ಕಲ್ಯಾಣಪುರ ಸಂತೆಕಟ್ಟೆ ಓವರ್‌ಪಾಸ್‌: 3 ಪಾಳಿ ಕೆಲಸಕ್ಕೆ ಸೂಚನೆ

ಸಂತೆಕಟ್ಟೆ ಓವರ್‌ ಪಾಸ್‌ 21.26 ಕೋ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ.

Team Udayavani, Jan 13, 2023, 2:25 PM IST

ಕಲ್ಯಾಣಪುರ ಸಂತೆಕಟ್ಟೆ ಓವರ್‌ಪಾಸ್‌: 3 ಪಾಳಿ ಕೆಲಸಕ್ಕೆ ಸೂಚನೆ

ಉಡುಪಿ: ಸಂತೆಕಟ್ಟೆ ಓವರ್‌ ಪಾಸ್‌ ಕಾಮಗಾರಿಯನ್ನು ಮೂರು ಪಾಳಿಯಲ್ಲಿ ನಿರ್ವಹಿಸುವ ಮೂಲಕ ಮಳೆ ಶುರುವಾಗುವ ಮುನ್ನ ಮೇ-ಜೂನ್‌ ಒಳಗೆ ಬಹುತೇಕ ಪ್ರಮುಖ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲು ಹೆದ್ದಾರಿ ಎಂಜಿನಿಯರ್‌ ಗಳಿಗೆ ಮತ್ತು ಗುತ್ತಿಗೆ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಗುರುವಾರ ರಾ. ಹೆ. 66 ಸಂತೆಕಟ್ಟೆ ಓವರ್‌ ಪಾಸ್‌ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮಳೆಗಾಲದ ಒಳಗೆ ಡಿಗ್ಗಿಂಗ್‌ನಂತಹ ಪ್ರಮುಖ ಕಾಮಗಾರಿ ಪೂರ್ಣಗೊಳಿಸುವುದು ಮುಖ್ಯವಾಗಿದೆ.ಒಂದು ವರ್ಷದ ಒಳಗೆ ಓವರ್‌ಪಾಸ್‌ ವ್ಯವಸ್ಥಿತವಾಗಿ ಪೂರ್ಣಗೊಳ್ಳಬೇಕು.

ಸರ್ವಿಸ್‌ ರಸ್ತೆಯನ್ನು ಅಂಬಾಗಿಲುವರೆಗೆ ವಿಸ್ತರಿಸಲಾಗುತ್ತದೆ. ಈ ಬಗ್ಗೆ ಡಿಸಿ, ಎಸ್‌ಪಿ ಅವರು ನಿರಂತರ ನಿಗಾ ವಹಿಸಲಿದ್ದಾರೆ. ಕಾಮಗಾರಿ ಮುಗಿಯುವವರೆಗೆ ಜನತೆಯೂ ಸಹಕಾರ ನೀಡಬೇಕು. ಸಂಚಾರದಟ್ಟಣೆಯಿಂದ ಜನರಿಗೆ ಹೆಚ್ಚು ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಿರ್ವಹಿಸುವ ಬಗ್ಗೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಎಚ್ಚರವಹಿಸಿ ಕಾಮಗಾರಿ ನಿರ್ವಹಿಸಬೇಕು ಎಂದರು.

ಕಟಪಾಡಿ, ಪಡುಬಿದ್ರಿ ಜಂಕ್ಷನ್‌ಗೂ ಮುಕ್ತಿ
ಹಿಂದಿನ ಸರಕಾರ ಅವೈಜ್ಞಾನಿಕ ಡಿಪಿಆರ್‌ ನಿಂದ ರಸ್ತೆ ನಿರ್ಮಿಸಿದ್ದು, ಸಾಕಷ್ಟು ವರ್ಷ ಜನರು ತೊಂದರೆಗೊಳಗಾಗುವಂತೆ ಆಗಿದೆ. ಬಹುತೇಕ ಕಡೆಗಳಲ್ಲಿ ಸರ್ವಿಸ್‌ ರಸ್ತೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಸಂತೆಕಟ್ಟೆ ಜಂಕ್ಷನ್‌ ಅಪಘಾತ ವಲಯವಾಗಿ ಜನರಿಗೆ ಸಂಕಷ್ಟವಾಗಿ ಪರಿಣಮಿಸಿತ್ತು. ಜನರ ಬಹುಕಾಲದ ಓವರ್‌ಪಾಸ್‌ ಬೇಡಿಕೆಯನ್ನು ಕೇಂದ್ರ ಸರಕಾರದ ಈಡೇರಿಸಿದೆ.

