. ಸಾವಿರಾರು ಜನರಿಗೆ ಉದ್ಯೋಗಾವಕಾಶ ನೀಡಿದ ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.