Maravanthe ಮೀನುಗಾರಿಕಾ ರಸ್ತೆ ಅಭಿವೃದ್ಧಿಗೆ ಮೀನಮೇಷ

| ಹೊರಬಂದರು ಸಂಪರ್ಕಿಸುವ ರಸ್ತೆ ಹೊಂಡಮಯ | ಮೀನುಗಾರಿಕೆಗೆ ಹೊರಟ ಮೀನುಗಾರರಿಗೆ ಸಂಕಷ್ಟ

Team Udayavani, Aug 14, 2024, 2:04 PM IST

Maravanthe, ಮೀನುಗಾರಿಕಾ ರಸ್ತೆ, ಅಭಿವೃದ್ಧಿ, ಮೀನಮೇಷ, irresoluteness, development, Maravanthe, fishing, road

ಮರವಂತೆ: ಇಲ್ಲಿನ ಮೀನುಗಾರಿಕಾ ಹೊರಬಂದರನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಅಭಿವೃದ್ಧಿಗೆ ಕಳೆದ 2-3 ವರ್ಷಗಳಿಂದ ಮೀನಮೇಷ ಎಣಿಸುತ್ತಿದ್ದು, ಇದರಿಂದ ಮೀನು ಸಾಗಾಟಕ್ಕೆ, ಮೀನುಗಾರರಿಗೆ ಬರಲು ತೊಂದರೆಯಾಗುತ್ತಿದೆ.

ಹೆದ್ದಾರಿಯಿಂದ ಮರವಂತೆಯ ಹೊರಬಂದರನ್ನು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು, ಕೇವಲ 500-600 ಮೀ. ಅಷ್ಟೆ ಕಾಂಕ್ರಿಟೀಕರಣಕ್ಕೆ ಬಾಕಿ ಇದೆ. ಇನ್ನುಳಿದ 1 ಕಿ.ಮೀ.ನಷ್ಟು ದೂರದ ರಸ್ತೆಗೆ 3 ವರ್ಷದ ಹಿಂದೆ ಕಾಂಕ್ರೀಟ್‌ ಕಾಮಗಾರಿ ಆಗಿದೆ. ಕಾಮಗಾರಿ ಬಾಕಿ ಇರುವ ಕಡೆ ರಸ್ತೆಯು ಸಂಪೂರ್ಣ ಹೊಂಡಮಯಗೊಂಡಿದ್ದು, ವಾಹನ ಸವಾರರು ಪ್ರಯಾಸಪಟ್ಟುಕೊಂಡು ಸಂಚರಿಸುವಂತಾಗಿದೆ.

ಮೀನು ಸಾಗಾಟಕ್ಕೆ ಸಂಕಷ್ಟ

ಮೀನುಗಾರಿಕಾ ರಜೆ ಮುಗಿಸಿ, ಈಗ ತಾನೇ ಹೊಸ ಋತುವಿನ ಮೀನುಗಾರಿಕೆ ಆರಂಭಗೊಂಡಿದೆ. ಹೆದ್ದಾರಿಯಿಂದ ಮೀನು ಸಾಗಾಟದ ವಾಹನಗಳು ಬಂದರಿಗೆ ಇದೇ ಮಾರ್ಗವಾಗಿ ಬರಬೇಕಿದೆ. ಇದಲ್ಲದೆ ಐಸ್‌ ಪೂರೈಸುವ ವಾಹನಗಳು ಸಹ ಇಲ್ಲಿಂದಲೇ ಸಂಚರಿಸಬೇಕು. ಬೆಳಗ್ಗೆ ಬೇಗ ಮೀನುಗಾರಿಕೆಗೆ ಬರುವ ಮೀನುಗಾರರು ಬೈಕ್‌ನಲ್ಲಿ ಇದೇ ಮಾರ್ಗವಾಗಿ ಬರಬೇಕಿದೆ. ಪ್ರತಿ ನಿತ್ಯ ನೂರಾರು ವಾಹನಗಳು ಇದೇ ಮಾರ್ಗವಾಗಿ ಸಂಚರಿಸುತ್ತವೆ. ಆದರೂ ಈ ರಸ್ತೆಯ ಅಭಿವೃದ್ಧಿಗೆ ಮಾತ್ರ ಪ್ರತೀ ವರ್ಷ ಮೀನಾಮೇಷ ಎಣಿಸುತ್ತಿದ್ದಾರೆ.

ಎಲ್ಲರಿಗೂ ಮನವಿ

ಮರವಂತೆ ಮೀನುಗಾರಿಕಾ ಹೊರಬಂದರು ಸಂಪರ್ಕಿಸುವ ರಸ್ತೆಯ 500 ಮೀ. ನಷ್ಟು ದೂರದವರೆಗಿನ ಕಾಂಕ್ರಿಟೀಕರಣ ಬಾಕಿಯಿದೆ. ಇದರ ಅಭಿವೃದ್ಧಿಗೆ ಅನುದಾನ ನೀಡುವಂತೆ ನಾವು ಪಂಚಾಯತ್‌ ವತಿಯಿಂದ ಶಾಸಕರು, ಸಂಸದರು ಹಾಗೂ ಮೀನುಗಾರಿಕಾ ಸಚಿವರಿಗೂ ಮನವಿ ಕೊಟ್ಟಿದ್ದೇವೆ. ಅನುದಾನ ಕೊಡುವ ಭರವಸೆ ನೀಡಿದ್ದಾರೆ. – ಲೋಕೇಶ್‌ ಖಾರ್ವಿ, ಅಧ್ಯಕ್ಷರು, ಮರವಂತೆ ಗ್ರಾ.ಪಂ.

ಇನ್ನೆಷ್ಟು ವರ್ಷ ಬೇಕು?

ಕಳೆದ 2-3 ವರ್ಷಗಳಿಂದ ಈ ರಸ್ತೆಯನ್ನು ಅಭಿವೃದ್ಧಿಪಡಿಸಿ ಎಂದು ನಾವು ಇಲ್ಲಿಗೆ ಭೇಟಿ ನೀಡಿದ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ಮೀನುಗಾರಿಕಾ ಇಲಾಖೆಯವರಿಗೂ ಮನವಿ ಮಾಡಿಕೊಂಡಿದ್ದೇವೆ. ಆದರೆ ಈವರೆಗೆ ಬಾಕಿ ಉಳಿದ ರಸ್ತೆಯ

ಅಭಿವೃದ್ಧಿ ಬಗ್ಗೆ ಮಾತ್ರ ಯಾರೂ ಗಮನಹರಿಸುತ್ತಿಲ್ಲ. ಇಲ್ಲಿ ಸುಮಾರು 200 ಕ್ಕೂ ಮಿಕ್ಕಿ ದೋಣಿಗಳಿವೆ. ಸುಮಾರು 5 ಸಾವಿರದಷ್ಟು ಮೀನುಗಾರರಿಗೆ ಈ ಬಂದರು ಜೀವನಾಧಾರವಾಗಿದೆ. ಈ ರಸ್ತೆಯ ಅಭಿವೃದ್ಧಿಗೆ ಇನ್ನೆಷ್ಟು ವರ್ಷ ಬೇಕು ಎನ್ನುವುದಾಗಿ ಮೀನುಗಾರರು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.