ಸಂತೆಕಟ್ಟೆ ಓವರ್‌ ಪಾಸ್‌ 21.26 ಕೋ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಅಂಬಲಪಾಡಿಯಲ್ಲಿಯೂ ಓವರ್‌ಪಾಸ್‌ ನಿರ್ಮಾಣದ ಕೆಲಸ ಒಂದು ತಿಂಗಳ ಒಳಗೆ ಶುರುವಾಗಲಿದೆ. ಕಟಪಾಡಿ, ಪಡುಬಿದ್ರಿ ಜಂಕ್ಷನ್‌ ಸಮಸ್ಯೆಗೂ ಶೀಘ್ರ ಮುಕ್ತಿ ಕಲ್ಪಿಸಲಾಗುವುದು ಎಂದು ಶೋಭಾ ತಿಳಿಸಿದರು.

ಗುಣಮಟ್ಟದ ಕಾಮಗಾರಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಯಾವುದೇ ಕಾರಣಕ್ಕೂ ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲಿ ಟ್ರಾಫಿಕ್‌ ಸಮಸ್ಯೆಯಾದಲ್ಲಿ ದೊಡ್ಡಮಟ್ಟದಲ್ಲಿ ತೊಂದರೆಯಾಗುತ್ತದೆ. ಗಡಿಬಿಡಿಯಲ್ಲಿ ಕೆಲಸ ಮಾಡದೆ ವಾಹನ ಸವಾರರ ಪರ್ಯಾಯ ರಸ್ತೆ ಬಳಕೆಗೆ ಸರಿಯಾದ ವ್ಯವಸ್ಥೆಗಳನ್ನು ಮಾಡಿಕೊಡಬೇಕು. ಗುತ್ತಿಗೆದಾರರು, ಹೆದ್ದಾರಿ ಎಂಜಿನಿಯರ್‌ ಅವರು ಎಸ್‌ಪಿ ಮತ್ತು ಡಿಸಿ ಅವರಲ್ಲಿ ಕಾಮಗಾರಿ ಪೂರ್ಣಗೊಳ್ಳುವ
ಅವಧಿಯನ್ನು ಸ್ಪಷ್ಟವಾಗಿ ತಿಳಿಸಬೇಕು. ಕಳಪೆ ಕಾಮಗಾರಿ ಆಗದಂತೆ ಗುಣಮಟ್ಟದ ಕೆಲಸಕ್ಕೆ ಒತ್ತು ನೀಡಬೇಕು. ವೈಜ್ಞಾನಿಕವಾಗಿ ಓವರ್‌ ಪಾಸ್‌ ನಿರ್ಮಾಣಗೊಳ್ಳಬೇಕು. ಟ್ರಾಫಿಕ್‌ ವ್ಯವಸ್ಥೆಯನ್ನು ತಾಂತ್ರಿಕವಾಗಿ ನಿರ್ವಹಿಸುವ ಬಗ್ಗೆ ಸರಿಯಾದ ಯೋಜನೆ ರೂಪಿಸಬೇಕು ಎಂದು ರಾ. ಹೆ. ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್‌, ನಗರಾ ಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್‌ ಎಸ್‌. ಕಲ್ಮಾಡಿ, ನಗರಸಭಾ ಸದಸ್ಯೆ ಮಂಜುಳಾ ವಿ. ನಾಯಕ್‌, ನಾಮನಿರ್ದೇಶಿತ ಸದಸ್ಯರಾದ ದಿನೇಶ್‌ ಪೈ, ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ., ಜಿಲ್ಲಾ ಪೊಲೀಸ್‌ ಅಧೀಕ್ಷಕ ಅಕ್ಷಯ್‌ ಹಾಕೆ ಮಚ್ಚೀಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾ.ಹೆ ಯೋಜನಾ
ನಿರ್ದೇಶಕ ಲಿಂಗೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.