ತಾಯ್ನಾಡಿಗೆ ಬರಲು ಕಾಯುತ್ತಿರುವ ಕೊಲ್ಲಿಯ 5 ರಾಷ್ಟ್ರಗಳ ಕರಾವಳಿಗರು


Team Udayavani, May 13, 2020, 6:28 AM IST

ತಾಯ್ನಾಡಿಗೆ ಬರಲು ಕಾಯುತ್ತಿರುವ ಕೊಲ್ಲಿಯ 5 ರಾಷ್ಟ್ರಗಳ ಕರಾವಳಿಗರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಉಡುಪಿ: ಮಂಗಳವಾರ ರಾತ್ರಿ ದುಬಾೖಯಿಂದ ಕರಾವಳಿ ಕನ್ನಡಿಗರ ಮೊದಲ ತಂಡ ತಾಯ್ನಾಡಿಗೆ ಬಂದಿಳಿದಿದ್ದರೆ ಅಲ್ಲೇ ಅಕ್ಕಪಕ್ಕದಲ್ಲಿರುವ ಕತಾರ್‌, ಬಹ್ರೈನ್‌, ಸೌದಿ ಅರೇಬಿಯ, ಒಮಾನ್‌, ಕುವೈಟ್‌ಗಳಲ್ಲಿರುವ ಕರಾವಳಿ ಕನ್ನಡಿಗರೂ ಕಾತರದಿಂದ ಕಾಯುತ್ತಿದ್ದಾರೆ.

ಕತಾರ್‌ನಿಂದ ಸುಮಾರು 1,300 ಜನರು ಊರಿಗೆ ಬರಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಅವರಲ್ಲಿ ಕರ್ನಾಟಕ ಕರಾವಳಿಯವರೇ ಹೆಚ್ಚು. ಬೆಂಗಳೂರು, ಮೈಸೂರು, ಮಂಡ್ಯ ಮೊದಲಾದೆಡೆ ಹೋಗುವವರು ಬೆಂಗಳೂರಿನ ಮೂಲಕ ಹೋಗುವವರಾದರೆ, ಅತ್ತ ಕಾಸರಗೋಡು, ಇತ್ತ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಭಟ್ಕಳ, ಬೈಂದೂರಿನವರೆಗೆ ಹೋಗುವವರು ಮಂಗಳೂರನ್ನು ಆಶ್ರಯಿಸಬೇಕಾಗಿದೆ.

ಈಗ ಬೆಂಗಳೂರಿಗೆ ವಿಮಾನ ಯಾನಕ್ಕೆ ತಾತ್ವಿಕ ಸಮ್ಮತಿಯಾಗಿದ್ದರೂ ಮಂಗಳೂರಿಗೆ ಆಗಿಲ್ಲ ಎನ್ನುವ ಕೊರಗು ಕತಾರ್‌ನಲ್ಲಿರುವ ಕರಾವಳಿ ಭಾಗದವರಿಗೆ ಇದೆ ಎನ್ನುತ್ತಾರೆ ಕತಾರ್‌ನಲ್ಲಿರುವ ಭಾರತೀಯ ಸಮುದಾಯ ಹಿತೈಷಿ ಸಮಿತಿಯ ಮುಂದಾಳು ಸುಬ್ರಹ್ಮಣ್ಯ ಹೆಬ್ಟಾಗಿಲು.

ಅಮೆರಿಕ, ಇಂಗ್ಲೆಂಡ್‌, ಜರ್ಮನಿ ಇತ್ಯಾದಿ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೂ ಕೊಲ್ಲಿ ರಾಷ್ಟ್ರಗಳಲ್ಲಿರುವವರಿಗೂ ಅಜಗಜಾಂತರವಿದೆ. ಆ ದೇಶಗಳಲ್ಲಿರುವವರು ಐಟಿ, ಬಿಟಿ ವೈಟ್‌ಕಾಲರ್‌ ವ್ಯಕ್ತಿಗಳಾದರೆ, ಕೊಲ್ಲಿ ರಾಷ್ಟ್ರದಲ್ಲಿರುವ ಹೆಚ್ಚಿನವರು ಕಾರ್ಮಿಕ ವರ್ಗದವರು.

ಲಾಕ್‌ಡೌನ್‌ ಕಾರಣ ಶಾಪಿಂಗ್‌ ಮಾಲ್‌ಗ‌ಳು, ಸೆಲೂನ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು ಬಂದ್‌ ಆಗಿವೆ. ಅಂತಹ ಕಡೆಗಳಲ್ಲಿ ಉದ್ಯೋಗ ನಿರತ ಕರಾವಳಿಯ ಮಂದಿ ಅತಂತ್ರರಾಗಿದ್ದು, ಊರಿನತ್ತ ಮುಖಮಾಡುವುದು ಅನಿವಾರ್ಯವಾಗಿದೆ ಎನ್ನುತ್ತಾರೆ ಮಂಗಳೂರು ಕಾಪಿಕಾಡಿನ ಪ್ರದೀಪ್‌.

ಕರ್ನಾಟಕ ಕರಾವಳಿಯವರ ಆರ್ಥಿಕ ಚಟುವಟಿಕೆ ನಿಂತಿರುವುದೇ ಕೊಲ್ಲಿ ರಾಷ್ಟ್ರಗಳಲ್ಲಿ ದುಡಿಯುವವರ ಮೇಲೆ. ಒಂದು ವೇಳೆ ಇವರ ಆದಾಯದ ಮೇಲೆ ಏಟು ಬಿದ್ದರೆ ಕರಾವಳಿಯ ಆರ್ಥಿಕತೆ ಚಿತ್ರಣವೇ ಬದಲಾಗುವ ಅಪಾಯವಿದೆ.

ನಾವು ಶೇ. 100 ಜನರು ತಾಯ್ನಾಡಿಗೆ ಬರುವುದಿಲ್ಲ. ಆದ್ಯತೆ ಮೇಲೆ ಬರುತ್ತಿದ್ದೇವೆ ಎಂದು ಕೊಲ್ಲಿ ರಾಷ್ಟ್ರದ ಕರಾವಳಿ ಕನ್ನಡಿಗರು ಕೇಂದ್ರ ಸರಕಾರವನ್ನು ಕೋರಿಕೊಂಡಿದ್ದಾರೆ. ಐದೂ ದೇಶಗಳಿಂದ ಬರಲು ವಿಮಾನ ಯಾನ ಕಲ್ಪಿಸಿದರೆ ನಾಲ್ಕೈದು ಸಾವಿರ ಜನರು ಹುಟ್ಟೂರಿಗೆ ಬರುವ ಸಾಧ್ಯತೆ ಇದೆ. ದುಬಾೖಯಿಂದ ಬರುವವರಿಗೆ ಇನ್ನೂ ಹೆಚ್ಚುವರಿ ವಿಮಾನ ಯಾನದ ಅಗತ್ಯವಿದೆ.

ಮಂಗಳೂರಿಗೆ ಆಗಮಿಸಲು ನಿರ್ಧರಿಸಿದ್ದೆವು. ಆದರೆ ತುರ್ತು ಆವಶ್ಯಕತೆಯವರಿಗೆ ಆದ್ಯತೆ ಎಂದ ಕಾರಣ ನಮಗೆ ಅವಕಾಶ ಲಭಿಸಿಲ್ಲ.
– ಪ್ರದೀಪ್‌, ದುಬಾೖ ನಿವಾಸಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.