KBC: ಕೆಬಿಸಿಯಲ್ಲಿ 12.5 ಲ.ರೂ.ಗೆದ್ದ ಕಾರ್ಕಳ ಮೂಲದ ಡಾ| ಶ್ರೀಶ್ ಶೆಟ್ಟಿ
Team Udayavani, Oct 12, 2024, 3:02 PM IST
ಶಿರ್ವ: ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಯಲ್ಲಿ ಕರಾವಳಿ ಮೂಲದ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ| ಶ್ರೀಶ್ ಸತೀಶ್ ಶೆಟ್ಟಿ ಅವರು 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಗೆದ್ದುಕೊಂಡಿದ್ದಾರೆ. ಅ. 10 ಮತ್ತು 11 ರಂದು ಅವರ ಸಂಚಿಕೆ ಪ್ರಸಾರಗೊಂಡಿದೆ.
ಡಾ| ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದರು. 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟತೆ ಇರದೇ ಇದ್ದುದರಿಂದ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ| ಶ್ರೀಶ್ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರಿವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ದೇವಿ ನಿಲಯ ಸತೀಶ್ ಶೆಟ್ಟಿಯವರ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ.
ಗುಜರಾತ್ ವಲ್ಸಡ್ನ ಜಿಎಂಇಆರ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ)ಪದವಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ
Udupi;ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ʼನಿʼ-ಶತಾಭಿವಂದನಂ
2025ಕ್ಕೆ ಬಾಲಿವುಡ್ಗೆ ಸೀಕ್ವೆಲ್ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ
Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.