Karkala: ತಾಲೂಕು ಕೇಂದ್ರವಾದರೂ ಹೆಬ್ರಿಗಿಲ್ಲ ರೈತ ಸಂಪರ್ಕ ಕೇಂದ್ರ

ಬಹುತೇಕ ಗ್ರಾಮಗಳಿಗೆ ಆ ಕಡೆ ಅಜೆಕಾರು ಕೇಂದ್ರವೂ ದೂರ; ಈ ಕಡೆ ಕುಂದಾಪುರವೂ ದೂರ!

Team Udayavani, Aug 19, 2024, 4:23 PM IST

Karkala: ತಾ| ಕೇಂದ್ರವಾದರೂ ಹೆಬ್ರಿಗಿಲ್ಲ ರೈತ ಸಂಪರ್ಕ ಕೇಂದ್ರ

ಕಾರ್ಕಳ: ಹೆಬ್ರಿಯನ್ನು ತಾಲೂಕು ಕೇಂದ್ರವಾಗಿ ಘೋಷಿಸಿದ್ದರೂ ಇಲಾಖೆಗಳಲ್ಲಿನ ಸವಲತ್ತುಗಳನ್ನು ಇನ್ನೂ ಒದಗಿಸಿಲ್ಲ. ಅದರಲ್ಲಿ ರೈತರಿಗೆ ಅತೀ ಮುಖ್ಯವಾದ ರೈತ ಸಂಪರ್ಕ ಕೇಂದ್ರವೇ ಹೆಬ್ರಿಗೆ ಸಿಕ್ಕಿಲ್ಲ.  ಇಲ್ಲಿನ ರೈತರು ಒಂದೋ ಕಾರ್ಕಳ ತಾಲೂಕಿನ ವ್ಯಾಪ್ತಿಗೆ ಬರುವ  ಅಜೆಕಾರು, ಇಲ್ಲವೇ ಕುಂದಾಪುರದ ರೈತ ಸಂಪರ್ಕ ಕೇಂದ್ರವನ್ನೇ ಅವಲಂಬಿಸಬೇಕಾಗಿದೆ.

ಕಾರ್ಕಳ ತಾಲೂಕಿನಲ್ಲಿ  ಕಾರ್ಕಳ ಹಾಗೂ  ಅಜೆಕಾರಿನ ಹೋಬಳಿ ಕೇಂದ್ರದಲ್ಲಿ ರೈತ ಸಂಪರ್ಕ ಕೇಂದ್ರಗಳಿವೆ. ಹೆಬ್ರಿ ತಾಲೂಕು ಹೊಸದಾಗಿ ರಚನೆಯಾಗಿದ್ದು ಹೋಬಳಿಗಳ ನಿರ್ಮಾಣವಾಗಲೀ, ರೈತ ಸಂಪರ್ಕ ಕೇಂದ್ರವಾಗಲೀ ಆಗಿಲ್ಲ. ಹೀಗಾಗಿ ಹೆಬ್ರಿ ತಾಲೂಕಿನ ಗ್ರಾಮಗಳು ಅಜೆಕಾರು ಮತ್ತು ಕುಂದಾಪುರ ಹೋಬಳಿಗಳಲ್ಲಿ ಹಂಚಿ ಹೋಗಿವೆ.

ಕಾರ್ಕಳ ತಾಲೂಕಿನ 7 ಹಾಗೂ ಹೆಬ್ರಿ ತಾಲೂಕಿನ 6 ಸೇರಿ ಒಟ್ಟು 13 ಗ್ರಾಮಗಳು  ಅಜೆಕಾರು ರೈತ ಸಂಪರ್ಕ ಕೇಂದ್ರದ  ವ್ಯಾಪ್ತಿ ಬರುತ್ತವೆ.  ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ, ಶಿರ್ಲಾಲು, ಮಾಳ, ಹಿರ್ಗಾನ, ಯರ್ಲಪಾಡಿ, ಕಡ್ತಲ, ಹೆಬ್ರಿ ತಾಲೂಕಿನ ಹೆಬ್ರಿ,

ವರಂಗ, ನಾಡ್ಪಾಲು, ಬೆಳಂಜೆ, ಚಾರ, ಶಿವಪುರ ಗ್ರಾಮಗಳು  ಅಜೆಕಾರು ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯಲ್ಲಿ ಬರುತ್ತವೆ. ಹೆಬ್ರಿ ತಾಲೂಕಿನ ಗ್ರಾಮಗಳಾದ ಬೆಳ್ವೆ ಅಲ್ಬಾಡಿ, ಮಡಾಮಕ್ಕಿ, ಶೇಡಿಮನೆ, ಗ್ರಾಮಗಳು ಕುಂದಾಪುರ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಆಶ್ರಯಿಸಿವೆ.

ಹೆಬ್ರಿಯಲ್ಲೇ ಇದ್ದರೆ ಏನೇನು ಲಾಭ?

