![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 28, 2020, 7:51 AM IST
ಸೋಮವಾರ ಬೆಳಿಗ್ಗೆ ಬ್ರಹ್ಮಾವರದಲ್ಲಿ ಕಂಡುಬಂದ ದೃಶ್ಯ
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಕರಾವಳಿ ಜಿಲ್ಲೆ ಉಡುಪಿಯಲ್ಲಿ ಅಲ್ಪ ಪ್ರಮಾಣದ ಬೆಂಬಲ ವ್ಯಕ್ತವಾಗಿದೆ.
ಉಡುಪಿಯಲ್ಲಿ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಗಳ ಓಡಾಟ ಎಂದಿನಂತೆ ಮುಂದುವರಿಸಲು ನಿರ್ಧರಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ಸಂಚರಿಸುವ ಸರ್ವಿಸ್ ಬಸ್ ಗಳ ಓಡಾಟ ಎಂದಿನಂತೆ ಇದೆ. ಉಡುಪಿ ಸಿಟಿ ಬಸ್ ಗಳು ಕೂಡಾ ಸಂಚಾರ ಸ್ಥಿಗಿತಗೊಳಿಸದಿರಲು ನಿರ್ಧರಿಸಿವೆಯಾದರೂ, ಬಸ್ ಗಳು ವಿರಳವಾಗಿದೆ.
ಇದನ್ನೂ ಓದಿ:ಕರ್ನಾಟಕ ಬಂದ್: ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ
ಕೆಎಸ್ ಆರ್ ಟಿಸಿ, ನರ್ಮ್ ಬಸ್ ಗಳು ಎಂದಿನಂತೆ ರಸ್ತೆಗಿಳಿದಿದೆ. ಆಟೋ ಸಂಚಾರ ಕೂಡಾ ಸಹಜವಾಗಿದೆ. ಸರಿಯಾದ ಮಾಹಿತಿ ಕೊರತೆಯಿಂದ ಜನರ ಓಡಾಟ ವಿರಳವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ
ಸಂಘಟನೆಗಳ ಮನವಿ: ಬಂದ್ ಕರೆಕೊಟ್ಟಿದ್ದರೂ ಕೂಡಾ ಬಸ್ ಸಂಚಾರ ಎಂದಿನಂತಿರುವ ಕಾರಣ ಬಸ್ ಬಂದ್ ಮಾಡಬೇಕು, ಬಂದ್ ಗೆ ಬೆಂಬಲ ನೀಡಬೇಕು ಎಂದು ಸಂಘಟನೆಗಳು ಮನವಿ ಮಾಡುತ್ತಿವೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.