ಹೆಬ್ರಿಯಲ್ಲೇ  ರೈತ ಸಂಪರ್ಕ ಕೇಂದ್ರ ಸ್ಥಾಪನೆಯಾದರೆ ಸರಕಾರ ನೀಡುವ ಬಿತ್ತನೆ ಬೀಜಗಳು, ಗೊಬ್ಬರಗಳು, ಕೃಷಿ ಪರಿಕರಗಳು  ಸೇರಿದಂತೆ  ಅನೇಕ ಸೇವೆಗಳು ಸ್ಥಳೀಯ ಮಟ್ಟದಲ್ಲೇ ಅಂದರೆ 15 ಕಿ.ಮೀ. ಅಂತರದಲ್ಲಿ ದೊರಕಲಿವೆ.

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪ

ಹೆಬ್ರಿ ತಾಲೂಕಿನಲ್ಲಿ ರೈತ ಸಂಪರ್ಕ ಕೇಂದ್ರ  ಇಲ್ಲದೆ ಇರುವುದರಿಂದ ರೈತರಿಗೆ ಆಗುವ ತೊಂದರೆಗಳ ಕುರಿತು  ಹಲವು ಬಾರಿ ಸರಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ಇತ್ತೀಚೆಗೆ ಜನಸಂಪರ್ಕ ಸಭೆಯಲ್ಲೂ  ಒತ್ತಾಯ ಕೇಳಿಬಂದಿತ್ತು.

ಸರಕಾರದಿಂದ ಅನುಮೋದನೆ ಅಗತ್ಯ

ತಾಲೂಕು ಹಾಗೂ ಹೋಬಳಿ ಕೇಂದ್ರವಾಗಿರುವ ಹೆಬ್ರಿಯಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸಿ, ಕೇಂದ್ರಕ್ಕೆ ಅವಶ್ಯವಿರುವ ಹುದ್ದೆಗಳ ಸೃಜನೆಗೆ ಸರಕಾರದಿಂದ  ಅನುಮೋದನೆ ದೊರೆಯಬೇಕಾಗಿದೆ.

ಅನುಮೋದನೆ ಸಿಗಬೇಕಿದೆ

ಹೆಬ್ರಿ ಹೋಬಳಿಯಲ್ಲಿ ರೈತ ಸಂಪರ್ಕ ಕೇಂದ್ರವಾದಲ್ಲಿ ರೈತರಿಗೆ ತುಂಬಾ ಅನುಕೂಲ. ರೈತರಿಗೆ ಇದರಿಂದ ಹೆಚ್ಚಿನ ಪ್ರಯೋಜನ  ಪಡೆದುಕೊಳ್ಳಲು ಸಹಕಾರಿಯಾಗುತ್ತದೆ. ರೈತರು ಬೇಡಿಕೆ ಸಂಬಂಧ ಮನವಿ ಮಾಡಿದ್ದು ಸರಕಾರದಿಂದ ಅನುಮೋದನೆಗೊಂಡಲ್ಲಿ ಈಡೇರಲಿದೆ. -ಸಿದ್ಧಪ್ಪ , ಕೃಷಿ ಅಧಿಕಾರಿ, ಕೃಷಿ ಇಲಾಖೆ ಕಾರ್ಕಳ

ರೈತರಿಗೆ ಸಂಪರ್ಕವೇ ಸಿಗುತ್ತಿಲ್ಲ!

ಹೆಬ್ರಿ ತಾಲೂಕಿನ ಹೆಬ್ರಿ, ವರಂಗ, ನಾಡ್ಪಾಲು, ಬೆಳಂಜೆ, ಚಾರ, ಶಿವಪುರ ಗ್ರಾಮಗಳು ಅಜೆಕಾರು ರೈತ ಸಂಪರ್ಕ ಕೇಂದ್ರಕ್ಕೆ, ಕುಂದಾಪುರದ ತಾಲೂಕಿನ ಬೆಳ್ವೆ ಅಲ್ಬಾಡಿ, ಮಡಾಮಕ್ಕಿ, ಶೇಡಿ ಮನೆಗಳು ಕುಂದಾಪುರ ಕೇಂದ್ರಕ್ಕೆ ಸಂಪರ್ಕ ಹೊಂದಿವೆ.  ಹೆಬ್ರಿ, ನಾಡ್ಪಾಲು, ಬೆಳಂಜೆ, ಚಾರ ಶಿವಪುರ ಗ್ರಾಮಗಳು  ಅಜೆಕಾರು ರೈತ ಸಂಪರ್ಕ ಕೇಂದ್ರದಿಂದ ಸುಮಾರು 20-27 ಕಿಮೀ ದೂರದಲ್ಲಿವೆ. ಅದೇ  ಬೆಳ್ವೆ ಅಲ್ಬಾಡಿ, ಮಡಾಮಕ್ಕಿ, ಶೇಡಿಮನೆ ಗ್ರಾಮಗಳು ಕುಂದಾಪುರದಿಂದ 35 ಕಿ.ಮೀ. ದೂರದಲ್ಲಿದೆ. ಇದರಿಂದ ಹೆಬ್ರಿಯ ಕೃಷಿಕರಿಗೆ ರೈತ ಸಂಪರ್ಕ ಕೇಂದ್ರಗಳ ಪ್ರಯೋಜನ ಪಡೆಯುವುದು ಕಷ್ಟವಾಗಿದೆ.

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

highcourt

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

highcourt

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.